Featured

ಮಂಗಳೂರು: ಕೋಟಿ ಕೋಟಿ ಲೂಟಿ ನಡೆಯುತ್ತಿದ್ದರೂ ಬಿಜೆಪಿ ಮುಖಂಡರ ಮೇಲೆ ಇಡಿ, ಸಿಬಿಐ, ಐಟಿ ದಾಳಿ ಯಾಕಿಲ್ಲ: ಎಂ.ಬಿ ಪಾಟೀಲ್‌  – Vishwanews24

ಕೋಟಿ ಕೋಟಿ ಲೂಟಿ ನಡೆಯುತ್ತಿದ್ದರೂ ಬಿಜೆಪಿ ಮುಖಂಡರ ಮೇಲೆ ಇಡಿ, ಸಿಬಿಐ, ಐಟಿ ದಾಳಿ ಯಾಕಿಲ್ಲ: ಎಂ.ಬಿ ಪಾಟೀಲ್‌

ಮಂಗಳೂರು: ರಾಜ್ಯದಲ್ಲಿ ಕಾಮಗಾರಿ ನಡೆಸಲು ಬಹುತೇಕ ಸಚಿವರಿಗೆ ಶೇ.40 ಕಮಿಷನ್‌ ಕೊಡಬೇಕು ಎಂದು ಗುತ್ತಿಗೆದಾರರು ಪ್ರಧಾನಿಗೆ ದೂರು ನೀಡಿ ವರ್ಷ ದಾಟಿದೆ. ಎಲ್ಲೆಡೆ ಭ್ರಷ್ಟಾಚಾರ ತಂಡವಾಡುತ್ತಿದೆ. ಕೋಟಿ ಕೋಟಿ ಲೂಟಿ ನಡೆಯುತ್ತಿದ್ದರೂ, ಬಿಜೆಪಿ ಮುಖಂಡರ ಮೇಲೆ ಇಡಿ, ಸಿಬಿಐ, ಐಟಿ ದಾಳಿ ಯಾಕೆ ನಡೆಯುತ್ತಿಲ್ಲ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ್‌ ಪ್ರಶ್ನಿಸಿದ್ದಾರೆ.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ನಾ ಖಾವೂಂಗ, ನಾ ಖಾನೇದೂಂಗ’ ಎಂದು ಪ್ರಧಾನಿ ಹೇಳುತ್ತಿದ್ದಾರೆ. ಆದರೆ ತಮ್ಮದೇ ಬಿಜೆಪಿ ಮೇಲೆ ದೂರು ಬಂದಾಗ ಏಕೆ ಸುಮ್ಮನಿದ್ದಾರೆ. ದಾಳಿಗೆ ಪ್ರತಿಪಕ್ಷಗಳು ಮಾತ್ರ ಸೀಮಿತವೇ ? ಪ್ರಧಾನಿ ತನ್ನ ಮಾತಿಗೆ ಬದ್ಧರಾಗಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಅಲ್ಲದೇ, 60 ವರ್ಷ ಆಡಳಿತ ನಡೆದ ಕಾಂಗ್ರೆಸ್‌ ಏನು ಮಾಡಿದೆ ಎಂದು ಪ್ರಧಾನಿ ಆಗಾಗ ಪ್ರಶ್ನಿಸುತ್ತಾರೆ. ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನದಿಂದ ಹಿಡಿದು, ಸ್ವಾತಂತ್ರ್ಯದ ಬಳಿಕ ಶಿಕ್ಷಣ ಆರೋಗ್ಯ, ಕೃಷಿ, ರಸ್ತೆಗಳು, ಅಣೆಕಟ್ಟುಗಳು ಸೇರಿದಂತೆ ಸರ್ವಾಂಗೀಣ ಅಭಿವೃದ್ದಿ ಮೂಲಕ ಸ್ವಾಭಿಮಾನಿ ದೇಶ ಕಟ್ಟಲು ಮಾಡಿದ ಯೋಜನೆಗಳ ಪಟ್ಟಿಯನ್ನೇ ಕೊಡಬಹುದು. ಇವೆಲ್ಲವೂ ಕೇವಲ ಎಂಟು ವರ್ಷದಲ್ಲಿಆಗಿದೆಯಾ ಎಂದು ಬಿಜೆಪಿಯವರು ಆತ್ಮವಿಮರ್ಶೆ ಮಾಡಿಕೊಳ್ಳಲಿ ಎಂದು ಪಾಟೀಲ್‌ ಹೇಳಿದರು.

ಇದನ್ನೂ ಓದಿ : ಆಂತರಿಕ ಶತ್ರುಗಳ ಕಿರಿಕಿರಿ.. ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಅಧಿಕಾರಕ್ಕೆ ಬರುವ ಮೊದಲು ಪ್ರಧಾನಿ ನೀಡಿದ್ದ ಯಾವ ಭರವಸೆಯನ್ನೂ ಈಡೇರಿಸಿಲ್ಲ. ಪೆಟ್ರೋಲ್‌, ಡೀಸೆಲ್‌ ಸಹಿತ ಅಗತ್ಯ ವಸ್ತುಗಳ ದರ ಹೆಚ್ಚಳ, ನಿರುದ್ಯೋಗದಿಂದ ಜನರು ಭ್ರಮನಿರಸನಗೊಂಡಿದ್ದಾರೆ. ರಾಜ್ಯದಲ್ಲಿ ಕೋಟ್ಯಂತರ ರೂ. ಕೊಟ್ಟು ಆಪರೇಷನ್‌ ಕಮಲ ಮಾಡಿ ಅಧಿಕಾರಕ್ಕೆ ಬಂದು ರಾಜ್ಯವನ್ನು ದೋಚುತ್ತಿದ್ದಾರೆ. ಜನರು ಈಗ ನಮಗೆ ಬಿಜೆಪಿಯ ಅಚ್ಚೇ ದಿನ್‌ ಬೇಡ, ಕಾಂಗ್ರೆಸ್‌ ಕಾಲದ ಬುರೇ ದಿನ್‌ ಮರಳಿಸಿ ಎಂದು ಕೇಳುತ್ತಿದ್ದಾರೆ ಎಂದು ಅವರು ಹೇಳಿದರು.

ರಾಜ್ಯದ ಆರ್ಥಿಕ, ಆಡಳಿತ ವ್ಯವಸ್ಥೆಯನ್ನು ಬಿಜೆಪಿ ಸರಕಾರ ಸಂಪೂರ್ಣ ಹಾಳು ಮಾಡಿದೆ. 2023ರಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಲಿದ್ದು, ಎರಡು ವರ್ಷ ಈ ಅವ್ಯವಸ್ಥೆ ಸರಿಪಡಿಸಲು ಬೇಕು. 2024ರಲ್ಲಿ ಕೇಂದ್ರದಲ್ಲೂ ಕಾಂಗ್ರೆಸ್‌ ಅಧಿಕಾರಕ್ಕೆ ಬಂದು, ರಾಜ್ಯದ ಜನತೆಗೆ ಹೊಸ ಸೌಲಭ್ಯಗಳನ್ನು ಕೊಡಲು ನೆರವಾಗಲಿದೆ ಎಂದು ಅವರು ಹೇಳಿದರು.

ಕಾಂಗ್ರೆಸ್‌ ಮುಖಂಡರಾದ ಬಿ.ರಮಾನಾಥ ರೈ, ವಿನಯಕುಮಾರ್‌ ಸೊರಕೆ, ಯು.ಟಿ.ಖಾದರ್‌, ಹರೀಶ್‌ ಕುಮಾರ್‌, ಮಂಜುನಾಥ ಭಂಡಾರಿ, ಅಭಯಚಂದ್ರ ಜೈನ್‌, ಐವನ್‌ ಡಿಸೋಜ, ಶಕುಂತಳಾ ಶೆಟ್ಟಿ, ಜೆ.ಆರ್‌.ಲೋಬೊ, ಬಿ.ಎ.ಮೊಹಿದಿನ್‌ ಬಾವ, ಕೃಪಾ ಅಳ್ವ, ಮಮತಾ ಗಟ್ಟಿ, ಮಿಥುನ್‌ ರೈ ಸುದ್ದಿಗೋಷ್ಠಿಯಲ್ಲಿಉಪಸ್ಥಿತರಿದ್ದರು.

ಬಂಟ್ವಾಳ: ಪೊಲೀಸ್ ದಾಳಿ – ಪಿಎಫ್ಐ ಜಿಲ್ಲಾಧ್ಯಕ್ಷ ಸೇರಿ ಮೂವರು ವಶಕ್ಕೆ – Vishwanews24

Vishwa News 24

Recent Posts

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

7 hours ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

8 hours ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

9 hours ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

9 hours ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

9 hours ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

9 hours ago