Featured

ಮಂಗಳೂರು : ಕೇಂದ್ರ ಬಜೆಟ್‌ನಲ್ಲಿ ಬಡವರು ಹಾಗೂ ಮಧ್ಯಮ ವರ್ಗದ ಜನರ ಬಹುಕಾಲದ ಬೇಡಿಕೆಗಳನ್ನು ಈಡೇರಿಸಲಾಗಿದೆ  : ಸತೀಶ್ ಕುಂಪಲ – vishwanews24

ಮಂಗಳೂರು : ಕೇಂದ್ರ ಸರಕಾರದ 2025ರ ಬಜೆಟ್ ಐತಿಹಾಸಿಕವಾದುದು : ಸತೀಶ್ ಕುಂಪಲ

ಮಂಗಳೂರು : ಕೇಂದ್ರ ಸರಕಾರದ 2025ರ ಬಜೆಟ್ ಐತಿಹಾಸಿಕವಾದುದು. ಬಡವರು ಹಾಗೂ ಮಧ್ಯಮ ವರ್ಗದ ಜನರನ್ನು ಗುರಿಯಾಗಿಸಿ ಅನೇಕ ವಿಧದ ಸವಲತ್ತುಗಳನ್ನು ಕೇಂದ್ರ ಬಜೆಟ್‌ನಲ್ಲಿ ಒದಗಿಸುವ ಮೂಲಕ ಅವರ ಬಹುಕಾಲದ ಬೇಡಿಕೆಗಳನ್ನು ಈಡೇರಿಸಲಾಗಿದೆ ಎಂದು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದರು.

ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೃಷಿ, ಶಿಕ್ಷಣ ಕ್ಷೇತ್ರಕ್ಕೆ ಆದ್ಯತೆ ನೀಡುವ ಮೂಲಕ ಬಜೆಟ್ ಜನಸಾಮಾನ್ಯರ ಆಶೋತ್ತರಗಳಿಗೆ ಸ್ಪಂದಿಸಿದೆ. ಗ್ರಾಮೀಣ ಹಾಗೂ ನಗರ ಪ್ರದೇಶದ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ವಾರ್ಷಿಕ 12 ಲಕ್ಷ ರೂ. ತನಕದ ಆದಾಯಕ್ಕೆ ಆದಾಯ ತೆರಿಗೆಯಿಂದ ಮುಕ್ತಿ ನೀಡಿದ ಐತಿಹಾಸಿಕ ನಿರ್ಣಯವು ಜನ ಸಾಮಾನ್ಯ ಹಾಗೂ ಮಧ್ಯಮ ವರ್ಗಕ್ಕೆ ಮೋದಿ ಸರ್ಕಾರದ ಭರ್ಜರಿ ಗಿಫ್ಟ್. ಇದರಿಂದ 10 ಕೋಟಿ ಜನರಿಗೆ ಲಾಭವಾ ಗಲಿದೆ.

ಶೈಕ್ಷಣಿಕ ಕ್ಷೇತ್ರದಲ್ಲಿ ಮುಂದಿನ 5 ವರ್ಷಗಳಲ್ಲಿ ಸರಕಾರಿ ಶಾಲೆಗಳಿಗೆ 50,000 ಅಟಲ್ ಟಿಂಕರಿಂಗ್ ಲ್ಯಾಬ್ ಸ್ಥಾಪನೆಯ ಪರಿಣಾಮ ಸರಕಾರಿ ಶಾಲೆಗೆಳಿಗೆ ಕಂಪ್ಯೂಟರ್, 3ಡಿ ಪ್ರಿಂಟರ್ಸ್, ವಿದ್ಯಾರ್ಥಿಗಳಿಗೆ ಅನ್ವೇಷಣೆ ಮಾಡಲು ಅವಕಾಶ, ಇಲೆಕ್ಟ್ರಾನಿಕ್ ಕಿಟ್ ಮುಂತಾದವುಗಳನ್ನು ಕೇಂದ್ರ ಸರಕಾರ ಒದಗಿಸಲಿದೆ. ವಿಮಾ ಕ್ಷೇತ್ರದಲ್ಲಿ ವಿದೇಶೀ ಹೂಡಿಕೆ ಮಿತಿಯನ್ನು ಶೇ. 74ರಿಂದಂದ ಶೇ. 100ಕ್ಕೆ ಏರಿಕೆ ಮಾಡಿರುವುದರಿಂದಾಗಿ ಹೊಸ ಉದ್ಯೋಗ ಸೃಷ್ಟಿ, ಇನ್ಸೂರೆನ್ಸ್ ಪ್ರೀಮಿಯಂ ಕಡಿಮೆಯಲ್ಲಿ ಲಭ್ಯ ಆಗಲಿದೆ. ಮುಂದಿನ 5 ವರ್ಷಗಳಲ್ಲಿ 75000 ವೈದ್ಯಕೀಯ ಸೀಟುಗಳ ಏರಿಕೆಯಿಂದ ವೈದ್ಯಕೀಯ ವಿದ್ಯಾರ್ಹತೆ ಪಡೆದು ಆರೋಗ್ಯ ಕ್ಷೇತ್ರಕ್ಕೆ ಉತ್ತಮ ಸೇವೆ ನೀಡಲು ಸಹಕಾರಿಯಾಗಲಿದೆ ಎಂದರು.

ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ವಕ್ತಾರ ಅರುಣ್ ಶೇಟ್, ಮಾಧ್ಯಮ ಸಂಚಾಲಕ ವಸಂತ ಪೂಜಾರಿ ಉಪಸ್ಥಿತರಿದ್ದರು.

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

7 hours ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

7 hours ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

7 hours ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

8 hours ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

10 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

10 hours ago