ಮಂಗಳೂರು: ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನದ ಷಷ್ಟಿ ಮಹೋತ್ಸವದ ಜಾತ್ರೆ ವ್ಯಾಪಾರದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಮಧ್ಯೆ ವ್ಯಾಪಾರಿಗಳು ಡಿವೈಎಫ್ಐ ನೇತೃತ್ವದಲ್ಲಿ ದ.ಕ.ಜಿಲ್ಲಾಧಿಕಾರಿಗೆ ದೂರು ನೀಡಲು ಸಜ್ಜಾಗಿದ್ದಾರೆ ಎಂದು ತಿಳಿದು ಬಂದಿದೆ.
ಡಿ.14ರಿಂದ 19ವರೆಗೆ ಇಲ್ಲಿ ಜಾತ್ರೆ ನಡೆಯಲಿದೆ. ಈ ಜಾತ್ರೆ ಮಹೋತ್ಸವದಲ್ಲಿ ವ್ಯಾಪಾರ ಮಾಡಲು ಮುಸ್ಲಿಮರು ಪೂರಕ ಪ್ರಕ್ರಿಯೆ ನಡೆಸಲು ಮುಂದಾದಾಗ “ನಿಮಗೆ ರಕ್ಷಣೆ ನೀಡಲು ನಮಗೆ ಸಾಧ್ಯವಿಲ್ಲ” ಎಂದು ಸಂಬಂಧಪಟ್ಟವರು ಹೇಳಿ ವ್ಯಾಪಾರ ಮಾಡದಂತೆ ಪರೋಕ್ಷ ತಡೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ರಾಜ್ಯ ಸರಕಾರದ ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ ಈ ದೇವಸ್ಥಾನದ ಪ್ರಾಂಗಣದ ಹೊರಗಡೆ ನಡೆಯುವ ಸಂತೆ ವ್ಯಾಪಾರದಲ್ಲಿ ಧಾರ್ಮಿಕ ತಾರತಮ್ಯ ನಡೆಯುತ್ತಿರುವುದು ಖಂಡನೀಯ. ಜಾತ್ರೆಗಳನ್ನೇ ನಂಬಿ ಬದುಕುವ ಬಡ ಸಂತೆ ವ್ಯಾಪಾರಿಗಳ ಬದುಕುವ ಹಕ್ಕನ್ನು ರಕ್ಷಿಸಲು ಮತ್ತೆ ಜಿಲ್ಲಾಡಳಿತ ವಿಫಲವಾಗಿದೆ ಎಂದು ಡಿವೈಎಫ್ಐ ದ.ಕ.ಜಿಲ್ಲಾಧ್ಯಕ್ಷ ಬಿ.ಕೆ. ಇಮ್ತಿಯಾಝ್ ಆರೋಪಿಸಿದ್ದಾರೆ.
ಜಿಲ್ಲೆಯಲ್ಲಿ ಕಾಂಗ್ರೆಸ್ ಸರಕಾರ ಕೋಮುವಾದಿಗಳ ಕಪಿಮುಷ್ಟಿಯಲ್ಲಿ ನಲುಗುತ್ತಿದೆ. ಬಡ ಸಂತೆ ವ್ಯಾಪಾರಿಗಳ ಜೊತೆ ಸರಕಾರ ನಿಂತಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎಸ್ಎಸ್ಎಲ್ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘನೆ ಉಡುಪಿ : ಈ ಬಾರಿಯ ಎಸ್ಎಸ್ಎಲ್ಸಿ…
ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್ ಮಂಗಳೂರು : ಕರಾವಳಿ ಕರ್ನಾಟಕವು ಪ್ರಸ್ತುತ ತೀವ್ರ…
SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…
ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…
ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ…
ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…