ಮಂಗಳೂರು: ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನದ ಷಷ್ಟಿ ಮಹೋತ್ಸವದ ಜಾತ್ರೆ ವ್ಯಾಪಾರದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಮಧ್ಯೆ ವ್ಯಾಪಾರಿಗಳು ಡಿವೈಎಫ್ಐ ನೇತೃತ್ವದಲ್ಲಿ ದ.ಕ.ಜಿಲ್ಲಾಧಿಕಾರಿಗೆ ದೂರು ನೀಡಲು ಸಜ್ಜಾಗಿದ್ದಾರೆ ಎಂದು ತಿಳಿದು ಬಂದಿದೆ.
ಡಿ.14ರಿಂದ 19ವರೆಗೆ ಇಲ್ಲಿ ಜಾತ್ರೆ ನಡೆಯಲಿದೆ. ಈ ಜಾತ್ರೆ ಮಹೋತ್ಸವದಲ್ಲಿ ವ್ಯಾಪಾರ ಮಾಡಲು ಮುಸ್ಲಿಮರು ಪೂರಕ ಪ್ರಕ್ರಿಯೆ ನಡೆಸಲು ಮುಂದಾದಾಗ “ನಿಮಗೆ ರಕ್ಷಣೆ ನೀಡಲು ನಮಗೆ ಸಾಧ್ಯವಿಲ್ಲ” ಎಂದು ಸಂಬಂಧಪಟ್ಟವರು ಹೇಳಿ ವ್ಯಾಪಾರ ಮಾಡದಂತೆ ಪರೋಕ್ಷ ತಡೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ರಾಜ್ಯ ಸರಕಾರದ ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ ಈ ದೇವಸ್ಥಾನದ ಪ್ರಾಂಗಣದ ಹೊರಗಡೆ ನಡೆಯುವ ಸಂತೆ ವ್ಯಾಪಾರದಲ್ಲಿ ಧಾರ್ಮಿಕ ತಾರತಮ್ಯ ನಡೆಯುತ್ತಿರುವುದು ಖಂಡನೀಯ. ಜಾತ್ರೆಗಳನ್ನೇ ನಂಬಿ ಬದುಕುವ ಬಡ ಸಂತೆ ವ್ಯಾಪಾರಿಗಳ ಬದುಕುವ ಹಕ್ಕನ್ನು ರಕ್ಷಿಸಲು ಮತ್ತೆ ಜಿಲ್ಲಾಡಳಿತ ವಿಫಲವಾಗಿದೆ ಎಂದು ಡಿವೈಎಫ್ಐ ದ.ಕ.ಜಿಲ್ಲಾಧ್ಯಕ್ಷ ಬಿ.ಕೆ. ಇಮ್ತಿಯಾಝ್ ಆರೋಪಿಸಿದ್ದಾರೆ.
ಜಿಲ್ಲೆಯಲ್ಲಿ ಕಾಂಗ್ರೆಸ್ ಸರಕಾರ ಕೋಮುವಾದಿಗಳ ಕಪಿಮುಷ್ಟಿಯಲ್ಲಿ ನಲುಗುತ್ತಿದೆ. ಬಡ ಸಂತೆ ವ್ಯಾಪಾರಿಗಳ ಜೊತೆ ಸರಕಾರ ನಿಂತಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…