Featured

ಮಂಗಳೂರು: ಕೇರಳದಿಂದ ಆಗಮಿಸುವ ವಿದ್ಯಾರ್ಥಿಗಳಿಗೆ 7 ದಿನಗಳ ಐಸೋಲೇಶನ್‌  ಹಾಗೂ 8ನೇ ದಿನದ ಆರ್‌ಟಿಪಿಸಿಆರ್‌‌ ಪರೀಕ್ಷೆ ಕಡ್ಡಾಯ : ಜಿಲ್ಲಾಧಿಕಾರಿಗಳ ಆದೇಶ – Vishwanews24

ಮಂಗಳೂರು: ಕೇರಳದಿಂದ ಆಗಮಿಸುವ ವಿದ್ಯಾರ್ಥಿಗಳಿಗೆ 7 ದಿನಗಳ ಐಸೋಲೇಶನ್‌  ಹಾಗೂ 8ನೇ ದಿನದ ಆರ್‌ಟಿಪಿಸಿಆರ್‌‌ ಪರೀಕ್ಷೆ ಕಡ್ಡಾಯ : ಜಿಲ್ಲಾಧಿಕಾರಿಗಳ ಆದೇಶ – Vishwanews24

ಮಂಗಳೂರು: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸೋಂಕು ತಡೆಗೆ ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತದ ವತಿಯಿಂದ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಲಾಗಿದೆ.

ಕೇರಳದಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇ.5.6ರಷ್ಟಿದ್ದು, ಸೋಂಕನ್ನು ನಿಯಂತ್ರಿಸು ಸಲುವಾಗಿ ವಿದ್ಯಾರ್ಥಿಗಳಿಗೆ ಕೇರಳದಿಂದ ಹಿಂದಿರುಗುವ ವೇಳೆಯಲ್ಲಿ 72 ಗಂಟೆಗಳ ಆರ್‌ಟಿಪಿಸಿಆರ್‌‌‌‌ ಪರೀಕ್ಷೆಗೊಳಪಡಿಸಿ ಆರ್‌‌ಟಿಪಿಸಿಆರ್‌‌ ನೆಗೆಟಿವ್‌ ವರದಿ ಹೊಂದುವುದಲ್ಲದೇ, 7 ದಿನಗಳ ಐಸೋಲೇಶನ್‌ ಹಾಗೂ 8ನೇ ದಿನದ ಆರ್‌ಟಿಪಿಸಿಆರ್‌‌ ಪರೀಕ್ಷೆ ಮಾಡಿಸುವುದು ಕಡ್ಡಾಯವಾಗಿದೆ. ಈ ಎಲ್ಲಾ ಸೂಚನೆಗಳು ಜಿಲ್ಲೆಯ ಎಲ್ಲಾ ವೈದ್ಯಕೀಯ ಕಾಲೇಜುಗಳು, ಎಲ್ಲಾ ಇಂಜಿನಿಯರಿಂಗ್‌ ಕಾಲೇಜುಗಳು ಹಾಗೂ ಎಲ್ಲಾ ಪ್ಯಾರಾ ಮೆಡಿಕಲ್‌ ಕಾಲೇಜುಗಳಿಗೆ ಅನ್ವಯವಾಗಲಿದೆ.

ಜಿಲ್ಲೆಯ ತಾಂತ್ರಿಕಾ ಸಲಹಾ ಸಮಿತಿಯು ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೆಲವೊಂದು ಕ್ರಮಗಳನ್ನು ಶಿಫಾರಸ್ಸು ಮಾಡಿದ್ದು, ತಜ್ಞರ ಸಮಿತಿಯ ಶಿಫಾರಸ್ಸುಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಿಸಲು ನಿರ್ದೇಶಿಸಿದೆ ಎಂದು ಆದೇಶದಲ್ಲಿ ಹೇಳಿದೆ.

ಕೊರೊನಾ ನಿಯಂತ್ರಿಸುವ ಸಲುವಾಗಿ ಎಲ್ಲಾ ಶಿಕ್ಷಣ ಸಂಸ್ಥಗಳಲ್ಲಿ, ಅಪಾರ್ಟ್‌ಮೆಂಟ್‌ಗಳಲ್ಲಿ, ಮಾಲ್‌‌ಗಳಲ್ಲಿ ಸ್ಕ್ರೀನಿಂಗ್‌‌, ಟೆಸ್ಟಿಂಗ್‌‌‌‌ಗಳನ್ನು ಮತ್ತಷ್ಟು ಹೆಚ್ಚಿಸುವುದು, ಕೊರೊನಾ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ಐಸೋಲೇಶನ್‌ಗೆ ಒಳಪಡಿಸುವುದು ಎಂದು ತಿಳಿಸಿದೆ.

ಅಂತರಾಷ್ಟ್ರೀಯ ಪ್ರಯಾಣಕರ ಪರೀಕ್ಷೆಯನ್ನು ಮುಂದುವರಿಸಲಾಗಿದೆ. ಮಾರ್ಗಸೂಚಿಯ ಪ್ರಕಾರ ಶಿಕ್ಷಣ ಸಂಸ್ಥೆಗಳಲ್ಲಿ ರ್‍ಯಾಂಡಮ್‌‌‌ ಪರೀಕ್ಷೆಗಳನ್ನು ನಿಲ್ಲಿಸಲಾಗುವುದು ಎಂದು ಹೇಳಿದೆ.

ಹೋಂ ಐಸೋಲೇಷನ್‌ ಪ್ರಕರಣಗಳತ್ತ ಕಟ್ಟುನಿಟ್ಟಾಗಿ ಗಮನವಹಿಸಲಾಗುವುದು, ಕಂಟೈನ್‌ಮೆಂಟ್‌ ಝೋನ್‌ಗಳನ್ನು ಕೂಡಾ ಸೂಕ್ಷ್ಮವಾಗಿ ಗಮನಿಸಲಾಗುತ್ತದೆ ಆಸ್ಪತ್ರೆಯ ಸಿಬ್ಬಂದಿಗಳು ಐಪಿಸಿ ಪ್ರೋಟೋಕಾಲ್‌ಗಳನ್ನು ಕಡ್ಡಾಯವಾಗಿ ಪಾಲಿಸಬೇಕು.

15-18 ವರ್ಷದ ಮಕ್ಕಳಿಗೆ ಕೊರೊನಾ ಲಸಿಕೆ ನೀಡುವುಕೆಯನ್ನು ಕೂಡಲೇ ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ. ಅಲ್ಲದೇ ಕೊರೊನಾ ಮುನ್ನೆಚ್ಚಾರಿಕಾ ಕ್ರಮಗಳಾದ ಮಾಸ್ಕ್‌‌‌, ಸ್ಯಾನಿಟೈಸ್‌ ಹಾಗೂ ಸಾಮಾಜಿಕ ಅಂತರವನ್ನು ಎಲ್ಲರೂ ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago