Featured

ಮಂಗಳೂರು: ಕೇರಳದಿಂದ ಆಗಮಿಸುವ ವಿದ್ಯಾರ್ಥಿಗಳಿಗೆ 7 ದಿನಗಳ ಐಸೋಲೇಶನ್‌  ಹಾಗೂ 8ನೇ ದಿನದ ಆರ್‌ಟಿಪಿಸಿಆರ್‌‌ ಪರೀಕ್ಷೆ ಕಡ್ಡಾಯ : ಜಿಲ್ಲಾಧಿಕಾರಿಗಳ ಆದೇಶ – Vishwanews24

ಮಂಗಳೂರು: ಕೇರಳದಿಂದ ಆಗಮಿಸುವ ವಿದ್ಯಾರ್ಥಿಗಳಿಗೆ 7 ದಿನಗಳ ಐಸೋಲೇಶನ್‌  ಹಾಗೂ 8ನೇ ದಿನದ ಆರ್‌ಟಿಪಿಸಿಆರ್‌‌ ಪರೀಕ್ಷೆ ಕಡ್ಡಾಯ : ಜಿಲ್ಲಾಧಿಕಾರಿಗಳ ಆದೇಶ – Vishwanews24

ಮಂಗಳೂರು: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸೋಂಕು ತಡೆಗೆ ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತದ ವತಿಯಿಂದ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಲಾಗಿದೆ.

ಕೇರಳದಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇ.5.6ರಷ್ಟಿದ್ದು, ಸೋಂಕನ್ನು ನಿಯಂತ್ರಿಸು ಸಲುವಾಗಿ ವಿದ್ಯಾರ್ಥಿಗಳಿಗೆ ಕೇರಳದಿಂದ ಹಿಂದಿರುಗುವ ವೇಳೆಯಲ್ಲಿ 72 ಗಂಟೆಗಳ ಆರ್‌ಟಿಪಿಸಿಆರ್‌‌‌‌ ಪರೀಕ್ಷೆಗೊಳಪಡಿಸಿ ಆರ್‌‌ಟಿಪಿಸಿಆರ್‌‌ ನೆಗೆಟಿವ್‌ ವರದಿ ಹೊಂದುವುದಲ್ಲದೇ, 7 ದಿನಗಳ ಐಸೋಲೇಶನ್‌ ಹಾಗೂ 8ನೇ ದಿನದ ಆರ್‌ಟಿಪಿಸಿಆರ್‌‌ ಪರೀಕ್ಷೆ ಮಾಡಿಸುವುದು ಕಡ್ಡಾಯವಾಗಿದೆ. ಈ ಎಲ್ಲಾ ಸೂಚನೆಗಳು ಜಿಲ್ಲೆಯ ಎಲ್ಲಾ ವೈದ್ಯಕೀಯ ಕಾಲೇಜುಗಳು, ಎಲ್ಲಾ ಇಂಜಿನಿಯರಿಂಗ್‌ ಕಾಲೇಜುಗಳು ಹಾಗೂ ಎಲ್ಲಾ ಪ್ಯಾರಾ ಮೆಡಿಕಲ್‌ ಕಾಲೇಜುಗಳಿಗೆ ಅನ್ವಯವಾಗಲಿದೆ.

ಜಿಲ್ಲೆಯ ತಾಂತ್ರಿಕಾ ಸಲಹಾ ಸಮಿತಿಯು ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೆಲವೊಂದು ಕ್ರಮಗಳನ್ನು ಶಿಫಾರಸ್ಸು ಮಾಡಿದ್ದು, ತಜ್ಞರ ಸಮಿತಿಯ ಶಿಫಾರಸ್ಸುಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಿಸಲು ನಿರ್ದೇಶಿಸಿದೆ ಎಂದು ಆದೇಶದಲ್ಲಿ ಹೇಳಿದೆ.

ಕೊರೊನಾ ನಿಯಂತ್ರಿಸುವ ಸಲುವಾಗಿ ಎಲ್ಲಾ ಶಿಕ್ಷಣ ಸಂಸ್ಥಗಳಲ್ಲಿ, ಅಪಾರ್ಟ್‌ಮೆಂಟ್‌ಗಳಲ್ಲಿ, ಮಾಲ್‌‌ಗಳಲ್ಲಿ ಸ್ಕ್ರೀನಿಂಗ್‌‌, ಟೆಸ್ಟಿಂಗ್‌‌‌‌ಗಳನ್ನು ಮತ್ತಷ್ಟು ಹೆಚ್ಚಿಸುವುದು, ಕೊರೊನಾ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ಐಸೋಲೇಶನ್‌ಗೆ ಒಳಪಡಿಸುವುದು ಎಂದು ತಿಳಿಸಿದೆ.

ಅಂತರಾಷ್ಟ್ರೀಯ ಪ್ರಯಾಣಕರ ಪರೀಕ್ಷೆಯನ್ನು ಮುಂದುವರಿಸಲಾಗಿದೆ. ಮಾರ್ಗಸೂಚಿಯ ಪ್ರಕಾರ ಶಿಕ್ಷಣ ಸಂಸ್ಥೆಗಳಲ್ಲಿ ರ್‍ಯಾಂಡಮ್‌‌‌ ಪರೀಕ್ಷೆಗಳನ್ನು ನಿಲ್ಲಿಸಲಾಗುವುದು ಎಂದು ಹೇಳಿದೆ.

ಹೋಂ ಐಸೋಲೇಷನ್‌ ಪ್ರಕರಣಗಳತ್ತ ಕಟ್ಟುನಿಟ್ಟಾಗಿ ಗಮನವಹಿಸಲಾಗುವುದು, ಕಂಟೈನ್‌ಮೆಂಟ್‌ ಝೋನ್‌ಗಳನ್ನು ಕೂಡಾ ಸೂಕ್ಷ್ಮವಾಗಿ ಗಮನಿಸಲಾಗುತ್ತದೆ ಆಸ್ಪತ್ರೆಯ ಸಿಬ್ಬಂದಿಗಳು ಐಪಿಸಿ ಪ್ರೋಟೋಕಾಲ್‌ಗಳನ್ನು ಕಡ್ಡಾಯವಾಗಿ ಪಾಲಿಸಬೇಕು.

15-18 ವರ್ಷದ ಮಕ್ಕಳಿಗೆ ಕೊರೊನಾ ಲಸಿಕೆ ನೀಡುವುಕೆಯನ್ನು ಕೂಡಲೇ ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ. ಅಲ್ಲದೇ ಕೊರೊನಾ ಮುನ್ನೆಚ್ಚಾರಿಕಾ ಕ್ರಮಗಳಾದ ಮಾಸ್ಕ್‌‌‌, ಸ್ಯಾನಿಟೈಸ್‌ ಹಾಗೂ ಸಾಮಾಜಿಕ ಅಂತರವನ್ನು ಎಲ್ಲರೂ ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

Vishwa News 24

Recent Posts

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…

2 hours ago

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

8 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

10 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

10 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

11 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

11 hours ago