Featured

ಮಂಗಳೂರು: ಕೂಳೂರು ಹಳೆ ಸೇತುವೆ ದುರಸ್ತಿ – ಆ. 19ರಿಂದ 21ರವರೆಗೆ ಘನ ವಾಹನ ಸಂಚಾರ ನಿರ್ಬಂಧ: ಡಿಸಿ ಮುಲ್ಲೈ ಮುಗಿಲನ್ – vishwanews24

ಮಂಗಳೂರು: ಕೂಳೂರು ಹಳೆ ಸೇತುವೆ ದುರಸ್ತಿ ಕಾರ್ಯ- ಆ. 19ರಿಂದ 21ರವರೆಗೆ ಘನ ವಾಹನ ಸಂಚಾರ ನಿರ್ಬಂಧ: ಡಿಸಿ ಮುಲ್ಲೈ ಮುಗಿಲನ್

ಮಂಗಳೂರು: ಕೂಳೂರಿನ ಹಳೆಯ ಕಮಾನು ಸೇತುವೆಯಲ್ಲಿ ಘನ ವಾಹನಗಳ ಸಂಚಾರ ನಿರ್ಬಂಧಿಸುವಂತೆ ರಾ. ಹೆದ್ದಾರಿ ಪ್ರಾಧಿಕಾರ ಸೂಚಿಸಿದೆ. ಆ ಹಿನ್ನೆಲೆಯಲ್ಲಿ ವಾಹನ ಸಂಚಾರ ಸರಾಗಗೊಳಿಸಲು ಶಿಪಾರಸ್ಸು ಮಾಡಲಾದ ಕೆಲವು ದುರಸ್ತಿ ಕಾರ್ಯ ಹಾಗೂ ಇತರ ಕಾರ್ಯಗಳನ್ನು ನಡೆಸುವ ನಿಟ್ಟಿನಲ್ಲಿ ಆ. 19ರಿಂದ 21ರವರೆಗೆ ಘನ ವಾಹನ ಸಂಚಾರ ನಿಷೇಧಿಸಿ ಪ್ರಾಯೋಗಿಕ ಸಂಚಾರಕ್ಕೆ ಕ್ರಮ ವಹಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.

ಈ ಮೂರು ದಿನಗಳಲ್ಲಿ ಘನ ವಾಹನಗಳಿಗೆ ರಾತ್ರಿ 10ರಿಂದ ಬೆಳಗ್ಗೆ 6 ಗಂಟೆಯವರೆಗೆ ಹಾಗೂ ಬೆಳಗ್ಗೆ 11ರಿಂದ 3 ಗಂಟೆಯವರೆಗೆ ಹೊಸ ಸೇತುವೆಯಲ್ಲಿ ಸಂಚರಿಸಲು ಅನುಮತಿಸಲಾಗಿದೆ. ಈ ಅವಧಿಯಲ್ಲಿ ಹೊಸ ಸೇತುವೆಯನ್ನು ಘನ ವಾಹನಗಳ ದ್ವಿಮುಖ ಸಂಚಾರಕ್ಕೆ ಉಪಯೋಗಿಸಲಾಗುವುದು. ಕುಳೂರು ಹಳೆಯ ಕಮಾನು ಸೇತುವೆಯನ್ನು ಪ್ರಯಾಣಿಕರ ಬಸ್ಸು ಹೊರತುಪಡಿಸಿ ಘನ ವಾಹನಗಳ ಸಂಚಾರಕ್ಕೆ ನಿಷೇಧಿಸಲಾಗುವುದು. ಬೆಳಗ್ಗೆ 6ರಿಂದ 11 ಗಂಟೆಯವರೆಗೆ ಹಾಗೂ ಮಧ್ಯಾಹ್ನ 3ರಿಂದ ರಾತ್ರಿ 10 ಗಂಟವಯೆರೆಗ ಉಡುಪಿಯಿಂದ ಕೇರಳಕ್ಕೆ ಸಂಚರಿಸುವ ವಾಹನಗಳು ಮುಲ್ಕಿ- ಸುರತ್ಕಲ್- ಎಂಆರ್‌ಪಿಎಲ್- ಬಜ್ಪೆ- ಕೆಪಿಟಿ- ನಂತೂರು ಮಾರ್ಗವಾಗಿ ಸಂಚರಿಸಬೇಕು ಮತ್ತು ಉಡುಪಿ ಸುರತ್ಕಲ್ ಬೆಂಗಳೂರು ಸಂಚರಿಸುವ ವಾಹನಗಳು ಉಡುಪಿ- ಮುಲ್ಕಿ- ಮೂಡಬಿದ್ರೆ- ಬಂಟ್ವಾಳ ಮಾರ್ಗವಾಗಿ ಸಂಚರಿಸಬೇಕು.

ಪ್ರಾಯೋಗಿಕ ಸಂಚಾರ ನಡೆಸಿದ ನಂತರ ಅಗತ್ಯ ಮಾರ್ಪಾಡು ಇದ್ದಲ್ಲಿ ಅದರೊಂದಿಗೆ ಈ ನಿರ್ಬಂಧವನ್ನು ಆ. 25ರಿಂದ ಸೆ. 29ವರೆರಗೆ ವಿಸ್ತಿರಸಲಾಗುವುದು. ಕೂಳೂರು ಸೇತುವೆಯ ದುರಸ್ತಿಯ ಅಗತ್ಯ ಕಾರ್ಯಗಳನ್ನು ಸೆ. 25ರೊಳಗೆ ಕಾರ್ಯಗತಗೊಳಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ನಿರ್ದೇಶಿಸಲಾಗಿದೆ. ಕೂಳೂರು ಸೇತುವೆಯ ಸಾಮರ್ಥ್ಯ ಹಾಗೂ ಸ್ಥಿರತೆ ಬಗ್ಗೆ ಆ. 20ರ ಒಳಗೆ ವಿವರವಾದ ವರದಿ ನೀಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ನಿರ್ದೇಶಿಸಲಾ ಗಿದೆ. ಇದಲ್ಲದೆ ಹೊಸ ಸೇತುವೆಯ ಕಾಮಗಾರಿಯನ್ನು ತ್ವರಿತಗೊಳಿಸಿ ನಿರ್ದಿಷ್ಟ ಅವಧಿಯಲ್ಲಿ ಪೂರ್ಣಗೊಳಿಸಲು ನಿರ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

4 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

5 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

5 hours ago