ಮಂಗಳೂರು: ರಾಜ್ಯದಲ್ಲಿ ಕಾಮಗಾರಿ ನಡೆಸಲು ಬಹುತೇಕ ಸಚಿವರಿಗೆ ಶೇ.40 ಕಮಿಷನ್ ಕೊಡಬೇಕು ಎಂದು ಗುತ್ತಿಗೆದಾರರು ಪ್ರಧಾನಿಗೆ ದೂರು ನೀಡಿ ವರ್ಷ ದಾಟಿದೆ. ಎಲ್ಲೆಡೆ ಭ್ರಷ್ಟಾಚಾರ ತಂಡವಾಡುತ್ತಿದೆ. ಕೋಟಿ ಕೋಟಿ ಲೂಟಿ ನಡೆಯುತ್ತಿದ್ದರೂ, ಬಿಜೆಪಿ ಮುಖಂಡರ ಮೇಲೆ ಇಡಿ, ಸಿಬಿಐ, ಐಟಿ ದಾಳಿ ಯಾಕೆ ನಡೆಯುತ್ತಿಲ್ಲ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ್ ಪ್ರಶ್ನಿಸಿದ್ದಾರೆ.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ನಾ ಖಾವೂಂಗ, ನಾ ಖಾನೇದೂಂಗ’ ಎಂದು ಪ್ರಧಾನಿ ಹೇಳುತ್ತಿದ್ದಾರೆ. ಆದರೆ ತಮ್ಮದೇ ಬಿಜೆಪಿ ಮೇಲೆ ದೂರು ಬಂದಾಗ ಏಕೆ ಸುಮ್ಮನಿದ್ದಾರೆ. ದಾಳಿಗೆ ಪ್ರತಿಪಕ್ಷಗಳು ಮಾತ್ರ ಸೀಮಿತವೇ ? ಪ್ರಧಾನಿ ತನ್ನ ಮಾತಿಗೆ ಬದ್ಧರಾಗಿಲ್ಲವೇ ಎಂದು ಪ್ರಶ್ನಿಸಿದ್ದಾರೆ.
ಅಲ್ಲದೇ, 60 ವರ್ಷ ಆಡಳಿತ ನಡೆದ ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಧಾನಿ ಆಗಾಗ ಪ್ರಶ್ನಿಸುತ್ತಾರೆ. ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನದಿಂದ ಹಿಡಿದು, ಸ್ವಾತಂತ್ರ್ಯದ ಬಳಿಕ ಶಿಕ್ಷಣ ಆರೋಗ್ಯ, ಕೃಷಿ, ರಸ್ತೆಗಳು, ಅಣೆಕಟ್ಟುಗಳು ಸೇರಿದಂತೆ ಸರ್ವಾಂಗೀಣ ಅಭಿವೃದ್ದಿ ಮೂಲಕ ಸ್ವಾಭಿಮಾನಿ ದೇಶ ಕಟ್ಟಲು ಮಾಡಿದ ಯೋಜನೆಗಳ ಪಟ್ಟಿಯನ್ನೇ ಕೊಡಬಹುದು. ಇವೆಲ್ಲವೂ ಕೇವಲ ಎಂಟು ವರ್ಷದಲ್ಲಿಆಗಿದೆಯಾ ಎಂದು ಬಿಜೆಪಿಯವರು ಆತ್ಮವಿಮರ್ಶೆ ಮಾಡಿಕೊಳ್ಳಲಿ ಎಂದು ಪಾಟೀಲ್ ಹೇಳಿದರು.
ಇದನ್ನೂ ಓದಿ : ಆಂತರಿಕ ಶತ್ರುಗಳ ಕಿರಿಕಿರಿ.. ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಅಧಿಕಾರಕ್ಕೆ ಬರುವ ಮೊದಲು ಪ್ರಧಾನಿ ನೀಡಿದ್ದ ಯಾವ ಭರವಸೆಯನ್ನೂ ಈಡೇರಿಸಿಲ್ಲ. ಪೆಟ್ರೋಲ್, ಡೀಸೆಲ್ ಸಹಿತ ಅಗತ್ಯ ವಸ್ತುಗಳ ದರ ಹೆಚ್ಚಳ, ನಿರುದ್ಯೋಗದಿಂದ ಜನರು ಭ್ರಮನಿರಸನಗೊಂಡಿದ್ದಾರೆ. ರಾಜ್ಯದಲ್ಲಿ ಕೋಟ್ಯಂತರ ರೂ. ಕೊಟ್ಟು ಆಪರೇಷನ್ ಕಮಲ ಮಾಡಿ ಅಧಿಕಾರಕ್ಕೆ ಬಂದು ರಾಜ್ಯವನ್ನು ದೋಚುತ್ತಿದ್ದಾರೆ. ಜನರು ಈಗ ನಮಗೆ ಬಿಜೆಪಿಯ ಅಚ್ಚೇ ದಿನ್ ಬೇಡ, ಕಾಂಗ್ರೆಸ್ ಕಾಲದ ಬುರೇ ದಿನ್ ಮರಳಿಸಿ ಎಂದು ಕೇಳುತ್ತಿದ್ದಾರೆ ಎಂದು ಅವರು ಹೇಳಿದರು.
ರಾಜ್ಯದ ಆರ್ಥಿಕ, ಆಡಳಿತ ವ್ಯವಸ್ಥೆಯನ್ನು ಬಿಜೆಪಿ ಸರಕಾರ ಸಂಪೂರ್ಣ ಹಾಳು ಮಾಡಿದೆ. 2023ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದ್ದು, ಎರಡು ವರ್ಷ ಈ ಅವ್ಯವಸ್ಥೆ ಸರಿಪಡಿಸಲು ಬೇಕು. 2024ರಲ್ಲಿ ಕೇಂದ್ರದಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬಂದು, ರಾಜ್ಯದ ಜನತೆಗೆ ಹೊಸ ಸೌಲಭ್ಯಗಳನ್ನು ಕೊಡಲು ನೆರವಾಗಲಿದೆ ಎಂದು ಅವರು ಹೇಳಿದರು.
ಕಾಂಗ್ರೆಸ್ ಮುಖಂಡರಾದ ಬಿ.ರಮಾನಾಥ ರೈ, ವಿನಯಕುಮಾರ್ ಸೊರಕೆ, ಯು.ಟಿ.ಖಾದರ್, ಹರೀಶ್ ಕುಮಾರ್, ಮಂಜುನಾಥ ಭಂಡಾರಿ, ಅಭಯಚಂದ್ರ ಜೈನ್, ಐವನ್ ಡಿಸೋಜ, ಶಕುಂತಳಾ ಶೆಟ್ಟಿ, ಜೆ.ಆರ್.ಲೋಬೊ, ಬಿ.ಎ.ಮೊಹಿದಿನ್ ಬಾವ, ಕೃಪಾ ಅಳ್ವ, ಮಮತಾ ಗಟ್ಟಿ, ಮಿಥುನ್ ರೈ ಸುದ್ದಿಗೋಷ್ಠಿಯಲ್ಲಿಉಪಸ್ಥಿತರಿದ್ದರು.
ಬಂಟ್ವಾಳ: ಪೊಲೀಸ್ ದಾಳಿ – ಪಿಎಫ್ಐ ಜಿಲ್ಲಾಧ್ಯಕ್ಷ ಸೇರಿ ಮೂವರು ವಶಕ್ಕೆ – Vishwanews24
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…