Featured

ಮಂಗಳೂರು : ಕೋವಿಡ್ ನೆಗೆಟಿವ್ ವರದಿ ಇಲ್ಲದೆ ಗಡಿ ಪ್ರವೇಶವಿಲ್ಲ : ಎಡಿಜಿಪಿ ಪ್ರತಾಪ್ ರೆಡ್ಡಿ ಸೂಚನೆ

ಕೇರಳದಲ್ಲಿ ಕೊರೋನ ಪ್ರಕರಣ ವ್ಯಾಪಕವಾಗಿ ಹೆಚ್ಚುತ್ತಿರುವ ಹಿನ್ನೆಲೆ..

ಮಂಗಳೂರು : ಕೋವಿಡ್ ನೆಗೆಟಿವ್ ವರದಿ ಇಲ್ಲದೆ ಗಡಿ ಪ್ರವೇಶವಿಲ್ಲ : ಎಡಿಜಿಪಿ ಪ್ರತಾಪ್ ರೆಡ್ಡಿ ಸೂಚನೆ

ಮಂಗಳೂರು : ಕೇರಳದಲ್ಲಿ ಕೊರೋನ ಪ್ರಕರಣ ವ್ಯಾಪಕವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಮಂಗಳೂರು- ಕಾಸರಗೋಡು ಗಡಿ ಭಾಗ ತಲಪಾಡಿಯಲ್ಲಿ ಕಟ್ಟು ನಿಟ್ಟಿನ ಕೈಗೊಳ್ಳುವಂತೆ ಕಾನೂನು ಸುವ್ಯವಸ್ಥೆ ಎಡಿಜಿಪಿ ಪ್ರತಾಪ್ ರೆಡ್ಡಿ ಸೂಚನೆ ನೀಡಿದ್ದಾರೆ.

ತಲಪಾಡಿಗೆ ಇಂದು ಭೇಟಿ ನೀಡಿದ ಅವರು, ರಾಜ್ಯ ಸರಕಾರದ ಸೂಚನೆಯಂತೆ ಕೋವಿಡ್ ನೆಗೆಟಿವ್ ವರದಿ ಇಲ್ಲದೆ ರಾಜ್ಯದೊಳಗೆ ಪ್ರವೇಶ ನೀಡದಂತೆ ಕ್ರಮ ವಹಿಸುವಂತೆ ಅವರು ಈ ಸಂದರ್ಭ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೇವಲ ತುರ್ತು ಭೇಟಿ ಹಾಗೂ ಕೇರಳ ಭಾಗದ ವಿದ್ಯಾರ್ಥಿಗಳು ಪರೀಕ್ಷಾ ಹಾಲ್ ಟಿಕೆಟ್ ತೋರಿಸಿದರೆ ಅವಕಾಶ ನೀಡಲಾಗುತ್ತದೆ. ಕಾಸರಗೋಡು ಭಾಗದಲ್ಲಿ ಕೊರೋನ ಸೋಂಕು ಹೆಚ್ಚಿರುವ ಹಿನ್ನೆಲೆಯಲ್ಲಿ ಈ ಬಿಗಿ ಕ್ರಮವನ್ನು ಕೈಗೊಳ್ಳಲಾಗುತ್ತಿದೆ. ಕೇರಳದಿಂದ ರೈಲು ಮಾರ್ಗವಾಗಿ ಬರುವರಿಗೆ ಪರೀಕ್ಷೆ ನಡೆಸಲಾಗುತ್ತಿದೆ. ಮಂಗಳೂರಿನ ಪುರಭವನದಲ್ಲಿ ಪರೀಕ್ಷಾ ಕೇಂದ್ರ ತೆರೆದಿರುವುದಾಗಿ ಪ್ರತಾಪ್ ರೆಡ್ಡಿ ಹೇಳಿದರು.

ಕಾಸರಗೋಡು ಡಿಸಿ, ಎಸ್ಪಿ ಜತೆ ಜಿಲ್ಲೆಯ ಅಧಿಕಾರಿಗಳು ಸಂಪರ್ಕದಲ್ಲಿದ್ದಾರೆ. ಹಾಗಾಗಿ ಉಭಯ ಜಿಲ್ಲೆಗಳ ನಡುವೆ ಯಾವುದೇ ಗೊಂದಲವಿಲ್ಲ ಎಂದು ಅವರು ಹೇಳಿದರು. ಗಡಿಯಲ್ಲಿ ಹೆಚ್ಚುವರಿ ಪೊಲೀಸ್ ಭದ್ರತೆ ಸೇರಿದಂತೆ ತಪಾಸಣೆ ಬಗ್ಗೆ ಅವರು ಈ ಸಂದರ್ಭ ಮಾಹಿತಿಯನ್ನು ಪಡೆದರು.

ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ, ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್, ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೊನಾವಣೆ ಈ ಸಂದರ್ಭ ಉಪಸ್ಥಿತರಿದ್ದು ಮಾಹಿತಿ ನೀಡಿದರು.

Vishwa News 24

Recent Posts

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

31 minutes ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

37 minutes ago

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು – vishwanews24

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…

41 minutes ago

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ – vishwanews24

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…

48 minutes ago

ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ – vishwanews24

ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ ಉಡುಪಿ : ಸುದೀಪ್‌ ಶೆಟ್ಟಿ ಆತ್ಮಹತ್ಯೆ…

59 minutes ago

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ – vishwanews24

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ‌ ರಾಷ್ಟ್ರೀಯ…

21 hours ago