Featured

ಮಂಗಳೂರು: ಕೋವಿಡ್ ಮಾರ್ಗಸೂಚಿ ಪಾಲಿಸಿ ದಸರಾ ಆಚರಿಸಿ : ಸಚಿವ ಅಂಗಾರ -Vishwanews24

ಮಂಗಳೂರು: ಕೋವಿಡ್ ಮಾರ್ಗಸೂಚಿ ಪಾಲಿಸಿ ದಸರಾ ಆಚರಿಸಿ : ಸಚಿವ ಅಂಗಾರ -Vishwanews24

ಮಂಗಳೂರು : ಕೋವಿಡ್ ಸೋಂಕು ಹಿನ್ನಲೆಯಲ್ಲಿ ಮುಂಬರುವ ನವರಾತ್ರಿ (ದಸರಾ) ಉತ್ಸವವನ್ನು ಜಿಲ್ಲೆಯ ಕಟೀಲು ದುರ್ಗಾಪರಮೇಶ್ವರಿ, ಕುದ್ರೋಳಿ ಗೋಕರ್ಣನಾಥೇಶ್ವರ ಹಾಗೂ ಮಂಗಳಾದೇವಿ ಸೇರಿದಂತೆ ಇತರೆ ದೇವಸ್ಥಾನಗಳಲ್ಲಿ ಜಿಲ್ಲಾಡಳಿತ ಕಳೆದ ವರ್ಷ ಹೊರಡಿಸಿದ ಮಾರ್ಗಸೂಚಿಗಳಂತೆಯೇ ಈ ಬಾರಿಯೂ ಆಚರಿಸುವುದು ಸೂಕ್ತ ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರ ಅವರು ಹೇಳಿದರು.

ಅವರು ಅ.1ರ ಶುಕ್ರವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ನವರಾತ್ರಿ ಉತ್ಸವ ಆಚರಣೆ ಸಂಬಂಧ ಜಿಲ್ಲಾ ಧಾರ್ಮಿಕ ಪರಿಷತ್ತಿನ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೋವಿಡ್-19 ಸೋಂಕು ಹಿನ್ನಲೆಯಲ್ಲಿ ಕಳೆದ ಬಾರಿ ನವರಾತ್ರಿ ಉತ್ಸವ (ದಸರಾ) ಆಚರಣೆ ಕುರಿತಂತೆ ಜಿಲ್ಲಾಡಳಿತ ಮಾರ್ಗಸೂಚಿಗಳನ್ನು ಪ್ರಕಟಿಸಿತ್ತು. ಅದರಂತೆ ದೇವಸ್ಥಾನಗಳ ಆಡಳಿತ ಮಂಡಳಿಗಳು, ಪ್ರಮುಖವಾಗಿ ಭಕ್ತರು ಸಹಕರಿಸಿದರು. ಈ ಬಾರಿ ಕೋವಿಡ್ 3ನೇ ಅಲೆ ಎದುರಾದಲ್ಲಿ ಮತ್ತೊಮ್ಮೆ ಜಿಲ್ಲೆಯಲ್ಲಿ ಲಾಕ್ ಡೌನ್ ಮಾಡುವ ಸಂದರ್ಭವನ್ನು ತಳ್ಳಿಹಾಕುವಂತಿಲ್ಲ. ಸಮಸ್ಯೆ ಬಿಗಡಾಯಿಸದಂತೆ ನಮಗೆ ನಾವೇ ತಡೆ ಹಾಕಿಕೊಳ್ಳಬೇಕಿದೆ ಎಂದರು. ದೇವಸ್ಥಾನಗಳಿಗೆ ಬರುವ ಭಕ್ತಾದಿಗಳಿಗೆ ಕೋವಿಡ್ ವ್ಯಾಕ್ಸಿನ್ ಪ್ರಯೋಜನದ ಬಗ್ಗೆ ದೇವಸ್ಥಾನಗಳಲ್ಲಿ ಜಾಗೃತಿ ಮೂಡಿಸಬೇಕು, ದೇವಸ್ಥಾನದ ಆವರಣದಲ್ಲಿಯೇ ಜಿಲ್ಲಾಡಳಿತದ ಸಹಯೋಗದಲ್ಲಿ ಲಸಿಕಾ ಶಿಬಿರವನ್ನು ಏರ್ಪಡಿಸಬೇಕು ಎಂದು ಅವರು ಸಲಹೆ ನೀಡಿದರು.

ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ ಅವರು ಮಾತನಾಡಿ, ದಸರಾ ಸಂದರ್ಭದಲ್ಲಿ ಕೋವಿಡ್ ಸಮುಚಿತ ವರ್ತನೆಯನ್ನು ಪಾಲಿಸಿಕೊಂಡು ದೇವಸ್ಥಾನದಲ್ಲಿ ದರ್ಶನ ಹಾಗೂ ಸೇವೆಯನ್ನು ನಿರ್ವಹಿಸಬೇಕು. ಮಾಸ್ಕ್ ಧಾರಣೆ ಕಡ್ಡಾಯ ಹಾಗೂ ಸಾಮಾಜಿಕ ಅಂತರ ಪಾಲನೆ ಎಲ್ಲರ ಜವಬ್ದಾರಿಯಾಗಿದೆ. ಕಳೆದ ವರ್ಷ ಹೊರಡಿಸಲಾದ ಮಾರ್ಗಸೂಚಿಗಳಂತೆ ಈ ಬಾರಿಯೂ ಜಿಲ್ಲಾಡಳಿತದಿಂದ ಹೊರಡಿಸಲಾಗುವ ಮಾರ್ಗಸೂಚಿಗಳ ಅನ್ವಯ ದಸರಾ ಆಚರಣೆಗೆ ದೇವಸ್ಥಾನದ ಆಡಳಿತ ಮಂಡಳಿಗಳು ಸಹಕಾರ ನೀಡಬೇಕು ಎಂದರು.

Vishwa News 24

Recent Posts

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ – vishwanews24

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ  ಸಮುದ್ರಪಾಲಾದ ಘಟನೆ ಉತ್ತರ…

6 hours ago

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ – vishwanews24

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…

6 hours ago

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ – vishwanews24

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…

7 hours ago

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ – vishwanews24

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…

7 hours ago

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ – vishwanews24

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…

7 hours ago

ಹಿಂದಿ ಕಿರುತೆರೆ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…

7 hours ago