ಮಂಗಳೂರು: ಕೇಂದ್ರ ಸರಕಾರ ಇಂಧನ ಹಾಗೂ ಅಡುಗೆ ಅನಿಲದ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಎ.26ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ತಿಳಿಸಿದ್ದಾರೆ.
ಮಂಗಳವಾರ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 10 ಗಂಟೆಗೆ ಅಂಬೇಡ್ಕರ್ ವೃತ್ತದಿಂದ ಹಂಪನಕಟ್ಟೆಯ ಮಿನಿ ವಿಧಾನ ಸೌಧದ ವರೆಗೆ ಪ್ರತಿಭಟನಾ ಮೆರವಣಿಗೆ, ಬಳಿಕ ಸಾರ್ವಜನಿಕ ಪ್ರತಿಭಟನಾ ಸಭೆ ನಡೆಯಲಿದೆ. ಸಭೆಯಲ್ಲಿ ಎಐಸಿಸಿ ಕಾರ್ಯದರ್ಶಿ ರೋಜಿ ಎಂ. ಜಾನ್ ಅವರು ಪ್ರಧಾನ ಭಾಷಣಕಾರರಾಗಿ ಭಾಗವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಕೆಪಿಸಿಸಿಯ ಪದಾಧಿಕಾರಿಗಳು, ಜಿಲ್ಲಾ ಮುಖಂಡರು ಮೊದಲಾದವರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.
ಕೇಂದ್ರದಲ್ಲಿ ಬಿಜೆಪಿ ಸರಕಾರ ಕಳೆದ ಹನ್ನೊಂದು ವರ್ಷದಿಂದ ಜನ ವಿರೋಧಿ ನೀತಿಗಳ ಮೂಲಕ ಆಡಳಿತ ನಡೆಸುತ್ತಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಇಂಧನ ಬೆಲೆ ಕಡಿಮೆಯಿದ್ದರೂ, ಕೇಂದ್ರ ಸರಕಾರ ಬೆಲೆ ಏರಿಕೆ ಮಾಡುತ್ತಿದೆ. ಗ್ಯಾಸ್ ಬೆಲೆಯನ್ನೂ ಏಕಾಏಕಿ 50 ರೂ. ಏರಿಕೆ ಮಾಡಲಾಗಿದೆ. ಕೇಂದ್ರದ ತಪ್ಪು ಆರ್ಥಿಕ ನೀತಿಯಿಂದ ಜನರು ಹೈರಾಣಾಗಿದ್ದಾರೆ. ರಾಜ್ಯ ಸರಕಾರದ ಐದು ಗ್ಯಾರಂಟಿಯ ಸಹಾಯಧನವನ್ನು ಬೆಲೆ ಏರಿಕೆ ಮೂಲಕ ಕೇಂದ್ರ ಸರಕಾರ ಕಿತ್ತುಕೊಳ್ಳುತ್ತಿದೆ ಎಂದು ಆರೋಪಿಸಿದರು.
ಜಾತಿ ಗಣತಿಯಿಂದ ಹಿಂದುಳಿದ ವರ್ಗಗಳಿಗೆ ಪ್ರಯೋಜನವಾಗಲಿದ್ದು, ಏನಾದರೂ ವ್ಯತ್ಯಾಸಗಳು ಆಗಿದ್ದರೆ ಅದನ್ನು ರಾಜ್ಯ ಸರಕಾರ ಸಡಿಪಡಿಸಲಿದೆ ಎಂದರು. ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದ್ದು, ಡಿಸಿಎಂ ಕಾರ್ಯಕ್ರಮ ಹಿನ್ನೆಲೆಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಳವಡಿಸಿದ್ದ ಫ್ಲೆಕ್ಸ್ಗಳಿಗೆ ಹಾನಿ ಮಾಡಿದೆ. ಕಳೆದ ಅನೇಕ ವರ್ಷಗಳಿಂದ ಇದೇ ರೀತಿಯ ಕೃತ್ಯ ಎಸಗುತ್ತಿದೆ. ಇದು ಹೇಡಿತನದ ಕೆಲಸವಾಗಿದ್ದು, ಜಿಲ್ಲಾ ಕಾಂಗ್ರೆಸ್ ಇದನ್ನು ಖಂಡಿಸುತ್ತದೆ ಎಂದರು.
ಮುಖಂಡರಾದ ಎಂ. ಶಶಿಧರ ಹೆಗ್ಡೆ, ನವೀನ್ ಡಿಸೋಜಾ, ಶುಭೋದಯ ಆಳ್ವ, ಶಾಹುಲ್ ಹಮೀದ್, ಟಿ.ಕೆ. ಸುಧೀರ್, ನೀರಜ್ಪಾಲ್, ಸುಹಾನ್ ಆಳ್ವ, ಪ್ರೇಮ್ ಬಳ್ಳಾಲ್ಬಾಗ್ ಉಪಸ್ಥಿತರಿದ್ದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…