ಮಂಗಳೂರು : ಕೊರಗಜ್ಜನ ಕಟ್ಟೆ ಬಳಿ ಕಾಂಡೋಮ್ ಹಾಕಿ ಅಪವಿತ್ರಗೊಳಿಸಿದ ಪ್ರಕರಣ : ಆರೋಪಿ ವಶಕ್ಕೆ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು : ಕೊರಗಜ್ಜನ ಕಟ್ಟೆ ಬಳಿ ಕಾಂಡೋಮ್ ಹಾಕಿ ಅಪವಿತ್ರಗೊಳಿಸಿದ ಪ್ರಕರಣ : ಆರೋಪಿ ವಶಕ್ಕೆ – Vishwanews24

ಮಂಗಳೂರು: ಮಾರ್ನಮಿಕಟ್ಟೆಯಲ್ಲಿರುವ ಕೊರಗಜ್ಜನ ಗುಡಿಯ ಕಾಣಿಕೆ ಡಬ್ಬಿಯಲ್ಲಿ ಕಾಂಡೋಮ್ ಇಟ್ಟು ಅಪವಿತ್ರಗೊಳಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದು, ಇದೀಗ ಆತ ದೇವಸ್ಥಾನ, ದೈವಸ್ಥಾನ, ಮಸೀದಿ ಸೇರಿದಂತೆ 18 ಕಡೆಗಳಲ್ಲಿ ಕಾಂಡೋಮ್, ಭಿತ್ತಿಪತ್ರ, ಏಸುವಿನ ಕುರಿತ ಲೇಖನ ಹಾಕಿದ್ದ ಎಂದು ತಿಳಿದು ಬಂದಿದೆ.

ವಶಕ್ಕೆ ಪಡೆದಿರುವ ವ್ಯಕ್ತಿಯನ್ನು ಹುಬ್ಬಳ್ಳಿ ಮೂಲದವನಾದ, ಪ್ರಸ್ತುತ ಮಂಗಳೂರಿನಲ್ಲಿ ವಾಸವಿರುವ ದೇವದಾಸ್ ದೇಸಾಯಿ ಎಂದು ಗುರುತಿಸಲಾಗಿದೆ.

ಓರ್ವ ವ್ಯಕ್ತಿ ಕೊರಗಜ್ಜನ ಗುಡಿಗೆ ಬಂದು ವಸ್ತುವೊಂದನ್ನು ಇಟ್ಟು ಹೋಗುತ್ತಿರುವುದು ಸಿಸಿಟಿವಿಯಲ್ಲಿ ದಾಖಲಾಗಿದ್ದು, ಇದರ ಆಧಾರದಲ್ಲಿ ಆ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಉಡುಪಿ : ಕೇವಲ ಅಮಾನತು ಅಥವಾ ವರ್ಗಾವಣೆ ಮಾಡಿದರೆ ಸಾಲದು ಬದಲಾಗಿ ಅವರನ್ನು ಸೇವೆಯಿಂದಲೇ ವಜಾ ಮಾಡಬೇಕು ಮತ್ತು ಕೂಡಲೇ ಬಂಧಿಸಿ ತನಿಖೆಗೆ ಒಳಪಡಿಸಬೇಕು : ಕೊರಗ ಅಭಿವೃದ್ದಿ ಸಂಘಗಳ ಒಕ್ಕೂಟ – Vishwanews24

 

Leave a Reply