ಮಂಗಳೂರು: ಕೊರೋನಾ ಪಾಸಿಟಿವ್ ಆದವರಿಗೆ ಎಲ್ಲೂ ಚಿಕಿತ್ಸೆಯನ್ನು ಉಚಿತವಾಗಿ ನೀಡುತ್ತಿಲ್ಲ. ಹೀಗಾಗಿ ಕೋವಿಡ್ ಚಿಕಿತ್ಸೆಗಾಗಿ ಹಣ ಪಾವತಿಸಿದ ಎಲ್ಲರ ಹಣವನ್ನು ರಾಜ್ಯ ಸರ್ಕಾರ ಮರು ಪಾವತಿಸಬೇಕು ಎಂದು ಮಾಜಿ ಆರೋಗ್ಯ ಸಚಿವ, ಶಾಸಕ ಯು.ಟಿ.ಖಾದರ್ ಆಗ್ರಹಿಸಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು, ಕೊರೋನಾ ಪಾಸಿಟಿವ್ ಆದವರಿಗೆ ಎಲ್ಲೂ ಉಚಿತ ಚಿಕಿತ್ಸೆ ಸಿಗುತ್ತಿಲ್ಲ. ಅವರೆಲ್ಲರ ಹಣವನ್ನು ಮರು ಪಾವತಿಸಲು ಸಿಎಂ ಪರಿಹಾರ ನಿಧಿಯಿಂದ ತಕ್ಷಣ ಹಣ ಬಿಡುಗಡೆ ಮಾಡಬೇಕು. ಆಗ ಆಸ್ಪತ್ರೆಗಳು ಎಷ್ಟು ಬಿಲ್ ಮಾಡಿದೆ ಅನ್ನೋದು ಸರ್ಕಾರಕ್ಕೆ ಗೊತ್ತಾಗುತ್ತದೆ ಎಂದರು.
ಸರ್ಕಾರ ಈ ಬಗ್ಗೆ ತಕ್ಷಣ ಕಾರ್ಯ ಪ್ರವೃತವಾಗಬೇಕೆಂದು ಅವರು ಒತ್ತಾಯಿಸಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಕೊರೊನಾ ಪಾಸಿಟಿವ್ ಹಾಗೂ ಕೊರೊನಾದಿಂದ ಸಾವನ್ನಪ್ಪುವ ಸಂಖ್ಯೆ ಹೆಚ್ಚಾಗುತ್ತಿದೆ. ಆದರೂ ಎಲ್ಲೆಡೆ ಲಾಕ್ಡೌನ್ ಸಡಿಲಿಸಿದ್ದಾರೆ. ಇತ್ತೀಚೆಗೆ ಕೊರೊನಾ ಟೆಸ್ಟಿಂಗ್ ಕೂಡ ಕಡಿಮೆ ಮಾಡಿದ್ದಾರೆ ಎಂದು ಕಿಡಿಕಾರಿದರು.
ಬೀದಿ ವ್ಯಾಪಾರಿಗಳು, ಇತರೆ ಎಲ್ಲಾ ರೀತಿಯ ವ್ಯಾಪಾರಿಗಳು, ಲಾರಿ, ಬಸ್ ಚಾಲಕರಿಗೆ ಕೊರೊನಾ ರಿಪೋರ್ಟ್ ತರಲು ಆದೇಶಿಸಿ. ಆಗ ಎಲ್ಲರೂ ತಪಾಸಣೆ ಮಾಡುತ್ತಾರೆ ಎಂದು ಅವರು ಅಭಿಪ್ರಾಯಪಟ್ಟರು.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…