ಮಂಗಳೂರು: ಕೇರಳದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಒಂದು ವಾರದ ತನಕ ಕಾಸರಗೋಡಿಗೆ ಮಂಗಳೂರಿನಿಂದ ಬಸ್ ಸಂಚಾರ ಆರಂಭಿಸದಿರಲು ದ.ಕ.ಜಿಲ್ಲಾ ಪಂಚಾಯತ್ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.
ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೇರಳಕ್ಕೆ ಬಸ್ ಸಂಚಾರ ಆರಂಭಿಸಿದಲ್ಲಿ ಪ್ರಯಾಣಿಕರ ಮೇಲೆ ನಿಗಾ ಇರಿಸಿ, ಸೋಂಕು ನಿಯಂತ್ರಣ ಮಾಡುವುದು ಕಷ್ಟವಾಗುತ್ತದೆ. ಆದ್ದರಿಂದ ಮುಂದಿನ ಒಂದು ವಾರದ ಸೋಂಕು ಪ್ರಕರಣಗಳನ್ನು ಪರಿಗಣನೆಗೆ ತೆಗೆದುಕೊಂಡು ಕಾಸರಗೋಡಿನ ಪಾಸಿಟಿವಿಟಿ ರೇಟ್ ಇಳಿಕೆಯಾದಲ್ಲಿ ಬಸ್ ಸಂಚಾರ ಆರಂಭಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತದೆ ಎಂದು ಹೇಳಿದರು.
ಈ ಸಂದರ್ಭ ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಮಾತನಾಡಿ, ಕೊರೊನಾ ಸೋಂಕಿತರ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳು ದುಬಾರಿ ಶುಲ್ಕ ವಿಧಿಸಿದಲ್ಲಿ ನಾಗರಿಕರು ದೂರ ನೀಡಬಹುದು. ಈ ಬಗ್ಗೆ ಪರಿಶೀಲನೆ ನಡೆಸಿ ಹೆಚ್ಚುವರಿ ಮೊತ್ತವನ್ನು ಕೊಡಿಸಲಾಗುತ್ತದೆ. ಕೊರೊನಾ ಸೋಂಕಿತರ ಚಿಕಿತ್ಸಾ ವೆಚ್ಚದ ಬಿಲ್ ಪರಿಶೀಲನೆಗೆ ಜಿಲ್ಲಾ ಮಟ್ಟದ ಸಮಿತಿ ರಚನೆ ಮಾಡಲಾಗಿದೆ. ಇದುವರೆಗೆ 17 ಖಾಸಗಿ ಆಸ್ಪತ್ರೆಗಳ 2,802 ಪ್ರಕರಣಗಳ ಬಿಲ್ ಪರಿಶೀಲನೆ ನಡೆಸಲಾಗಿದೆ. ಈ ಪೈಕಿ 66 ಪ್ರಕರಣಗಳಲ್ಲಿ ಸರಕಾರ ನಿಗದಿ ಪಡಿಸಿರುವ ಶುಲ್ಕ ಕ್ಕಿಂತ ಹೆಚ್ಚಿನ ಶುಲ್ಕ ವಿಧಿಸಿರುವುದು ಕಂಡು ಬಂದಿದೆ ಎಂದರು.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…