ಮಂಗಳೂರು: ಬಾಲಕಿಯೊಬ್ಬಳ ಕುತ್ತಿಗೆಯನ್ನು ಬಟ್ಟೆಯಿಂದ ಬಿಗಿದು ಹತ್ಯೆ ಮಾಡಿರುವ ಘಟನೆ ಪಣಂಬೂರು ಠಾಣಾ ವ್ಯಾಪ್ತಿಯ ಜೋಕಟ್ಟೆಯ ಜಂಕ್ಷನ್ನ ಭಜನ ಮಂದಿರದ ಬಳಿಯ ಬಾಡಿಗೆ ಮನೆಯೊಂದರಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.
ಬೆಳಗಾವಿ ಮೂಲದ ಬಾಲಕಿ ಜೋಕಟ್ಟೆಯ ಚಿಕ್ಕಪ್ಪ ಹನುಮಂತ ಅವರ ಮನೆಗೆ ಬಂದಿದ್ದಳು. ಕೂಲಿ ಕಾರ್ಮಿಕನಾಗಿರುವ ಹನುಮಂತ ಅವರು ನಿನ್ನೆ ಎಂದಿನಂತೆ ಕೆಲಸಕ್ಕೆ ತೆರಳಿದ್ದರು. ಹನುಮಂತ ಅವರ ಕೊನೆಯ ಮಗ 8ನೇ ತರಗತಿಯಲ್ಲಿ ಓದುತ್ತಿದ್ದು, ಅವನು ಕೂಡ ಶಾಲೆಗೆ ಹೋಗಿದ್ದ. ಹನುಮಂತನ ಪತ್ನಿಯೂ ಊರಿಗೆ ಹೋಗಿದ್ದರಿಂದ ಮನೆಯಲ್ಲಿ ಬಾಲಕಿಯೊಬ್ಬಳೇ ಇದ್ದಳು ಎನ್ನಲಾಗಿದೆ.
ಬಾಲಕಿಯು ಕೈ ನೋವಿಗೆ ಚಿಕಿತ್ಸೆ ಪಡೆದು ನಾಲ್ಕು ದಿನಗಳ ಹಿಂದೆಯಷ್ಟೇ ಚಿಕ್ಕಪ್ಪನ ಮನೆಗೆ ಬಂದಿದ್ದಳು. ಇನ್ನು ಬಾಲಕಿಯ ತಾಯಿ ಮಗಳೊಂದಿಗೆ ಮಾತನಾಡಲು ಹನುಮಂತ ಅವರ ಪಕ್ಕದ ಮನೆಯವರಿಗೆ ಕರೆ ಮಾಡಿದ್ದಾರೆ. ಈ ವೇಳೆ ಅವರು ಬಾಲಕಿಗೆ ಕರೆ ನೀಡಿದಲು ಹೋದಾಗ ಘಟನೆ ಬೆಳಕಿಗೆ ಬಂದಿದೆ.
ಪಕ್ಕದ ಮನೆಯವರು ಪೋನ್ ಕೊಡಲು ಬಾಲಕಿ ವಾಸವಿದ್ದ ಬಾಡಿಗೆ ಮನೆಗೆ ಬಂದಾಗ ಬಾಲಕಿಯ ಕುತ್ತಿಗೆಗೆ ಬಟ್ಟೆಯಿಂದ ಬಿಗಿದು ಯಾರೋ ಕೊಲೆ ಮಾಡಿದ ರೀತಿ ಪತ್ತೆಯಾಗಿದ್ದಾಳು. ಪಕ್ಕದ ಮನೆಯವರು ತಾಯಿಗೆ ಪೋನಿನಲ್ಲಿ ವಿಷಯ ತಿಳಿಸಿದ್ದಾರೆ. ಕೂಡಲೇ ಮೃತ ಬಾಲಕಿಯ ತಾಯಿಯು ಹನುಮಂತನಿಗೆ ಪೋನ್ ಮೂಲಕ ಬಾಡಿಗೆ ಮನೆಗೆ ಹೋಗುವಂತೆ ತಿಳಿಸಿದ್ದಾರೆ. ಹನುಮಂತನು ಬಾಡಿಗೆ ಮನೆಗೆ ಬಂದು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಮಂಗಳೂರು ಪೊಲೀಸ್ ಆಯುಕ್ತರಾದ ಅನುಪಮ್ ಅಗರವಾಲ್ ಡಿಸಿಪಿ ದಿನೇಶ್ ಕುಮಾರ್ ಸಹಿತ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ತನಿಖೆಗೆ ಮಾರ್ಗದರ್ಶನ ನೀಡಿದ್ದು , ಪಣಂಬೂರು ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿ ತನಿಖೆ ಆರಂಭಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…