ಮಂಗಳೂರು: ತುಳು ಭಾಷೆಯ ಉಳಿವಿಗಾಗಿ ಮತ್ತು ತುಳು ಪದಗಳ ಪುನರ್ ಬಳಕೆಗೆ ಹಾಗೂ ಜನರಿಗೆ ಪರಿಚಯಿಸಲೆಂದು ಶಬ್ದಕೋಶ ಬಿಡುಗಡೆ ಮಾಡಲಾಯಿತ್ತು.
‘ಕೊಪ್ಪರಿಗೆ’ ಎಂಬ ಆನ್ಲೈನ್ ತುಳು ಶಬ್ದಕೋಶದ ಬಿಡುಗಡೆ ಸಮಾರಂಭವು ಮಂಗಳೂರಿನ ಊರ್ವ ಸ್ಟೋರ್ ಯುವವಾಹಿನಿ ಸಭಾಂಗಣದಲ್ಲಿ ಇಂದು ನಡೆಯಿತು. ಕೊಪ್ಪರಿಗೆ ಆನ್ಲೈನ್ ತುಳು ಡಿಕ್ಷನರಿಯನ್ನು ವಿಧಾನ ಪರಿಷತ್ತಿನ ಮಾಜಿ ಸದಸ್ಯ ಹಾಗೂ ಬಿಜೆಪಿ ವಕ್ತಾರರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ರವರು ಬಿಡುಗಡೆ ಮಾಡಿದರು. ಕೊಪ್ಪರಿಗೆ ಡಿಕ್ಷನರಿಯ ಡೆವೆಲಪರ್ ಸುಮಂತ್ ಪೂಜಾರಿ ಹೆಬ್ರಿಯವರನ್ನು ವೇದಿಕೆಯಲ್ಲಿ ಸನ್ಮಾನಿಸಲಾಯಿತು.
ಇದೇ ವೇಳೆ ಮಾತನಾಡಿದ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಜಿ ಕತ್ತಲ್ಸಾರ್, ಕೊಪ್ಪರಿಗೆ ತುಳು ಶಬ್ದಕೋಶದ ಉಪಯೋಗವೂ ಜಗತ್ತಿನ ಎಲ್ಲಾ ತುಳುವರಿಗೂ ಸಿಗಲಿ. ಈ ಮೂಲಕ ಕೊಪ್ಪರಿಗೆ ತುಳುನಾಡಿನ ಕೊಪ್ಪರಿಗೆ ಯಾಗಲಿ. ತುಳುಭಾಷೆಯನ್ನು ರಾಜ್ಯದಲ್ಲಿ ಅಧಿಕೃತ ಮಾಡುವ ಸರ್ವ ಪ್ರಯತ್ನವನ್ನು ನಾವೆಲ್ಲರೂ ಸೇರಿ ಮಾಡೋಣ ಎಂದು ಕರೆ ನೀಡಿದರು.
ವೇದಿಕೆಯಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಜಿ ಕತ್ತಲ್ ಸರ್, ಯಕ್ಷಧ್ರುವ ಪಟ್ಲ ಫೌಂಡೇಶನ್ ಪಟ್ಲ ಸತೀಶ್ ಶೆಟ್ಟಿ, ಸನಾ ಗ್ರೂಪ್ ಮಾಲಕ ಸಾಗರ್, ಜೈ ತುಳುನಾಡ್ (ರಿ.) ಸಂಘಟನೆಯ ಅಧ್ಯಕ್ಷ ಸುದರ್ಶನ ಸುರತ್ಕಲ್, ಕೊಪ್ಪರಿಗೆ ಡಿಕ್ಷನರಿಯ ಡೆವೆಲಪರ್ ಸುಮಂತ್ ಪೂಜಾರಿ ಹೆಬ್ರಿ ಉಪಸ್ಥಿತರಿದ್ದರು. ಅರುಣ್ ಸುರತ್ಕಲ್ ಕಾರ್ಯಕ್ರಮ ನಿರೂಪಿಸಿದರು.
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್ಕೌಂಟರ್ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ್ಸ್ ಬಿಲ್ಡಿಂಗ್s…