Featured

ಮಂಗಳೂರು: ಕೆಎಂಎಫ್‌ನಲ್ಲಿ ಕೆಲಸ ಕೊಡಿಸುವ ನೆಪದಲ್ಲಿ ಅಮಾಯಕರಿಗೆ ಕೋಟ್ಯಾಂತರ ರೂ ಪಂಗನಾಮ ; ಆರೋಪಿ ಪೊಲೀಸ್‌ ವಶಕ್ಕೆ – Vishwanews24

ಮಂಗಳೂರು: ಕೆಎಂಎಫ್‌ನಲ್ಲಿ ಕೆಲಸ ಕೊಡಿಸುವ ನೆಪದಲ್ಲಿ ಅಮಾಯಕರಿಗೆ ಕೋಟ್ಯಾಂತರ

ರೂ ಪಂಗನಾಮ ; ಆರೋಪಿ ಪೊಲೀಸ್‌ ವಶಕ್ಕೆ

ಮಂಗಳೂರು: ಕೆಲಸ ಕೊಡಿಸುವ ನೆಪದಲ್ಲಿ ಅಮಾಯಕರಿಗೆ ಕೋಟ್ಯಾಂತರ ರೂಪಾಯಿ ಪಂಗನಾಮ ಹಾಕಿದ್ದ ಆರೋಪಿ ರಾಮಪ್ರಸಾದ್‌ ಈಗ ಪೊಲೀಸ್‌ ಅತಿಥಿಯಾಗಿದ್ದಾನೆ.

ಈತನ ನಿಜವಾದ ಹೆಸರು ರಾಮ್‌ಪ್ರಸಾದ್‌ ಜನರಿಗೆ ವಂಚನೆ ಮಾಡೋ ಸಲುವಾಗಿ ಹೆಸರನ್ನು ಹರೀಶ್‌ ಎಂದು ಬದಲಾಯಿಸಿ ಕೆಎಂಎಫ್‌ ಮಂಗಳೂರು ಇದರ ನಿರ್ದೇಶಕ ಎಂದು ಹೆಳಿಕೊಂಡು ತಿರುಗಾಡುತ್ತಿದ್ದ. ಈತ ಊರು ಬಂಟ್ವಾಳ ತಾಲೂಕು ಸಾಲೆತ್ತೂರು ಗ್ರಾಮದ ಮಲಾರು.

ಈತನ ತಂದೆ ವೃತ್ತಿಯಲ್ಲಿ ಶಿಕ್ಷಕ ಅವರ ನಿಸ್ವಾರ್ಥ ಸೇವೆಯನ್ನು ಗುರುತಿಸಿ ಕೇರಳ ಸರ್ಕಾರವು ಅತ್ಯುತ್ತಮ ರಾಜ್ಯ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಿದ್ದರು. ಆದರೆ ಮಗ ಮಾತ್ರ ನೀಚ ಕೆಲಸ ಮಾಡಿಕೊಂಡು ಮುಗ್ದ ಜನರಿಗೆ ವಂಚನೆ ಮಾಡಿ ಕೋಟ್ಯಾಂತರ ಹಣವನ್ನು ಕಬಳಿಸಿದ ಭೂಪ.

ಕೆಎಂಎಫ್‌ನಲ್ಲಿ ಕೆಲಸ ಕೊಡುವುದಾಗಿ ನಂಬಿಸಿ ಬರೋಬ್ಬರಿ 150 ಜನರಿಗೆ 2.50 ಕೋಟಿ ರೂಪಾಯಿಗೂ ಹೆಚ್ಚು ಪಂಗನಾಮ ಹಾಕಿದ ಆರೋಪಿ ರಾಮ್‌ಪ್ರಸಾದ್‌ ಯಾನೆ ಹರೀಶ್‌ ನನ್ನು ಸಾಮಾಜಿಕ ಕಾರ್ಯಕರ್ತೆ ಪ್ರಸನ್ನ ರವಿ ಅವರ ನೇತೃತ್ವದಲ್ಲಿ ಮಂಗಳೂರು ನಗರ ಸಿಸಿಬಿ ಪೊಲೀಸರಿಗೊಪ್ಪಿಸಿದ್ದಾರೆ.

ಮಂಗಳೂರು: ಕೆಎಂಎಫ್‌ನಲ್ಲಿ ಕೆಲಸ ಕೊಡಿಸುವ ನೆಪದಲ್ಲಿ ಅಮಾಯಕರಿಗೆ ಕೋಟ್ಯಾಂತರ ರೂ ಪಂಗನಾಮ ; ಆರೋಪಿ ಪೊಲೀಸ್‌ ವಶಕ್ಕೆ

ರಾಮ್‌ಪ್ರಸಾದ್‌ ಯಾನೆ ಹರೀಶ್‌ ತಾನು ಕೆ ಎಂಎಫ್ ನಿರ್ದೇಶಕ ಎಂದು ಹೇಳಿಕೊಂಡು ತಿರುಗಾಡುತ್ತಿದ್ದ. ಅಮಾಯಕರಿಗೆ ಕೆಎಂಎಫ್‌ ಮಂಗಳೂರು ಇದರ ವಿವಿಧ ವಿಭಾಗಗಳಲ್ಲಿ ಕೆಲಸ ಕೊಡಿಸುವುದಾಗಿ ಹೇಳಿಕೊಂಡು ವಂಚಿಸಿದ್ದಾನೆ. ಅಲ್ಲದೆ ಕೆಎಂಎಫ್‌ ಹೆಸರಿನಲ್ಲಿ ಬೆಂಗಳೂರಿನಿಂದ ತರಬೇತುದಾರರನ್ನು ಕರೆಸಿ ಪುತ್ತೂರು ಮತ್ತು ಮಂಗಳೂರಿನ ಉರ್ವಾದಲ್ಲಿ 15 ದಿನಗಳ ಟ್ರೈನಿಂಗ್‌ ಕೊಟ್ಟಿದ್ದಾನೆ. ಕೆಲವರಿಗೆ ನೇಮಕಾತಿ ಆದೇಶ ಪ್ರತಿಗಳನ್ನು ತೋರಿಸಿ ವಂಚನೆ ಮಾಡುತ್ತಿದ್ದ. ಈತ ಪ್ರತೀ ವ್ಯಕ್ತಿಯಿಂದ ಕಡಿಮೆ ಎಂದರೆ 50 ಸಾವಿರದಿಂದ ಹಿಡಿದು 3.50 ಲಕ್ಷ ರೂಪಾಯಿವರೆಗೆ ಹಣ ಪಡೆದುಕೊಂಡಿದ್ದಾನೆ.

ಅದು ಗೂಗಲ್‌ ಪೇ, ಕ್ಯಾಶ್‌, ಬ್ಯಾಂಕ್‌ ಟ್ರಾನ್ಸಫರ್‌ ಸೇರಿ ಹಲವು ವಿಧಗಳಲ್ಲಿ ಹಣ ವರ್ಗಾವಣೆ ಮಾಡಿಕೊಂಡಿದ್ದಾನೆ. ಈ ಕ್ರಿಮಿನಲ್ ಆರೋಪಿಯ ವಂಚನೆ ತಿಳಿಯದ ಹಲವರು ಅಮಾಯಕರು ಮೋಸ ಹೋಗಿದ್ದಾರೆ. ಇಷ್ಟೆ ಅಲ್ಲದೆ ಅಮಾಯಕ ನಿರುದ್ಯೋಗಿ ಯುವತಿಯರಿಗೂ ವಂಚನೆ ಮಾಡಿದ್ದಾರೆ. ಹಲವು ಮಂದಿಯಿಂದ ದುಡ್ಡು ಪಡೆದುಕೊಂಡು ಯುವತಿಯರನ್ನು ಬ್ಲ್ಯಾಕ್‌ ಮೇಲ್‌ ಕೂಡಾ ಮಾಡುತ್ತಿದ್ದ. ಬೆಂಗಳೂರಿನ ಕೆಎಂಎಫ್‌ ಡೈರಿಗೆ ಕೆಲ ಸಂತ್ರಸ್ತರನ್ನು ಕರೆದುಕೊಂಡು ಹೋಗಿ ಕೆಲಸದ ಪ್ರಾತ್ಯಕ್ಷಿಕೆ ತೋರಿಸಿದ್ದಾನೆ. ನೂರಾರು ಅಮಾಯಕರು ಈ ಮಹಾ ಮೋಸಗಾರನಿಂದ ವಂಚನೆಯಾಗಿದ್ದುದ್ದನ್ನು ತಿಳಿದ ಸಾಮಾಜಿಕ ಕಾರ್ಯಕರ್ತೆ ಪ್ರಸನ್ನ ರವಿ ಅವರು ಪೂರ್ಣ ಮಾಹಿತಿ ಪಡೆದು ಆತನನ್ನು ಕರೆಸಿಕೊಂಡು ವಿಷಯ ಕೇಳಿದಾಗ ವಂಚನೆಯನ್ನು ಬಾಯ್ಬಿಟ್ಟಿದ್ದಾನೆ.

ಬಹಿರಂಗವಾಗಿ ಸಾವರ್ಕರ್ ಪರವಾಗಿ ಪ್ಲೆಕ್ಸ್ ಹಾಕಿದ ಫಝಲ್ ಅಸೈಗೋಳಿ ..

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

11 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

11 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

11 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

11 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

12 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

13 hours ago