Featured

ಮಂಗಳೂರು: ಕೂಳೂರು ಸೇತುವೆ ರಸ್ತೆ ದುರಸ್ತಿ; ಪರ್ಯಾಯ ಮಾರ್ಗಗಳು ಹೀಗಿವೆ – vishwanews24

ಮಂಗಳೂರು:  NH66 ಕೆಐಒಸಿಎಲ್ ಜಂಕ್ಷನ್, ಕೂಳೂರು ಸೇತುವೆ ರಸ್ತೆ ದುರಸ್ತಿ; ಪರ್ಯಾಯ ಮಾರ್ಗಗಳು ಹೀಗಿವೆ

ಮಂಗಳೂರು: ಮಂಗಳೂರು ನಗರದ ರಾಷ್ಟ್ರೀಯ ಹೆದ್ದಾರಿ-66 ರ ಕೂಳೂರು ಹಳೇ ಸೇತುವೆಯ ಬಳಿಯ ಕೆಐಒಸಿಎಲ್ ಜಂಕ್ಷನ್‌ನಿಂದ ಅಯ್ಯಪ್ಪ ಗುಡಿಯವರೆಗೆ ಜುಲೈ 22ರ ರಾತ್ರಿ 8:00 ಗಂಟೆಯಿಂದ ಜುಲೈ 25ರ ಬೆಳಗ್ಗೆ 8:00 ರವರೆಗೆ ರಸ್ತೆ ದುರಸ್ತಿ ಕಾಮಗಾರಿ ನಡೆಯಲಿದೆ. ಹೀಗಾಗಿ ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚಿಸಲಾಗಿದೆ.

ರಸ್ತೆ ದುರಸ್ತಿ ಹಿನ್ನೆಲೆ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಬರುವ ಕೂಳೂರು ಹೊಸ ಸೇತುವೆಯಲ್ಲಿ ದ್ವಿಪಥ ರಸ್ತೆಯನ್ನಾಗಿ ಪರಿವರ್ತಿಸಲಾಗುತ್ತದೆ. ಆದ್ದರಿಂದ ಕೋಡಿಕಲ್ ಕ್ರಾಸ್‌ನಿಂದ ಕೆಐಒಸಿಎಲ್ ಜಂಕ್ಷನ್‌ವರೆಗೆ ಅದೇ ರೀತಿ ಪಣಂಬೂರು ಜಂಕ್ಷನ್‌ನಿಂದ ಕೆಐಒಸಿಎಲ್ ಜಂಕ್ಷನ್‌ವರೆಗೆ ಸಂಚಾರ ದಟ್ಟಣೆ ಹೆಚ್ಚಾಗಬಹುದಾಗಿದೆ.

ಈ ಹಿನ್ನೆಲೆ ಕೆಐಒಸಿಎಲ್ ಜಂಕ್ಷನ್ ಬಳಿ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಹೋಗುವ ಹೊಸ ಸೇತುವೆ ಮೂಲಕ ಸಂಚರಿಸುವ ಎಲ್ಲಾ ವಾಹನಗಳ ಚಾಲಕರು ಮತ್ತು ಸಾರ್ವಜನಿಕರು ಎಚ್ಚರಿಕೆಯಿಂದ ಚಲಿಸುವುದು ಹಾಗೂ ಪೀಕ್ ಅವರ್ಸ್ ನಲ್ಲಿ ಸದರಿ ಮಾರ್ಗದಲ್ಲಿ ವಾಹನ ಸಂಚಾರವನ್ನು ತಪ್ಪಿಸಲು ಈ ಕೆಳಗೆ ನಮೂದಿಸಿದ ಬದಲಿ ಮಾರ್ಗಗಳನ್ನು ಬಳಸುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರು ಸೂಚನೆ ನೀಡಿದ್ದಾರೆ.

ವಾಹನ ಚಾಲಕರು ಮತ್ತು ಸಾರ್ವಜನಿಕರು ಉಪಯೋಗಿಸಬಹುದಾದ ಇತರ ಮಾರ್ಗಗಳು:

➡️ಉಡುಪಿ ಕಡೆಯಿಂದ ಬೆಂಗಳೂರು, ಮೈಸೂರು ಕಡೆಗೆ ಚಲಿಸುವ ಎಲ್ಲಾ ವಿಧದ ಲಘು ವಾಹನ ಹಾಗೂ ಲಾರಿಗಳು ಪಡುಬಿದ್ರೆ ಕಡೆಯಿಂದ ಕಾರ್ಕಳ ಮೂಡಬಿದ್ರೆ ಮಾರ್ಗವಾಗಿ ಸಂಚರಿಸುವುದು.

➡️ಉಡುಪಿ/ಮುಲ್ಕಿ ಕಡೆಯಿಂದ ಮಂಗಳೂರು ನಗರ ಕಡೆಗೆ ಸಂಚರಿಸುವ ಎಲ್ಲಾ ಲಘು ವಾಹನಗಳು ಮುಲ್ಕಿ ವಿಜಯ ಸನ್ನಿಧಿ ಬಳಿ ಎಡಕ್ಕೆ ತಿರುವು ತೆಗೆದುಕೊಂಡು ಕಿನ್ನಿಗೋಳಿ – ಕಟೀಲು – ಬಜಪೆ – ಮರವೂರು – ಕಾವೂರು ಮೂಲಕ ಮಂಗಳೂರು ಕಡೆಗೆ ಸಂಚರಿಸುವುದು.

➡️ಮಂಗಳೂರು ನಗರ / ಕೊಟ್ಟಾರ ಚೌಕಿ ಕಡೆಯಿಂದ ಉಡುಪಿ ಕಡೆಗೆ ಸಂಚರಿಸುವ ಎಲ್ಲಾ ಲಘು ವಾಹನಗಳು ಕಾವೂರು – ಮರವೂರು – ಬಜಪೆ – ಕಟೀಲು – ಕಿನ್ನಿಗೋಳಿ – ಮುಲ್ಕಿ ವಿಜಯ ಸನ್ನಿಧಿ ಮೂಲಕ ಉಡುಪಿ ಕಡೆಗೆ ಸಂಚರಿಸುವುದು.

➡️ಬಿ.ಸಿ.ರೋಡ್, ಬೆಂಗಳೂರು ಹಾಗೂ ಮೈಸೂರು ಕಡೆಯಿಂದ ಉಡುಪಿ ಕಡೆಗೆ ಸಂಚರಿಸುವ ಲಾರಿ ಹಾಗೂ ಲಘು ವಾಹನಗಳು ಬೀಕರ್ನಕಟ್ಟೆ- ಕುಲಶೇಖರ – ವಾಮಂಜೂರು – ಕೈಕಂಬ – ಬಜಪೆ – ಕಟೀಲು – ಕಿನ್ನಿಗೋಳಿ – ಮುಲ್ಕಿ ವಿಜಯ ಸನ್ನಿಧಿ ಮೂಲಕ ಉಡುಪಿ ಕಡೆಗೆ ಸಂಚರಿಸುವುದು.

➡️MCF, ONGC, HPCL, BPCL, IOCL, Total Gas, BASF, ರಫ್ತಾರ್, ಏಜಿಸ್ ಇತ್ಯಾದಿ ಕಂಪೆನಿಗಳಿಗೆ ಬರುವ ಹಾಗೂ ಕಂಪೆನಿಯಿಂದ ಹೊರಡುವ ಎಲ್ಲಾ ರೀತಿಯ ಗ್ಯಾಸ್ ಟ್ಯಾಂಕರ್, ಡಿಸೇಲ್/ಪೆಟ್ರೋಲ್ ಟ್ಯಾಂಕರ್ ಹಾಗೂ ಇತರ ಘನ ವಾಹನಗಳು ಕೂಳೂರು ಹೊಸ ಸೇತುವೆಯಲ್ಲಿ ಸಂಚಾರ ದಟ್ಟಣೆಯ ಸಮಯವನ್ನು ಹೊರತುಪಡಿಸಿ ಉಳಿದ ಸಮಯದಲ್ಲಿ ಸಂಚರಿಸಲು ಕೋರಿದೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

11 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago