Featured

ಮಂಗಳೂರು: ಕೂಳೂರು ಸೇತುವೆ ರಸ್ತೆ ದುರಸ್ತಿ; ಪರ್ಯಾಯ ಮಾರ್ಗಗಳು ಹೀಗಿವೆ – vishwanews24

ಮಂಗಳೂರು:  NH66 ಕೆಐಒಸಿಎಲ್ ಜಂಕ್ಷನ್, ಕೂಳೂರು ಸೇತುವೆ ರಸ್ತೆ ದುರಸ್ತಿ; ಪರ್ಯಾಯ ಮಾರ್ಗಗಳು ಹೀಗಿವೆ

ಮಂಗಳೂರು: ಮಂಗಳೂರು ನಗರದ ರಾಷ್ಟ್ರೀಯ ಹೆದ್ದಾರಿ-66 ರ ಕೂಳೂರು ಹಳೇ ಸೇತುವೆಯ ಬಳಿಯ ಕೆಐಒಸಿಎಲ್ ಜಂಕ್ಷನ್‌ನಿಂದ ಅಯ್ಯಪ್ಪ ಗುಡಿಯವರೆಗೆ ಜುಲೈ 22ರ ರಾತ್ರಿ 8:00 ಗಂಟೆಯಿಂದ ಜುಲೈ 25ರ ಬೆಳಗ್ಗೆ 8:00 ರವರೆಗೆ ರಸ್ತೆ ದುರಸ್ತಿ ಕಾಮಗಾರಿ ನಡೆಯಲಿದೆ. ಹೀಗಾಗಿ ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚಿಸಲಾಗಿದೆ.

ರಸ್ತೆ ದುರಸ್ತಿ ಹಿನ್ನೆಲೆ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಬರುವ ಕೂಳೂರು ಹೊಸ ಸೇತುವೆಯಲ್ಲಿ ದ್ವಿಪಥ ರಸ್ತೆಯನ್ನಾಗಿ ಪರಿವರ್ತಿಸಲಾಗುತ್ತದೆ. ಆದ್ದರಿಂದ ಕೋಡಿಕಲ್ ಕ್ರಾಸ್‌ನಿಂದ ಕೆಐಒಸಿಎಲ್ ಜಂಕ್ಷನ್‌ವರೆಗೆ ಅದೇ ರೀತಿ ಪಣಂಬೂರು ಜಂಕ್ಷನ್‌ನಿಂದ ಕೆಐಒಸಿಎಲ್ ಜಂಕ್ಷನ್‌ವರೆಗೆ ಸಂಚಾರ ದಟ್ಟಣೆ ಹೆಚ್ಚಾಗಬಹುದಾಗಿದೆ.

ಈ ಹಿನ್ನೆಲೆ ಕೆಐಒಸಿಎಲ್ ಜಂಕ್ಷನ್ ಬಳಿ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಹೋಗುವ ಹೊಸ ಸೇತುವೆ ಮೂಲಕ ಸಂಚರಿಸುವ ಎಲ್ಲಾ ವಾಹನಗಳ ಚಾಲಕರು ಮತ್ತು ಸಾರ್ವಜನಿಕರು ಎಚ್ಚರಿಕೆಯಿಂದ ಚಲಿಸುವುದು ಹಾಗೂ ಪೀಕ್ ಅವರ್ಸ್ ನಲ್ಲಿ ಸದರಿ ಮಾರ್ಗದಲ್ಲಿ ವಾಹನ ಸಂಚಾರವನ್ನು ತಪ್ಪಿಸಲು ಈ ಕೆಳಗೆ ನಮೂದಿಸಿದ ಬದಲಿ ಮಾರ್ಗಗಳನ್ನು ಬಳಸುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರು ಸೂಚನೆ ನೀಡಿದ್ದಾರೆ.

ವಾಹನ ಚಾಲಕರು ಮತ್ತು ಸಾರ್ವಜನಿಕರು ಉಪಯೋಗಿಸಬಹುದಾದ ಇತರ ಮಾರ್ಗಗಳು:

➡️ಉಡುಪಿ ಕಡೆಯಿಂದ ಬೆಂಗಳೂರು, ಮೈಸೂರು ಕಡೆಗೆ ಚಲಿಸುವ ಎಲ್ಲಾ ವಿಧದ ಲಘು ವಾಹನ ಹಾಗೂ ಲಾರಿಗಳು ಪಡುಬಿದ್ರೆ ಕಡೆಯಿಂದ ಕಾರ್ಕಳ ಮೂಡಬಿದ್ರೆ ಮಾರ್ಗವಾಗಿ ಸಂಚರಿಸುವುದು.

➡️ಉಡುಪಿ/ಮುಲ್ಕಿ ಕಡೆಯಿಂದ ಮಂಗಳೂರು ನಗರ ಕಡೆಗೆ ಸಂಚರಿಸುವ ಎಲ್ಲಾ ಲಘು ವಾಹನಗಳು ಮುಲ್ಕಿ ವಿಜಯ ಸನ್ನಿಧಿ ಬಳಿ ಎಡಕ್ಕೆ ತಿರುವು ತೆಗೆದುಕೊಂಡು ಕಿನ್ನಿಗೋಳಿ – ಕಟೀಲು – ಬಜಪೆ – ಮರವೂರು – ಕಾವೂರು ಮೂಲಕ ಮಂಗಳೂರು ಕಡೆಗೆ ಸಂಚರಿಸುವುದು.

➡️ಮಂಗಳೂರು ನಗರ / ಕೊಟ್ಟಾರ ಚೌಕಿ ಕಡೆಯಿಂದ ಉಡುಪಿ ಕಡೆಗೆ ಸಂಚರಿಸುವ ಎಲ್ಲಾ ಲಘು ವಾಹನಗಳು ಕಾವೂರು – ಮರವೂರು – ಬಜಪೆ – ಕಟೀಲು – ಕಿನ್ನಿಗೋಳಿ – ಮುಲ್ಕಿ ವಿಜಯ ಸನ್ನಿಧಿ ಮೂಲಕ ಉಡುಪಿ ಕಡೆಗೆ ಸಂಚರಿಸುವುದು.

➡️ಬಿ.ಸಿ.ರೋಡ್, ಬೆಂಗಳೂರು ಹಾಗೂ ಮೈಸೂರು ಕಡೆಯಿಂದ ಉಡುಪಿ ಕಡೆಗೆ ಸಂಚರಿಸುವ ಲಾರಿ ಹಾಗೂ ಲಘು ವಾಹನಗಳು ಬೀಕರ್ನಕಟ್ಟೆ- ಕುಲಶೇಖರ – ವಾಮಂಜೂರು – ಕೈಕಂಬ – ಬಜಪೆ – ಕಟೀಲು – ಕಿನ್ನಿಗೋಳಿ – ಮುಲ್ಕಿ ವಿಜಯ ಸನ್ನಿಧಿ ಮೂಲಕ ಉಡುಪಿ ಕಡೆಗೆ ಸಂಚರಿಸುವುದು.

➡️MCF, ONGC, HPCL, BPCL, IOCL, Total Gas, BASF, ರಫ್ತಾರ್, ಏಜಿಸ್ ಇತ್ಯಾದಿ ಕಂಪೆನಿಗಳಿಗೆ ಬರುವ ಹಾಗೂ ಕಂಪೆನಿಯಿಂದ ಹೊರಡುವ ಎಲ್ಲಾ ರೀತಿಯ ಗ್ಯಾಸ್ ಟ್ಯಾಂಕರ್, ಡಿಸೇಲ್/ಪೆಟ್ರೋಲ್ ಟ್ಯಾಂಕರ್ ಹಾಗೂ ಇತರ ಘನ ವಾಹನಗಳು ಕೂಳೂರು ಹೊಸ ಸೇತುವೆಯಲ್ಲಿ ಸಂಚಾರ ದಟ್ಟಣೆಯ ಸಮಯವನ್ನು ಹೊರತುಪಡಿಸಿ ಉಳಿದ ಸಮಯದಲ್ಲಿ ಸಂಚರಿಸಲು ಕೋರಿದೆ.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

1 day ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

1 day ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

1 day ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

1 day ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

2 days ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

2 days ago