ಮಂಗಳೂರು : ಕೇರಳದಲ್ಲಿ ಕೊರೋನ ಪ್ರಕರಣ ವ್ಯಾಪಕವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಮಂಗಳೂರು- ಕಾಸರಗೋಡು ಗಡಿ ಭಾಗ ತಲಪಾಡಿಯಲ್ಲಿ ಕಟ್ಟು ನಿಟ್ಟಿನ ಕೈಗೊಳ್ಳುವಂತೆ ಕಾನೂನು ಸುವ್ಯವಸ್ಥೆ ಎಡಿಜಿಪಿ ಪ್ರತಾಪ್ ರೆಡ್ಡಿ ಸೂಚನೆ ನೀಡಿದ್ದಾರೆ.
ತಲಪಾಡಿಗೆ ಇಂದು ಭೇಟಿ ನೀಡಿದ ಅವರು, ರಾಜ್ಯ ಸರಕಾರದ ಸೂಚನೆಯಂತೆ ಕೋವಿಡ್ ನೆಗೆಟಿವ್ ವರದಿ ಇಲ್ಲದೆ ರಾಜ್ಯದೊಳಗೆ ಪ್ರವೇಶ ನೀಡದಂತೆ ಕ್ರಮ ವಹಿಸುವಂತೆ ಅವರು ಈ ಸಂದರ್ಭ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೇವಲ ತುರ್ತು ಭೇಟಿ ಹಾಗೂ ಕೇರಳ ಭಾಗದ ವಿದ್ಯಾರ್ಥಿಗಳು ಪರೀಕ್ಷಾ ಹಾಲ್ ಟಿಕೆಟ್ ತೋರಿಸಿದರೆ ಅವಕಾಶ ನೀಡಲಾಗುತ್ತದೆ. ಕಾಸರಗೋಡು ಭಾಗದಲ್ಲಿ ಕೊರೋನ ಸೋಂಕು ಹೆಚ್ಚಿರುವ ಹಿನ್ನೆಲೆಯಲ್ಲಿ ಈ ಬಿಗಿ ಕ್ರಮವನ್ನು ಕೈಗೊಳ್ಳಲಾಗುತ್ತಿದೆ. ಕೇರಳದಿಂದ ರೈಲು ಮಾರ್ಗವಾಗಿ ಬರುವರಿಗೆ ಪರೀಕ್ಷೆ ನಡೆಸಲಾಗುತ್ತಿದೆ. ಮಂಗಳೂರಿನ ಪುರಭವನದಲ್ಲಿ ಪರೀಕ್ಷಾ ಕೇಂದ್ರ ತೆರೆದಿರುವುದಾಗಿ ಪ್ರತಾಪ್ ರೆಡ್ಡಿ ಹೇಳಿದರು.
ಕಾಸರಗೋಡು ಡಿಸಿ, ಎಸ್ಪಿ ಜತೆ ಜಿಲ್ಲೆಯ ಅಧಿಕಾರಿಗಳು ಸಂಪರ್ಕದಲ್ಲಿದ್ದಾರೆ. ಹಾಗಾಗಿ ಉಭಯ ಜಿಲ್ಲೆಗಳ ನಡುವೆ ಯಾವುದೇ ಗೊಂದಲವಿಲ್ಲ ಎಂದು ಅವರು ಹೇಳಿದರು. ಗಡಿಯಲ್ಲಿ ಹೆಚ್ಚುವರಿ ಪೊಲೀಸ್ ಭದ್ರತೆ ಸೇರಿದಂತೆ ತಪಾಸಣೆ ಬಗ್ಗೆ ಅವರು ಈ ಸಂದರ್ಭ ಮಾಹಿತಿಯನ್ನು ಪಡೆದರು.
ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ, ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್, ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೊನಾವಣೆ ಈ ಸಂದರ್ಭ ಉಪಸ್ಥಿತರಿದ್ದು ಮಾಹಿತಿ ನೀಡಿದರು.
ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು ಮಲ್ಪೆ: ಕಳೆದ ಎರಡು ದಿನಗಳಿಂದ ಆಳಸಮುದ್ರದಲ್ಲಿ ಭಾರೀ…
ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು…
ಮಂಗಳೂರು: ವಂದೇ ಭಾರತ್ ಎಕ್ಸ್ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…
ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…
ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…
ಎಲ್ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…