Featured

ಮಂಗಳೂರು: ಕುಚ್ಚಲಕ್ಕಿ ಬೆಲೆಯಲ್ಲಿ ಭಾರಿ ಏರಿಕೆ – ಕಂಗಾಲಾದ ಕರಾವಳಿಯ ಜನತೆ – Vishwanews24

ಮಂಗಳೂರು: ಕುಚ್ಚಲಕ್ಕಿ ಬೆಲೆಯಲ್ಲಿ ಭಾರಿ ಏರಿಕೆ – ಕಂಗಾಲಾದ ಕರಾವಳಿಯ ಜನತೆ

ಮಂಗಳೂರು: ಕುಚ್ಚಲಕ್ಕಿ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಕೆ.ಜಿ.ಗೆ 15ರಿಂದ 20 ರೂ. ಹೆಚ್ಚಳವಾಗಿ 48 ರಿಂದ 50 ರೂ. ನಲ್ಲಿ ಮಾರಾಟವಾಗುತ್ತಿರುವ ಹಿನ್ನಲೆಯಲ್ಲಿ ಕರಾವಳಿಯ ಜನತೆ ಕಂಗಾಲಾಗಿದ್ದಾರೆ.

ಕುಚ್ಚಲಕ್ಕಿ ಬೆಲೆಯಲ್ಲಿ ಭಾರೀ ಹೆಚ್ಚಳವಾದರೂ, ಭತ್ತದ ಬೆಲೆ ಕೆ.ಜಿ.ಗೆ 2-3 ರೂ. ಮಾತ್ರ ಏರಿಕೆಯಾಗಿದೆ ಎಂದು ರೈತರು ಬೇಸರ ವ್ಯಕ್ತಪಡಿಸಿದ್ದಾರೆ.

ಇನ್ನ್ನು ಖಾಸಗಿ ಮಿಲ್‌ಗ‌ಳಲ್ಲಿ ಸ್ಥಳೀಯ ಭತ್ತಕ್ಕೆ ಕ್ವಿಂಟಾಲ್‌ಗೆ 2,500-2,600 ರೂ. ಇದೆ. ಕಟಾವು ಚುರುಕುಗೊಂಡ ತಕ್ಷಣ ಬೆಲೆ ಇಳಿಮುಖವಾಗುವ ಭೀತಿಯೂ ಎದುರಾಗಿದೆ.

ಕರಾವಳಿ ಸೇರಿದಂತೆ ಮಲೆನಾಡು, ಬಯಲುಸೀಮೆ ಭಾಗದಲ್ಲೂ ಕಾರ್ಮಿಕರ ಕೊರತೆ, ಬೆಲೆಯ ಅಸ್ಥಿರತೆ ಇತ್ಯಾದಿ ಕಾರಣಕ್ಕೆ ಭತ್ತದ ಬೇಸಾಯ ಕುಸಿತ ಕಂಡಿದ್ದು, ಇದರಿಂದಾಗಿ ಕುಚ್ಚಲಕ್ಕಿ ಬೆಲೆ ಏರಿಕೆಯಾಗಿದೆ. ಆದರೆ ಮಧ್ಯವರ್ತಿಗಳು ಭತ್ತದ ಬೆಳೆಯನ್ನು ಏರದಂತೆ ತಡೆಯುತ್ತಿದ್ದಾರೆ ಎಂದು ರೈತರು ಆರೋಪವನ್ನು ಮಾಡುತ್ತಿದ್ದಾರೆ.

ಭತ್ತ ಹಾಗೂ ಅಕ್ಕಿ ನಡುವಿನ ಬೆಲೆ ವ್ಯತ್ಯಾಸವನ್ನು ಸರಿಪಡಿಸಿ ರೈತರಿಗೆ ನ್ಯಾಯ ಒದಗಿಸಲು ಸರಕಾರ ಮಧ್ಯಪ್ರವೇಶಿಸಿ ಕೂಡಲೇ ಭತ್ತಕ್ಕೆ ಹೆಚ್ಚಿನ ಬೆಂಬಲ ಬೆಲೆ ನಿಗದಿಪಡಿಸಬೇಕು. ಅದಕ್ಕಿಂತ ಕಡಿಮೆ ಬೆಲೆಯಲ್ಲಿ ಭತ್ತ ಖರೀದಿಸದಂತೆ ಖಾಸಗಿಯವರಿಗೆ ಕಡಿವಾಣ ಹಾಕುವ ವ್ಯವಸ್ಥೆ ಜಾರಿಯಾಗಬೇಕು ಎಂದು ರೈತರು ಆಗ್ರಹಿಸಿದ್ದಾರೆ.

Vishwa News 24

Recent Posts

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ -vishwanews24

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…

8 hours ago

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

18 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

18 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

18 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

1 day ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

1 day ago