Featured

ಮಂಗಳೂರು : ಕೇರಳದಿಂದ ಆಗಮಿಸುವವರಿಗೆ ಆರ್‌ ಟಿ ಪಿಸಿಆರ್ ನೆಗೆಟಿವ್ ರಿಪೋರ್ಟ್ ಇಲ್ಲದವರಿಗೆ ಸ್ಥಳದಲ್ಲಿಯೇ ಉಚಿತ ಪರೀಕ್ಷೆ -Vishwanews24

ಮಂಗಳೂರು : ಆರ್‌ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಇದ್ದವರಿಗೆ ಮಾತ್ರ ಮಂಗಳೂರು ಪ್ರವೇಶಕ್ಕೆ ಅನುಮತಿ

ಕೇರಳದಿಂದ ಆಗಮಿಸುವವರಿಗೆ ಆರ್‌ ಟಿ ಪಿಸಿಆರ್ ನೆಗೆಟಿವ್ ರಿಪೋರ್ಟ್ ಇಲ್ಲದವರಿಗೆ ಸ್ಥಳದಲ್ಲಿಯೇ ಉಚಿತ ಪರೀಕ್ಷೆ .

ಮಂಗಳೂರು : ಕೇರಳ ಮತ್ತು ಕರ್ನಾಟಕದ ದ.ಕ. ಜಿಲ್ಲೆಯ ಗಡಿಯಲ್ಲಿ ಕೇರಳದಿಂದ ಆಗಮಿಸುವವರಿಗೆ ಆರ್‌ಟಿಪಿಸಿಆರ್ ನೆಗಟಿವ್ ವರದಿ ಹೊಂದಿರುವುದನ್ನು ಕಡ್ಡಾಯ ಮಾಡಲಾಗಿದೆ. ಈ ನಿಟ್ಟಿನಲ್ಲಿ ತಪಾಸಣೆಗಾಗಿ ದ.ಕ. ಮತ್ತು ಕೇರಳ ಗಡಿ ಸಂಪರ್ಕಿಸುವ ತಲಪಾಡಿ, ಜಾಲ್ಸೂರು, ನೆಟ್ಟನಿಗೆ ಮುಡ್ನೂರು ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಚೆಕ್ ಪೋಸ್ಟ್ ತೆರೆಯಲಾಗಿದ್ದು, ಆರ್‌ಟಿ-ಪಿಸಿಆರ್ ನೆಗಟಿವ್ ವರದಿ ಹೊಂದಿದ್ದರೆ ಮಾತ್ರವೇ ಜಿಲ್ಲೆಗೆ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತಿದೆ.

ಮಂಗಳೂರಿನ ತಲಪಾಡಿಯಲ್ಲಿ ಮಂಗಳವಾರ ಬೆಳಗ್ಗೆ 10 ಗಂಟೆಯ ನಂತರ ತಪಾಸಣೆ ಆರಂಭಿಸಲಾಗಿದೆ. ಆರ್‌ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಇದ್ದವರಿಗೆ ಮಾತ್ರ ಮಂಗಳೂರು ಪ್ರವೇಶಕ್ಕೆ ಅನುಮತಿ ನೀಡಲಾಗುತ್ತಿದೆ. ಆರ್‌ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಇಲ್ಲದವರಿಗೆ ಸ್ಥಳದಲ್ಲಿಯೇ ಉಚಿತ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗಿದ್ದು, ಎರಡು ದಿನಗಳಲ್ಲಿ ಟೆಸ್ಟ್ ವರದಿ ಅವರ ಕೈಸೇರಲಿದೆ.

ಕೇರಳ ಗಡಿ ಭಾಗದಲ್ಲಿ ಕೊರೋನ ಪ್ರಕರಣಗಳು ಹೆಚ್ಚುತ್ತಿರುವಂತೆ ರೂಪಾಂತರಿತ ಡೆಲ್ಟಾ ಕೋವಿಡ್ ಸೋಂಕು ಪತ್ತೆಯಾಗಿರುವ ಶಂಕೆಯ ಹಿನ್ನೆಲೆಯಲ್ಲಿ ಆ ರಾಜ್ಯದ ಗಡಿಯನ್ನು ಹಂಚಿಕೊಳ್ಳುವ ಕರ್ನಾಟಕದ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ರಾಜ್ಯ ಸರಕಾರ ನಿರ್ದೇಶನ ನೀಡಿದೆ. ಈ ಹಿನ್ನೆಲೆಯಲ್ಲಿ ಕೇರಳ ಮತ್ತು ದ.ಕ. ಜಿಲ್ಲೆಯ ಗಡಿಭಾಗದ ಚೆಕ್‌ಪೋಸ್ಟ್‌ಗಳಲ್ಲಿ ಕಟ್ಟು ನಿಟ್ಟಿನ ಕ್ರಮ ವಹಿಸಲಾಗಿದೆ.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

1 day ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago