Featured

ಮಂಗಳೂರು : ಕೊರೊನಾ ಮಾರ್ಗಸೂಚಿ ಮತ್ತು ಅದೇಶಗಳಿಗೆ ಕೆಲವೊಂದು ಸೇರ್ಪಡೆ ಮತ್ತು ಮಾರ್ಪಾಡು : ಸರಕಾರ  ಆದೇಶ -Vishwanews24

ಮಂಗಳೂರು : ಕೊರೊನಾ ಮಾರ್ಗಸೂಚಿ ಮತ್ತು ಅದೇಶಗಳಿಗೆ ಕೆಲವೊಂದು ಸೇರ್ಪಡೆ ಮತ್ತು ಮಾರ್ಪಾಡು : ಸರಕಾರ  ಆದೇಶ -Vishwanews24

ಮಂಗಳೂರು: ಮುಂಬರುವ ಹಬ್ಬಗಳ ಸಂದರ್ಭದಲ್ಲಿ ಕೋವಿಡ್-19 ಪ್ರಕರಣಗಳ ಸಂಭಾವ್ಯ ಏರಿಕೆಯನ್ನು ತಡೆಯಲು ಈವರೆಗೆ ಹೊರಡಿಸಿರುವ ಮಾರ್ಗಸೂಚಿ ಮತ್ತು ಅದೇಶಗಳಿಗೆ ಕೆಲವೊಂದು ಸೇರ್ಪಡೆಗಳು ಮತ್ತು ಮಾರ್ಪಾಡುಗಳನ್ನು ಮಾಡಿ ಸರಕಾರ ಆದೇಶಿಸಿರುತ್ತದೆ.

ಈ ಆದೇಶಗಳು ಹಾಗೂ ಜಿಲ್ಲೆಯ ಪ್ರಸಕ್ತ ವಿದ್ಯಮಾನಗಳನ್ನು ಅವಲೋಕಿಸಿ ಕೋವಿಡ್-19 ಪ್ರಸರಣವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 34 ಹಾಗೂ ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 141 (1) ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈವರೆಗೆ ಹೊರಡಿಸಿರುವ ನಿರ್ಬಂಧ / ಮಾರ್ಗಸೂಚಿ ಮತ್ತು ಆದೇಶಗಳಿಗೆ ಕೆಲವೊಂದು ಸೇರ್ಪಡೆಗಳು ಮತ್ತು ಮಾರ್ಪಾಡುಗಳನ್ನು ಮಾಡಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು, ಜಿಲ್ಲಾ ದಂಡಾಧಿಕಾರಿಗಳೂ ಆದ ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆವಿ. ಅವರು ಆದೇಶ ಹೊರಡಿಸಿರುತ್ತಾರೆ.

ಪ್ರಸ್ತುತ ಚಾಲ್ತಿಯಲ್ಲಿರುವ ರಾತ್ರಿ ಕಫ್ರ್ಯೂ ಮುಂದುವರೆಯಲಿದ್ದು, ಸೆಪ್ಟೆಂಬರ್ 25 ರಿಂದ ಅನ್ವಯಿಸುವಂತೆ ರಾತ್ರಿ ಕರ್ಪ್ಯೂ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

ಶೇ.50ರಷ್ಟು ಸಾಮರ್ಥ್ಯದೊಂದಿಗೆ ಚಿತ್ರಮಂದಿರಕ್ಕೆ ಅನುಮತಿ

ಅಕ್ಟೋಬರ್ 1ರಿಂದ ಕಡ್ಡಾಯವಾಗಿ ಕೋವಿಡ್ ಸಮುಚಿತ ವರ್ತನೆಗಳನ್ನು ಪಾಲಿಸುವ ಷರತ್ತಿಗೊಳಪಟ್ಟು ಶೇ.50ರಷ್ಟು ಆಸನ ಸಾಮರ್ಥ್ಯದೊಂದಿಗೆ ಚಿತ್ರಮಂದಿರ, ಮಲ್ಟಿಪ್ಲೆಕ್ಸ್, ಥಿಯೇಟರ್, ರಂಗಮಂದಿರ ಹಾಗೂ ಆಡಿಟೋರಿಯಂಗಳು ಮತ್ತು ಇದೇ ರೀತಿಯ ಸ್ಥಳಗಳು ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ.

ಇದನ್ನೂ ಓದಿ : ಪಂಚಮಸಾಲಿಗಳಿಗೆ ಮೀಸಲಾತಿ ಕೊಟ್ಟರೆ ಮಠದಲ್ಲಿ ಮುಖ್ಯಮಂತ್ರಿ ಭಾವಚಿತ್ರ ಹಾಕಿ ಖಾಯಂ ಗೌರವ ಕೊಡುತ್ತೇವೆ : ಬಸವ ಜಯ ಮೃತ್ಯುಂಜಯ ಶ್ರೀ -Vishwanews24

ಲಸಿಕೆ ಪಡೆದವರಿಗೆ ಅವಕಾಶ:
ಎರಡೂ ಡೋಸ್ ಲಸಿಕೆ ಪಡೆದವರಿಗೆ ಮಾತ್ರ ಇಂತಹ ಸ್ಥಳದಲ್ಲಿ ಸೇರಲು ಅವಕಾಶ ಇರುತ್ತದೆ. ಮಾತ್ರವಲ್ಲದೆ ಗರ್ಭಿಣಿ ಸ್ತ್ರೀಯರು ಮತ್ತು ಹಿರಿಯ ನಾಗರೀಕರು ಭೇಟಿ ನೀಡದಂತೆ ಸಲಹೆ ನೀಡಲಾಗಿದೆ.

ಇಲ್ಲಿನ ಪ್ರವೇಶ ದ್ವಾರದಲ್ಲಿ ಕಡ್ಡಾಯವಾಗಿ ಥರ್ಮಲ್ ಸ್ಕ್ರೀನಿಂಗ್ ಮಾಡಬೇಕು ಹಾಗೂ ಪ್ರತಿ ಪ್ರದರ್ಶನದ ನಂತರ ಮೇಲೆ ತಿಳಿಸಿದ ಸ್ಥಳಗಳ ವಿಶ್ರಾಂತ ಕೊಠಡಿಗಳು, ಶೌಚಾಲಯ ಸೇರಿದಂತೆ ಎಲ್ಲಾ ಸ್ಥಳಗಳನ್ನು ಸ್ವಚ್ಛಗೊಳಿಸುವುದು, ಪ್ರವೇಶ ಮತ್ತು ನಿರ್ಗಮನ ಅಲ್ಲದೇ ಆಯಕಟ್ಟಿನ ಸ್ಥಳಗಳಲ್ಲಿ ಹ್ಯಾಂಡ್ ಸ್ಯಾನಿಟೈಜರನ್ನು ಸಂಬಂಧಪಟ್ಟ ಅಡಳಿತ ವರ್ಗ, ಮಾಲೀಕರು ಅಥವಾ ಸಂಘಟಕರು ಒದಗಿಸಬೇಕು

ಅ.3ರಿಂದ ಕಡ್ಡಾಯವಾಗಿ ಕೋವಿಡ್ ಸಮುಚಿತ ವರ್ತನೆಗಳನ್ನು ಪಾಲಿಸುವ ಪರತ್ತಿಗೊಳಪಟ್ಟು ಪಬ್‍ಗಳು ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆಗಳ ಕಾರ್ಯಚರಣೆ ಬಗ್ಗೆ ಈಗಾಗಲೇ ಹೊರಡಿಸಲಾದ ಆದೇಶ ಮುಂದುವರೆಯುವುದು.

ಕೇರಳ ರಾಜ್ಯದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವೇಶವಿರುವ ಗಡಿಭಾಗಗಳಲ್ಲಿ ಈಗಾಗಲೇ ನಿರ್ಮಿಸಲಾಗಿರುವ ಚೆಕ್‍ಪೋಸ್ಟ್ ಗಳಲ್ಲಿ ತಪಾಸಣೆ ಕಾರ್ಯವನ್ನು ಮುಂದುವರೆಸಬೇಕು.

ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಅಂತಹವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 51 ರಿಂದ 60 ರನ್ವಯ, ಐಪಿಸಿ ಕಲಂ 188 ರಂತೆ ಮತ್ತು ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ 2020ರ ಕಲಂ 4, 5 ಮತ್ತು 10 ರಂತೆ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ – vishwanews24

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ‌ ರಾಷ್ಟ್ರೀಯ…

18 hours ago

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…

18 hours ago

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – vishwanews24

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …

18 hours ago

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ – vishwanews24

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…

21 hours ago

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು – vishwanews24

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…

21 hours ago

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ – vishwanews24

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…

22 hours ago