ಮಂಗಳೂರು: ಕೆಂಪುಕಲ್ಲು ಗಣಿಗಾರಿಕೆಯ ಗೊಂದಲ ನಿವಾರಣೆಗಾಗಿ ಮರಳು ವಿತರಣೆ ಮಾದರಿಯಲ್ಲಿರುವ ಸ್ಯಾಂಡ್ ಬಜಾರ್ ಆ್ಯಪ್ನಂತೆ ಕೆಂಪು ಕಲ್ಲು ಖರೀದಿಗೆ ಪ್ರತ್ಯೇಕ ಆ್ಯಪ್ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದು ರಾಜ್ಯ ವಿಧಾನಸಭೆಯ ಅಧ್ಯಕ್ಷ ಯು.ಟಿ. ಖಾದರ್ ತಿಳಿಸಿದ್ದಾರೆ.
ಗುರುವಾರ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈ ಹಿಂದೆ ಜಾರಿಗೆ ತರಲಾಗಿದ್ದ ಸ್ಯಾಂಡ್ ಬಜಾರ್ ಆ್ಯಪ್ ಮೂಲಕ ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ಮರಳು ಸಿಗುತ್ತಿತ್ತು. ಅದೇ ಮಾದರಿಯಲ್ಲಿ ಕೆಂಪು ಕಲ್ಲು ಕೂಡ ಜನಸಾಮಾನ್ಯರಿಗೆ ಸಿಗಬೇಕು. ಕೆಂಪುಕಲ್ಲು ಖರೀದಿಗೆ ಪ್ರತ್ಯೇಕ ಆ್ಯಪ್ ವ್ಯವಸ್ಥೆ ಜಾರಿಗೊಳಿಸಲಾಗುವುದು. ಸರಕಾರಿ ದರದಲ್ಲಿ ಕೆಂಪು ಕಲ್ಲನ್ನು ಅಗತ್ಯ ಇರುವವರ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯು ನೂತನ ಆ್ಯಪ್ ಮೂಲಕ ಆಗಲಿದೆ ಎಂದರು.
ಜಿಲ್ಲೆಯಲ್ಲಿ ಕೆಂಪು ಕಲ್ಲು ಸಮಸ್ಯೆಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಉಸ್ತುವಾರಿ ಸಚಿವರೊಂದಿಗೆ ಬೆಂಗಳೂರಲ್ಲಿ 2ನೇ ಹಂತದ ಸಭೆ ನಡೆಸಲಾಗಿದೆ. ಈ ಸಭೆಯಲ್ಲಿ ಅಧಿಕಾರಿಗಳು ವಹಿಸಬೇಕಾದ ಕ್ರಮಗಳ ಕುರಿತು ಸೂಚಿಸಲಾಗಿದೆ. ಹಾಗಾಗಿ ಈ ಸಮಸ್ಯೆ ಶೀಘ್ರ ಬಗೆಹರಿಯಲಿದೆ ಎಂದು ಯು.ಟಿ. ಖಾದರ್ ತಿಳಿಸಿದರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…