ಮಂಗಳೂರು: ಕೇರಳದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಒಂದು ವಾರದ ತನಕ ಕಾಸರಗೋಡಿಗೆ ಮಂಗಳೂರಿನಿಂದ ಬಸ್ ಸಂಚಾರ ಆರಂಭಿಸದಿರಲು ದ.ಕ.ಜಿಲ್ಲಾ ಪಂಚಾಯತ್ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.
ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೇರಳಕ್ಕೆ ಬಸ್ ಸಂಚಾರ ಆರಂಭಿಸಿದಲ್ಲಿ ಪ್ರಯಾಣಿಕರ ಮೇಲೆ ನಿಗಾ ಇರಿಸಿ, ಸೋಂಕು ನಿಯಂತ್ರಣ ಮಾಡುವುದು ಕಷ್ಟವಾಗುತ್ತದೆ. ಆದ್ದರಿಂದ ಮುಂದಿನ ಒಂದು ವಾರದ ಸೋಂಕು ಪ್ರಕರಣಗಳನ್ನು ಪರಿಗಣನೆಗೆ ತೆಗೆದುಕೊಂಡು ಕಾಸರಗೋಡಿನ ಪಾಸಿಟಿವಿಟಿ ರೇಟ್ ಇಳಿಕೆಯಾದಲ್ಲಿ ಬಸ್ ಸಂಚಾರ ಆರಂಭಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತದೆ ಎಂದು ಹೇಳಿದರು.
ಈ ಸಂದರ್ಭ ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಮಾತನಾಡಿ, ಕೊರೊನಾ ಸೋಂಕಿತರ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳು ದುಬಾರಿ ಶುಲ್ಕ ವಿಧಿಸಿದಲ್ಲಿ ನಾಗರಿಕರು ದೂರ ನೀಡಬಹುದು. ಈ ಬಗ್ಗೆ ಪರಿಶೀಲನೆ ನಡೆಸಿ ಹೆಚ್ಚುವರಿ ಮೊತ್ತವನ್ನು ಕೊಡಿಸಲಾಗುತ್ತದೆ. ಕೊರೊನಾ ಸೋಂಕಿತರ ಚಿಕಿತ್ಸಾ ವೆಚ್ಚದ ಬಿಲ್ ಪರಿಶೀಲನೆಗೆ ಜಿಲ್ಲಾ ಮಟ್ಟದ ಸಮಿತಿ ರಚನೆ ಮಾಡಲಾಗಿದೆ. ಇದುವರೆಗೆ 17 ಖಾಸಗಿ ಆಸ್ಪತ್ರೆಗಳ 2,802 ಪ್ರಕರಣಗಳ ಬಿಲ್ ಪರಿಶೀಲನೆ ನಡೆಸಲಾಗಿದೆ. ಈ ಪೈಕಿ 66 ಪ್ರಕರಣಗಳಲ್ಲಿ ಸರಕಾರ ನಿಗದಿ ಪಡಿಸಿರುವ ಶುಲ್ಕ ಕ್ಕಿಂತ ಹೆಚ್ಚಿನ ಶುಲ್ಕ ವಿಧಿಸಿರುವುದು ಕಂಡು ಬಂದಿದೆ ಎಂದರು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…