ಮಂಗಳೂರು: ಬಾಲಕಿಯೊಬ್ಬಳ ಕುತ್ತಿಗೆಯನ್ನು ಬಟ್ಟೆಯಿಂದ ಬಿಗಿದು ಹತ್ಯೆ ಮಾಡಿರುವ ಘಟನೆ ಪಣಂಬೂರು ಠಾಣಾ ವ್ಯಾಪ್ತಿಯ ಜೋಕಟ್ಟೆಯ ಜಂಕ್ಷನ್ನ ಭಜನ ಮಂದಿರದ ಬಳಿಯ ಬಾಡಿಗೆ ಮನೆಯೊಂದರಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.
ಬೆಳಗಾವಿ ಮೂಲದ ಬಾಲಕಿ ಜೋಕಟ್ಟೆಯ ಚಿಕ್ಕಪ್ಪ ಹನುಮಂತ ಅವರ ಮನೆಗೆ ಬಂದಿದ್ದಳು. ಕೂಲಿ ಕಾರ್ಮಿಕನಾಗಿರುವ ಹನುಮಂತ ಅವರು ನಿನ್ನೆ ಎಂದಿನಂತೆ ಕೆಲಸಕ್ಕೆ ತೆರಳಿದ್ದರು. ಹನುಮಂತ ಅವರ ಕೊನೆಯ ಮಗ 8ನೇ ತರಗತಿಯಲ್ಲಿ ಓದುತ್ತಿದ್ದು, ಅವನು ಕೂಡ ಶಾಲೆಗೆ ಹೋಗಿದ್ದ. ಹನುಮಂತನ ಪತ್ನಿಯೂ ಊರಿಗೆ ಹೋಗಿದ್ದರಿಂದ ಮನೆಯಲ್ಲಿ ಬಾಲಕಿಯೊಬ್ಬಳೇ ಇದ್ದಳು ಎನ್ನಲಾಗಿದೆ.
ಬಾಲಕಿಯು ಕೈ ನೋವಿಗೆ ಚಿಕಿತ್ಸೆ ಪಡೆದು ನಾಲ್ಕು ದಿನಗಳ ಹಿಂದೆಯಷ್ಟೇ ಚಿಕ್ಕಪ್ಪನ ಮನೆಗೆ ಬಂದಿದ್ದಳು. ಇನ್ನು ಬಾಲಕಿಯ ತಾಯಿ ಮಗಳೊಂದಿಗೆ ಮಾತನಾಡಲು ಹನುಮಂತ ಅವರ ಪಕ್ಕದ ಮನೆಯವರಿಗೆ ಕರೆ ಮಾಡಿದ್ದಾರೆ. ಈ ವೇಳೆ ಅವರು ಬಾಲಕಿಗೆ ಕರೆ ನೀಡಿದಲು ಹೋದಾಗ ಘಟನೆ ಬೆಳಕಿಗೆ ಬಂದಿದೆ.
ಪಕ್ಕದ ಮನೆಯವರು ಪೋನ್ ಕೊಡಲು ಬಾಲಕಿ ವಾಸವಿದ್ದ ಬಾಡಿಗೆ ಮನೆಗೆ ಬಂದಾಗ ಬಾಲಕಿಯ ಕುತ್ತಿಗೆಗೆ ಬಟ್ಟೆಯಿಂದ ಬಿಗಿದು ಯಾರೋ ಕೊಲೆ ಮಾಡಿದ ರೀತಿ ಪತ್ತೆಯಾಗಿದ್ದಾಳು. ಪಕ್ಕದ ಮನೆಯವರು ತಾಯಿಗೆ ಪೋನಿನಲ್ಲಿ ವಿಷಯ ತಿಳಿಸಿದ್ದಾರೆ. ಕೂಡಲೇ ಮೃತ ಬಾಲಕಿಯ ತಾಯಿಯು ಹನುಮಂತನಿಗೆ ಪೋನ್ ಮೂಲಕ ಬಾಡಿಗೆ ಮನೆಗೆ ಹೋಗುವಂತೆ ತಿಳಿಸಿದ್ದಾರೆ. ಹನುಮಂತನು ಬಾಡಿಗೆ ಮನೆಗೆ ಬಂದು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಮಂಗಳೂರು ಪೊಲೀಸ್ ಆಯುಕ್ತರಾದ ಅನುಪಮ್ ಅಗರವಾಲ್ ಡಿಸಿಪಿ ದಿನೇಶ್ ಕುಮಾರ್ ಸಹಿತ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ತನಿಖೆಗೆ ಮಾರ್ಗದರ್ಶನ ನೀಡಿದ್ದು , ಪಣಂಬೂರು ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿ ತನಿಖೆ ಆರಂಭಿಸಿದ್ದಾರೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…