ಮಂಗಳೂರು: ರಾಜ್ಯದಲ್ಲಿ ಕಾಮಗಾರಿ ನಡೆಸಲು ಬಹುತೇಕ ಸಚಿವರಿಗೆ ಶೇ.40 ಕಮಿಷನ್ ಕೊಡಬೇಕು ಎಂದು ಗುತ್ತಿಗೆದಾರರು ಪ್ರಧಾನಿಗೆ ದೂರು ನೀಡಿ ವರ್ಷ ದಾಟಿದೆ. ಎಲ್ಲೆಡೆ ಭ್ರಷ್ಟಾಚಾರ ತಂಡವಾಡುತ್ತಿದೆ. ಕೋಟಿ ಕೋಟಿ ಲೂಟಿ ನಡೆಯುತ್ತಿದ್ದರೂ, ಬಿಜೆಪಿ ಮುಖಂಡರ ಮೇಲೆ ಇಡಿ, ಸಿಬಿಐ, ಐಟಿ ದಾಳಿ ಯಾಕೆ ನಡೆಯುತ್ತಿಲ್ಲ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ್ ಪ್ರಶ್ನಿಸಿದ್ದಾರೆ.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ನಾ ಖಾವೂಂಗ, ನಾ ಖಾನೇದೂಂಗ’ ಎಂದು ಪ್ರಧಾನಿ ಹೇಳುತ್ತಿದ್ದಾರೆ. ಆದರೆ ತಮ್ಮದೇ ಬಿಜೆಪಿ ಮೇಲೆ ದೂರು ಬಂದಾಗ ಏಕೆ ಸುಮ್ಮನಿದ್ದಾರೆ. ದಾಳಿಗೆ ಪ್ರತಿಪಕ್ಷಗಳು ಮಾತ್ರ ಸೀಮಿತವೇ ? ಪ್ರಧಾನಿ ತನ್ನ ಮಾತಿಗೆ ಬದ್ಧರಾಗಿಲ್ಲವೇ ಎಂದು ಪ್ರಶ್ನಿಸಿದ್ದಾರೆ.
ಅಲ್ಲದೇ, 60 ವರ್ಷ ಆಡಳಿತ ನಡೆದ ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಧಾನಿ ಆಗಾಗ ಪ್ರಶ್ನಿಸುತ್ತಾರೆ. ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನದಿಂದ ಹಿಡಿದು, ಸ್ವಾತಂತ್ರ್ಯದ ಬಳಿಕ ಶಿಕ್ಷಣ ಆರೋಗ್ಯ, ಕೃಷಿ, ರಸ್ತೆಗಳು, ಅಣೆಕಟ್ಟುಗಳು ಸೇರಿದಂತೆ ಸರ್ವಾಂಗೀಣ ಅಭಿವೃದ್ದಿ ಮೂಲಕ ಸ್ವಾಭಿಮಾನಿ ದೇಶ ಕಟ್ಟಲು ಮಾಡಿದ ಯೋಜನೆಗಳ ಪಟ್ಟಿಯನ್ನೇ ಕೊಡಬಹುದು. ಇವೆಲ್ಲವೂ ಕೇವಲ ಎಂಟು ವರ್ಷದಲ್ಲಿಆಗಿದೆಯಾ ಎಂದು ಬಿಜೆಪಿಯವರು ಆತ್ಮವಿಮರ್ಶೆ ಮಾಡಿಕೊಳ್ಳಲಿ ಎಂದು ಪಾಟೀಲ್ ಹೇಳಿದರು.
ಇದನ್ನೂ ಓದಿ : ಆಂತರಿಕ ಶತ್ರುಗಳ ಕಿರಿಕಿರಿ.. ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಅಧಿಕಾರಕ್ಕೆ ಬರುವ ಮೊದಲು ಪ್ರಧಾನಿ ನೀಡಿದ್ದ ಯಾವ ಭರವಸೆಯನ್ನೂ ಈಡೇರಿಸಿಲ್ಲ. ಪೆಟ್ರೋಲ್, ಡೀಸೆಲ್ ಸಹಿತ ಅಗತ್ಯ ವಸ್ತುಗಳ ದರ ಹೆಚ್ಚಳ, ನಿರುದ್ಯೋಗದಿಂದ ಜನರು ಭ್ರಮನಿರಸನಗೊಂಡಿದ್ದಾರೆ. ರಾಜ್ಯದಲ್ಲಿ ಕೋಟ್ಯಂತರ ರೂ. ಕೊಟ್ಟು ಆಪರೇಷನ್ ಕಮಲ ಮಾಡಿ ಅಧಿಕಾರಕ್ಕೆ ಬಂದು ರಾಜ್ಯವನ್ನು ದೋಚುತ್ತಿದ್ದಾರೆ. ಜನರು ಈಗ ನಮಗೆ ಬಿಜೆಪಿಯ ಅಚ್ಚೇ ದಿನ್ ಬೇಡ, ಕಾಂಗ್ರೆಸ್ ಕಾಲದ ಬುರೇ ದಿನ್ ಮರಳಿಸಿ ಎಂದು ಕೇಳುತ್ತಿದ್ದಾರೆ ಎಂದು ಅವರು ಹೇಳಿದರು.
ರಾಜ್ಯದ ಆರ್ಥಿಕ, ಆಡಳಿತ ವ್ಯವಸ್ಥೆಯನ್ನು ಬಿಜೆಪಿ ಸರಕಾರ ಸಂಪೂರ್ಣ ಹಾಳು ಮಾಡಿದೆ. 2023ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದ್ದು, ಎರಡು ವರ್ಷ ಈ ಅವ್ಯವಸ್ಥೆ ಸರಿಪಡಿಸಲು ಬೇಕು. 2024ರಲ್ಲಿ ಕೇಂದ್ರದಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬಂದು, ರಾಜ್ಯದ ಜನತೆಗೆ ಹೊಸ ಸೌಲಭ್ಯಗಳನ್ನು ಕೊಡಲು ನೆರವಾಗಲಿದೆ ಎಂದು ಅವರು ಹೇಳಿದರು.
ಕಾಂಗ್ರೆಸ್ ಮುಖಂಡರಾದ ಬಿ.ರಮಾನಾಥ ರೈ, ವಿನಯಕುಮಾರ್ ಸೊರಕೆ, ಯು.ಟಿ.ಖಾದರ್, ಹರೀಶ್ ಕುಮಾರ್, ಮಂಜುನಾಥ ಭಂಡಾರಿ, ಅಭಯಚಂದ್ರ ಜೈನ್, ಐವನ್ ಡಿಸೋಜ, ಶಕುಂತಳಾ ಶೆಟ್ಟಿ, ಜೆ.ಆರ್.ಲೋಬೊ, ಬಿ.ಎ.ಮೊಹಿದಿನ್ ಬಾವ, ಕೃಪಾ ಅಳ್ವ, ಮಮತಾ ಗಟ್ಟಿ, ಮಿಥುನ್ ರೈ ಸುದ್ದಿಗೋಷ್ಠಿಯಲ್ಲಿಉಪಸ್ಥಿತರಿದ್ದರು.
ಬಂಟ್ವಾಳ: ಪೊಲೀಸ್ ದಾಳಿ – ಪಿಎಫ್ಐ ಜಿಲ್ಲಾಧ್ಯಕ್ಷ ಸೇರಿ ಮೂವರು ವಶಕ್ಕೆ – Vishwanews24
ಅ.1 ರಿಂದ ಜನನ ಮತ್ತು ಮರಣ ನೋಂದಣಿ ವಿಳಂಬಕ್ಕೆ ಹೊಸ ನಿಯಮ ಜಾರಿಗೆ ನವದೆಹಲಿ: ಜನನ ಮತ್ತು ಮರಣ ನೋಂದಣಿಯನ್ನು ವಿಳಂಬವಾಗಿ…
ರಾಜ್ಯ ಸರ್ಕಾರ ಪಡಿತರ ಕಾರ್ಡ್ದಾರರಿಗೆ ಬಿಗ್ ಗುಡ್ ನ್ಯೂಸ್ ಇ-ಕೆವೈಸಿಗೆ ಅಕ್ಟೋಬರ್ 20ರವರೆಗೆ ಗಡುವು ವಿಸ್ತರಣೆ ನ್ಯಾಯಬೆಲೆ ಅಂಗಡಿಗಳ ವೇಳಾಪಟ್ಟಿ…
ಇನ್ಸ್ಪೆಕ್ಟರ್ ಧನಂಜಯ್ ಯಾವುದೇ ತಪ್ಪು ಮಾಡಿಲ್ಲ; ಅವರು ಬುದ್ಧಿವಾದ ಹೇಳಿದ್ದಾರೆ ತಪ್ಪೇ ಮಾಡದ ಇನ್ಸ್ಪೆಕ್ಟರ್ ಮೇಲೆ ಕ್ರಮ ಯಾಕೆ ತೆಗೆದುಕೊಳ್ಳಬೇಕು..…
ಕುಂದಾಪುರ : ಬೇಳೂರು ಗ್ರಾ.ಪಂ.ಗೆ ಲೋಕಾಯುಕ್ತ ದಾಳಿ ; ಕಡತಗಳ ಪರಿಶೀಲನೆ ಉಡುಪಿ: ಕಟ್ಟಡ ಪರವಾನಗಿ ನೀಡುವಲ್ಲಿ ವಿಳಂಬ ಸೇರಿದಂತೆ…
'ದಾದಾಸಾಹೇಬ್ ಫಾಲ್ಕೆ' ಪ್ರಶಸ್ತಿಯನ್ನು ಕರ್ನಾಟಕದ ಜನತೆಗೆ ಅರ್ಪಿಸಿದ ಹಿರಿಯ ನಟ ಅನಂತ್ ನಾಗ್ ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ನೀಡಿದ ಅಪಾರ…
ಕೊಣಾಜೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ; ಅದೃಷ್ಟವಶಾತ್ ತಪ್ಪಿದ ಭಾರಿ ದುರಂತ ಕೊಣಾಜೆ : ಚಾಲಕನ ನಿಯಂತ್ರಣ…