ಮಂಗಳೂರು: ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆ : ಒಂದು ವಾರಗಳ ಕಾಲ ಮಂಗಳೂರು – ಕೇರಳ ಬಸ್ ಸಂಚಾರ ನಿರ್ಬಂಧ -Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆ : ಒಂದು ವಾರಗಳ ಕಾಲ ಮಂಗಳೂರು – ಕೇರಳ ಬಸ್ ಸಂಚಾರ ನಿರ್ಬಂಧ -Vishwanews24

ಮಂಗಳೂರು: ಕೇರಳದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಒಂದು ವಾರದ ತನಕ ಕಾಸರಗೋಡಿಗೆ ಮಂಗಳೂರಿನಿಂದ ಬಸ್ ಸಂಚಾರ ಆರಂಭಿಸದಿರಲು ದ.ಕ.ಜಿಲ್ಲಾ ಪಂಚಾಯತ್ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.

ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೇರಳಕ್ಕೆ ಬಸ್ ಸಂಚಾರ ಆರಂಭಿಸಿದಲ್ಲಿ ಪ್ರಯಾಣಿಕರ ಮೇಲೆ ನಿಗಾ ಇರಿಸಿ, ಸೋಂಕು ನಿಯಂತ್ರಣ ಮಾಡುವುದು ಕಷ್ಟವಾಗುತ್ತದೆ. ಆದ್ದರಿಂದ ಮುಂದಿನ ಒಂದು ವಾರದ ಸೋಂಕು ಪ್ರಕರಣಗಳನ್ನು ಪರಿಗಣನೆಗೆ ತೆಗೆದುಕೊಂಡು ಕಾಸರಗೋಡಿನ ಪಾಸಿಟಿವಿಟಿ ರೇಟ್ ಇಳಿಕೆಯಾದಲ್ಲಿ ಬಸ್ ಸಂಚಾರ ಆರಂಭಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತದೆ ಎಂದು ಹೇಳಿದರು.

ಈ ಸಂದರ್ಭ ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಮಾತನಾಡಿ, ಕೊರೊನಾ ಸೋಂಕಿತರ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳು ದುಬಾರಿ ಶುಲ್ಕ ವಿಧಿಸಿದಲ್ಲಿ ನಾಗರಿಕರು ದೂರ ನೀಡಬಹುದು. ಈ ಬಗ್ಗೆ ಪರಿಶೀಲನೆ ನಡೆಸಿ ಹೆಚ್ಚುವರಿ ಮೊತ್ತವನ್ನು ಕೊಡಿಸಲಾಗುತ್ತದೆ. ಕೊರೊನಾ ಸೋಂಕಿತರ ಚಿಕಿತ್ಸಾ ವೆಚ್ಚದ ಬಿಲ್ ಪರಿಶೀಲನೆಗೆ ಜಿಲ್ಲಾ ಮಟ್ಟದ ಸಮಿತಿ ರಚನೆ ಮಾಡಲಾಗಿದೆ. ಇದುವರೆಗೆ 17 ಖಾಸಗಿ ಆಸ್ಪತ್ರೆಗಳ 2,802 ಪ್ರಕರಣಗಳ ಬಿಲ್ ಪರಿಶೀಲನೆ ನಡೆಸಲಾಗಿದೆ. ಈ ಪೈಕಿ 66 ಪ್ರಕರಣಗಳಲ್ಲಿ ಸರಕಾರ ನಿಗದಿ ಪಡಿಸಿರುವ ಶುಲ್ಕ ಕ್ಕಿಂತ ಹೆಚ್ಚಿನ ಶುಲ್ಕ ವಿಧಿಸಿರುವುದು ಕಂಡು ಬಂದಿದೆ ಎಂದರು.