ಮಂಗಳೂರು: ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಯುವತಿ ತನ್ನ ಪ್ರಿಯಕರನೊಂದಿಗೆ ಮದುವೆಯಾಗಿ ಪತ್ತೆಯಾಗಿದ್ದಾಳೆ.
ನಾಪತ್ತೆಯಾಗಿದ್ದ ಕಮಲಾಕ್ಷ ಎಂಬವರ ಪುತ್ರಿ, ನಗರದ ಫೈನಾನ್ಸ್ ಕಂಪನಿಯೊಂದರ ಉದ್ಯೋಗಿ ಶಿವಾನಿ (20)ತನ್ನ ಪ್ರಿಯಕರನೊಂದಿಗೆ ಮದುವೆಯಾಗಿದ್ದು, ಪೊಲೀಸರು ತಂತ್ರಜ್ಞಾನ ಮಾಹಿತಿ ಆಧಾರದಲ್ಲಿ ಪತ್ತೆ ಮಾಡಿ ಕರೆ ತಂದಿದ್ದಾರೆ.
ಜ.24ರಂದು ನಗರದ ಕಂಕನಾಡಿ ಠಾಣೆಯ ಪೊಲೀಸ್ ಆಧಿಕಾರಿಗಳ ಮುಂದೆ ಹಾಜರಾಗಿ ತಾನು ಪ್ರೀತಿಸಿದವನನ್ನು ಸ್ವಯೇಚ್ಚೆಯಿಂದ ಮದುವೆಯಾಗಿದ್ದಾಗಿ ಹೇಳಿಕೆ ನೀಡಿದ್ದು ಪತಿಯೊಂದಿಗೆ ಬಾಳುವುದಾಗಿ ಲಿಖಿತ ಹೇಳಿಕೆ ನೀಡಿದ್ದಾಳೆ.
ಲವ್ ಜಿಹಾದ್ ಆತಂಕದ ನಡುವೆ ಒಂದುವಾರ ಪೊಲೀಸರು ಪತ್ತೆಗೆ ಪ್ರಯತ್ನಿಸಿದ್ದರು. ಗೋವಾ, ಮುಂಬೈಗೆ ತೆರಳಿದ್ದ ಜೋಡಿ ಹಣದ ಸಮಸ್ಯೆ ಎದುರಾದಾಗ ಎರಡು ಮೊಬೈಲ್ ಮಾರಿ ಅದರ ಹಣದಿಂದ ಸ್ವಲ್ಪ ಸಮಯ ಕಳೆದಿದ್ದರು. ಸ್ನೇಹಿತರ ಜತೆ ಸಂಪರ್ಕ ಹೊಂದಿದ್ದನ್ನು ಪತ್ತೆ ಹಚ್ಚಿದ ಪೊಲೀಸರು ಯುಪಿಐ ಹಣವನ್ನು ಹಾಕಿದ ವಿಳಾಸ ಪತ್ತೆ ಮಾಡಿ ಈ ಜೋಡಿಯ ಸಂಪರ್ಕ ಸಾಧಿಸಿದ್ದರು.
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…