ಮಂಗಳೂರು: ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಯುವತಿ ತನ್ನ ಪ್ರಿಯಕರನೊಂದಿಗೆ ಮದುವೆಯಾಗಿ ಪತ್ತೆಯಾಗಿದ್ದಾಳೆ.
ನಾಪತ್ತೆಯಾಗಿದ್ದ ಕಮಲಾಕ್ಷ ಎಂಬವರ ಪುತ್ರಿ, ನಗರದ ಫೈನಾನ್ಸ್ ಕಂಪನಿಯೊಂದರ ಉದ್ಯೋಗಿ ಶಿವಾನಿ (20)ತನ್ನ ಪ್ರಿಯಕರನೊಂದಿಗೆ ಮದುವೆಯಾಗಿದ್ದು, ಪೊಲೀಸರು ತಂತ್ರಜ್ಞಾನ ಮಾಹಿತಿ ಆಧಾರದಲ್ಲಿ ಪತ್ತೆ ಮಾಡಿ ಕರೆ ತಂದಿದ್ದಾರೆ.
ಜ.24ರಂದು ನಗರದ ಕಂಕನಾಡಿ ಠಾಣೆಯ ಪೊಲೀಸ್ ಆಧಿಕಾರಿಗಳ ಮುಂದೆ ಹಾಜರಾಗಿ ತಾನು ಪ್ರೀತಿಸಿದವನನ್ನು ಸ್ವಯೇಚ್ಚೆಯಿಂದ ಮದುವೆಯಾಗಿದ್ದಾಗಿ ಹೇಳಿಕೆ ನೀಡಿದ್ದು ಪತಿಯೊಂದಿಗೆ ಬಾಳುವುದಾಗಿ ಲಿಖಿತ ಹೇಳಿಕೆ ನೀಡಿದ್ದಾಳೆ.
ಲವ್ ಜಿಹಾದ್ ಆತಂಕದ ನಡುವೆ ಒಂದುವಾರ ಪೊಲೀಸರು ಪತ್ತೆಗೆ ಪ್ರಯತ್ನಿಸಿದ್ದರು. ಗೋವಾ, ಮುಂಬೈಗೆ ತೆರಳಿದ್ದ ಜೋಡಿ ಹಣದ ಸಮಸ್ಯೆ ಎದುರಾದಾಗ ಎರಡು ಮೊಬೈಲ್ ಮಾರಿ ಅದರ ಹಣದಿಂದ ಸ್ವಲ್ಪ ಸಮಯ ಕಳೆದಿದ್ದರು. ಸ್ನೇಹಿತರ ಜತೆ ಸಂಪರ್ಕ ಹೊಂದಿದ್ದನ್ನು ಪತ್ತೆ ಹಚ್ಚಿದ ಪೊಲೀಸರು ಯುಪಿಐ ಹಣವನ್ನು ಹಾಕಿದ ವಿಳಾಸ ಪತ್ತೆ ಮಾಡಿ ಈ ಜೋಡಿಯ ಸಂಪರ್ಕ ಸಾಧಿಸಿದ್ದರು.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…