Featured

ಮಂಗಳೂರು: ಕೊರಗಜ್ಜನ ದೈವಸ್ಥಾನ ನಿರ್ಮಿಸಿ,  ತನ್ನ ಜೀವನವನ್ನೇ ದೈವ -ದೇವರ ಪೂಜೆಗೆ  ಮುಡಿಪಾಗಿರಿಸಿದ  ಖಾಸಿಂ ಸಾಹೇಬ್ -Vishwanews24

ಮಂಗಳೂರು: ಕೊರಗಜ್ಜನ ದೈವಸ್ಥಾನ ನಿರ್ಮಿಸಿ,  ತನ್ನ ಜೀವನವನ್ನೇ ದೈವ -ದೇವರ ಪೂಜೆಗೆ  ಮುಡಿಪಾಗಿರಿಸಿದ  ಖಾಸಿಂ ಸಾಹೇಬ್ -Vishwanews24

19 ವರ್ಷಗಳಿಂದ ಕೊರಗಜ್ಜನ ಆರಾಧನೆ ಮಾಡುತ್ತಿರುವ ಖಾಸಿಂ..

ಮಂಗಳೂರು, (Vishwanews24 ) : ಮಂಗಳೂರಿನ ಹೊರವಲಯದ ಮೂಲ್ಕಿಯ ಬಳ್ಕುಂಜೆ ಗ್ರಾಮದ ಕವತ್ತಾರು ಎಂಬಲ್ಲಿ ಸುಮಾರು 19 ವರ್ಷಗಳಿಂದ 65ರ ಹರೆಯದ ಪಿ.ಖಾಸಿಂ ಸಾಹೇಬ್ ಎಂಬವರು ಕೊರಗಜ್ಜ ಹಾಗೂ ಪರಿವಾರ ದೈವಗಳನ್ನು ಸದ್ದಿಲ್ಲದೆ ಪೂಜಿಸಿಕೊಂಡು ಬರುತ್ತಿದ್ದಾರೆ. ಕೇರಳದ ಪಾಲಕ್ಕಾಡ್ ಜಿಲ್ಲೆಯವರಾದ ಖಾಸಿಂ ತಮ್ಮ 30ರ ಹರೆಯದಲ್ಲಿ ಗರಗಸ ಹಿಡಿದು ಮರಗಳನ್ನು ಸೀಳುವ ಕೆಲಸಕ್ಕೆಂದು ಕರ್ನಾಟಕದ ಸುಳ್ಯ, ಬಳ್ಕುಂಜೆ ಬಳಿಕ ಕುಟುಂಬ ಸಹಿತ ಮುಲ್ಕಿಯ ಕವತ್ತಾರಿಗೆ ಬಂದು ನೆಲೆ ನಿಂತರು.

ಪಿ. ಕಾಸಿಂ ಸಾಹೇಬ್‌ ಅವರು ಶ್ರೀಸ್ವಾಮಿ ಕೊರಗಜ್ಜ, ಕೊರತಿ, ಗುಳಿಗ ದೈವಸ್ಥಾನ, ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಗಳನ್ನು ನಿರ್ಮಿಸಿದ್ದು ಪ್ರತಿದಿನ ದೀಪ ಸೇವೆ, ಸಂಕ್ರಾಂತಿ ಮತ್ತಿತರ ಸಂದರ್ಭ ವಿಶೇಷ ಪೂಜೆಯನ್ನೂ ಮಾಡುತ್ತಿದ್ದಾರೆ. ತನ್ನ ಜೀವನವನ್ನೇ ದೇವ-ದೈವರ ಪೂಜೆ ಕಾಸಿಂ ಸಾಹೇಬ್‌ ಮುಡಿಪಾಗಿರಿಸಿದ್ದಾರೆ.

ಮಂಗಳೂರಿನ ಹೊರವಲಯದ ಮೂಲ್ಕಿಯ ಬಳ್ಕುಂಜೆ ಗ್ರಾಮದ ಕವತ್ತಾರು ಎಂಬಲ್ಲಿ ಸುಮಾರು 19 ವರ್ಷಗಳಿಂದ 65ರ ಹರೆಯದ ಪಿ.ಖಾಸಿಂ ಸಾಹೇಬ್ ಎಂಬವರು ಕೊರಗಜ್ಜ ಹಾಗೂ ಪರಿವಾರ ದೈವಗಳನ್ನು ಸದ್ದಿಲ್ಲದೆ ಪೂಜಿಸಿಕೊಂಡು ಬರುತ್ತಿದ್ದಾರೆ. ಕೇರಳದ ಪಾಲಕ್ಕಾಡ್ ಜಿಲ್ಲೆಯವರಾದ ಖಾಸಿಂ ತಮ್ಮ 30ರ ಹರೆಯದಲ್ಲಿ ಗರಗಸ ಹಿಡಿದು ಮರಗಳನ್ನು ಸೀಳುವ ಕೆಲಸಕ್ಕೆಂದು ಕರ್ನಾಟಕದ ಸುಳ್ಯ, ಬಳ್ಕುಂಜೆ ಬಳಿಕ ಕುಟುಂಬ ಸಹಿತ ಮುಲ್ಕಿಯ ಕವತ್ತಾರಿಗೆ ಬಂದು ನೆಲೆ ನಿಂತರು.

35 ವರ್ಷಗಳ ಹಿಂದೆ ಸರಕಾರಿ ಜಾಗದಲ್ಲಿ ಜೋಪಡಿ ಕಟ್ಟಿಕೊಂಡು ಪತ್ನಿ ಹಾಗೂ ಐವರು ಮಕ್ಕಳ ಜೊತೆ ಸಂಸಾರ ಆರಂಭಿಸಿದ್ದರು. ಸ್ವಲ್ಪ ಸಮಯದ ನಂತರ ಇವರ ಕುಟುಂಬದಲ್ಲಿ ಸಮಸ್ಯೆಗಳು ಎದುರಾದವು. ಮಗ ತೀವ್ರ ಅನಾರೋಗ್ಯಕ್ಕೊಳಗಾದ, ಹೆಣ್ಮಕ್ಕಳಿಗೆ ಮದುವೆ ಕೂಡಿ ಬರುತ್ತಿರಲಿಲ್ಲ, ಇವರ ಕಾಲು ಊನವಾಗಿ ನಡೆಯದ ಪರಿಸ್ಥಿತಿ ಬಂತು. ಕೇರಳಕ್ಕೆ ಹೋಗಿ ಸಮಸ್ಯೆ ಹೇಳಿದಾಗ ಜಾಗದಲ್ಲಿ ಸಮಸ್ಯೆ ಇದೆ ಎಂದು ಗೊತ್ತಾಯಿತು.

ಇಲ್ಲಿಗೆ ಬಂದಾಗ ಅದು ಕೊರಗಜ್ಜನ ನೆಲೆ. ಒಂದೋ ಕೊರಗಜ್ಜನನ್ನು ನಂಬಬೇಕು, ಇಲ್ಲವೇ ಜಾಗ ಖಾಲಿ ಮಾಡಬೇಕೆಂದು ದರ್ಶನ ಪಾತ್ರಿ ಹೇಳಿದ್ದರು. ಬೇರೆ ದಾರಿ ಇಲ್ಲದೆ ಕೊರಗಜ್ಜನನ್ನು ನಂಬಲು ಆರಂಭಿಸಿದೆ ಎಂದು ಖಾಸಿಂ ಹೇಳುತ್ತಾರೆ

ಈ ಬಗ್ಗೆ  ಪ್ರತಿಕ್ರಿಯೆ ನೀಡಿರುವ ಕಾಸಿಂ ಸಾಹೇಬ್‌ ಅವರು, ನನ್ನ ಕುಟುಂಬಸ್ಥರು ಈ ದೈವ ಸೇವೆಗೆ ಸಹಕಾರ ನೀಡುತ್ತಿದ್ದಾರೆ. ಯಾರಿಗೂ ನಾನು ದೈವಗಳನ್ನು ನಂಬಲು ಹೇಳುತ್ತಿಲ್ಲ. ನನ್ನ ಪ್ರಕಾರ ದೇವರು ಒಬ್ಬನೇ ಆದರೆ ಇವರೆಲ್ಲರೂ ದೇವರ ದೂತರು ಎಂದು ಹೇಳಿದ್ದಾರೆ.

ಇನ್ನು ಮಕ್ಕಳು, ಮೊಮ್ಮಕ್ಕಳು ಮಸೀದಿ, ಮದ್ರಸಕ್ಕೆ ಹೋಗುತ್ತಾರೆ. ಆದರೆ ಈಗ ನಾನು ಕೊರಗಜ್ಜನನ್ನು ನಂಬಿದ ಬಳಿಕ ಜನರನ್ನು ನೋಡಿ ದರ್ಶನ ಬರುವ ಭಯದಿಂದ ಮಸೀದಿಗೆ ಹೋಗುತ್ತಿಲ್ಲ. ನನ್ನ ಬಳಿಕ ಈ ದೈವಗಳ ಸೇವೆಗೆ ಜನವಿಡಲು ವ್ಯವಸ್ಥೆ ಮಾಡಿಕೊಳ್ಳುತ್ತೇನೆ. ಜಾತಿ ಬಿಟ್ಟರೂ ನಮ್ಮ ದೈವ ಬಿಡಲಾರದು ಎಂದು ಹೇಳಿದ್ದಾರೆ.

ನಾನು ಯಾರಿಂದಲೂ ವಂತಿಗೆ ಹಣವನ್ನು ಪಡೆಯುತ್ತಿಲ್ಲ. ಕಾಣಿಕೆ ಮೊತ್ತದಿಂದ ಗುಡಿ ಜೀರ್ಣೋದ್ಧಾರ ಮಾಡಿದ್ದೇನೆ. ಈ ಹಿಂದೆ ಮರೆಯಲ್ಲಿಯೇ ಇದ್ದ ದೈವಗಳಿಗೆ ಈಗ ಗುಡಿ ಕಟ್ಟಿಸಿ ಪೂಜೆ ಮಾಡುತ್ತಿದ್ದೇನೆ. ಸಮಸ್ಯೆ ಹೇಳಿಕೊಂಡು ಬರುವವರಿಗೆ ಕೊರಗಜ್ಜನ ಮಾರ್ಗದರ್ಶನದಂತೆ ಕರಿಗಂಧ ನೀಡುತ್ತೇನೆ ಎಂದಿದ್ದಾರೆ.

ಪ್ರಸ್ತುತ ಬಪ್ಪನಾಡು ಕ್ಷೇತ್ರದ ಉಳ್ಳಾಲ್ತಿ, ಕೊರತಿ, ಗುಳಿಗ ಹಾಗೂ ಕೊರಗಜ್ಜನನ್ನು ಇಲ್ಲಿ ಆರಾಧಿಸಲಾಗುತ್ತಿದೆ.2-3 ವರ್ಷಗಳಿಗೊಮ್ಮೆ ಅನುಕೂಲಕ್ಕೆ ತಕ್ಕ ಹಾಗೆ ಕೋಲ, ಹರಕೆ ರೂಪದ ಪೂಜೆ ಮಾಡಲಾಗುತ್ತದೆ. ಇಲ್ಲಿಗೆ ಜನರು ಯಾವುದೇ ಧರ್ಮ ಭೇದವಿಲ್ಲದೆ ಬರುತ್ತಾರೆ ಎಂದು ಹೇಳುತ್ತಾರೆ ಕಾಸಿಂ.

Vishwa News 24

Recent Posts

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ – vishwanews24

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ  ಸಮುದ್ರಪಾಲಾದ ಘಟನೆ ಉತ್ತರ…

12 hours ago

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ – vishwanews24

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…

12 hours ago

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ – vishwanews24

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…

13 hours ago

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ – vishwanews24

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…

13 hours ago

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ – vishwanews24

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…

13 hours ago

ಹಿಂದಿ ಕಿರುತೆರೆ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…

13 hours ago