ಮಂಗಳೂರು: ಕೊರೋನಾ ಪಾಸಿಟಿವ್ ಆದವರಿಗೆ ಎಲ್ಲೂ ಚಿಕಿತ್ಸೆಯನ್ನು ಉಚಿತವಾಗಿ ನೀಡುತ್ತಿಲ್ಲ. ಹೀಗಾಗಿ ಕೋವಿಡ್ ಚಿಕಿತ್ಸೆಗಾಗಿ ಹಣ ಪಾವತಿಸಿದ ಎಲ್ಲರ ಹಣವನ್ನು ರಾಜ್ಯ ಸರ್ಕಾರ ಮರು ಪಾವತಿಸಬೇಕು ಎಂದು ಮಾಜಿ ಆರೋಗ್ಯ ಸಚಿವ, ಶಾಸಕ ಯು.ಟಿ.ಖಾದರ್ ಆಗ್ರಹಿಸಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು, ಕೊರೋನಾ ಪಾಸಿಟಿವ್ ಆದವರಿಗೆ ಎಲ್ಲೂ ಉಚಿತ ಚಿಕಿತ್ಸೆ ಸಿಗುತ್ತಿಲ್ಲ. ಅವರೆಲ್ಲರ ಹಣವನ್ನು ಮರು ಪಾವತಿಸಲು ಸಿಎಂ ಪರಿಹಾರ ನಿಧಿಯಿಂದ ತಕ್ಷಣ ಹಣ ಬಿಡುಗಡೆ ಮಾಡಬೇಕು. ಆಗ ಆಸ್ಪತ್ರೆಗಳು ಎಷ್ಟು ಬಿಲ್ ಮಾಡಿದೆ ಅನ್ನೋದು ಸರ್ಕಾರಕ್ಕೆ ಗೊತ್ತಾಗುತ್ತದೆ ಎಂದರು.
ಸರ್ಕಾರ ಈ ಬಗ್ಗೆ ತಕ್ಷಣ ಕಾರ್ಯ ಪ್ರವೃತವಾಗಬೇಕೆಂದು ಅವರು ಒತ್ತಾಯಿಸಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಕೊರೊನಾ ಪಾಸಿಟಿವ್ ಹಾಗೂ ಕೊರೊನಾದಿಂದ ಸಾವನ್ನಪ್ಪುವ ಸಂಖ್ಯೆ ಹೆಚ್ಚಾಗುತ್ತಿದೆ. ಆದರೂ ಎಲ್ಲೆಡೆ ಲಾಕ್ಡೌನ್ ಸಡಿಲಿಸಿದ್ದಾರೆ. ಇತ್ತೀಚೆಗೆ ಕೊರೊನಾ ಟೆಸ್ಟಿಂಗ್ ಕೂಡ ಕಡಿಮೆ ಮಾಡಿದ್ದಾರೆ ಎಂದು ಕಿಡಿಕಾರಿದರು.
ಬೀದಿ ವ್ಯಾಪಾರಿಗಳು, ಇತರೆ ಎಲ್ಲಾ ರೀತಿಯ ವ್ಯಾಪಾರಿಗಳು, ಲಾರಿ, ಬಸ್ ಚಾಲಕರಿಗೆ ಕೊರೊನಾ ರಿಪೋರ್ಟ್ ತರಲು ಆದೇಶಿಸಿ. ಆಗ ಎಲ್ಲರೂ ತಪಾಸಣೆ ಮಾಡುತ್ತಾರೆ ಎಂದು ಅವರು ಅಭಿಪ್ರಾಯಪಟ್ಟರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…