Featured

ಮಂಗಳೂರು : ಕ್ಯಾನ್ಸರ್ ಪೀಡಿತೆಗೆ ತನ್ನ ಕೂದಲು ದಾನ ಮಾಡುವ ಮೂಲಕ ಮಾನವೀಯತೆ ಮೆರೆದು ಪ್ರಶಂಸೆಗೆ ಪಾತ್ರರಾದ ಮಂಗಳೂರಿನ ರೇಷ್ಮಾ ರಾಮದಾಸ್ -Vishwanews24

ಸುಳ್ಯ: ಕ್ಯಾನ್ಸರ್ ಪೀಡಿತೆಗೆ ತನ್ನ ಕೂದಲು ದಾನ ಮಾಡುವ ಮೂಲಕ ಸುಳ್ಯದ ಮಹಿಳೆಯೊಬ್ಬರು ಮಾನವೀಯತೆ ಮೆರೆದು ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಮೂಲತಃ ಸುಳ್ಯದವರಾಗಿರುವ, ಈಗ ಮಂಗಳೂರಿನ ಶಕ್ತಿನಗರ ನಿವಾಸಿಯಾಗಿರುವ ರೇಷ್ಮಾ ರಾಮದಾಸ್ ಅವರು ಕ್ಯಾನ್ಸರ್ ಪೀಡಿತ ಮಹಿಳೆಯ ಮುಖದಲ್ಲಿ ಮಂದಹಾಸ ಮೂಡಿಸಲು ತನ್ನ  ಕೂದಲನ್ನು ದಾನ ಮಾಡಿದ್ದಾರೆ.

ಎರಡು ವರ್ಷಗಳ ಹಿಂದೆ, ನನ್ನ ಸ್ನೇಹಿತೆ ತನ್ನ ಕೂದಲನ್ನು ದಾನ ಮಾಡಿದ್ದಳು, ಆಕೆಯನ್ನು ನೋಡಿ ಪ್ರೇರಣೆಗೊಂಡು ನಾನು ಕೂಡ ಕೂದಲು ದಾನ ಮಾಡಿದ್ದೇನೆ.

ಕೂದಲನ್ನು ಹೇಗೆ ದಾನ ಮಾಡಬಹುದು ಮತ್ತು ಯಾರನ್ನು ಸಂಪರ್ಕಿಸಬೇಕು ಎಂದು ನನಗೆ ತಿಳಿದಿರಲಿಲ್ಲ. ನನ್ನ ಪತಿ ರಾಮದಾಸ್ ಅವರು ಹೇರ್ ಬ್ಯಾಂಕ್ ಅನ್ನು ಶಿಫಾರಸು ಮಾಡಿದರು. ಹಾಗಾಗಿ ಇದು ನನ್ನ ಕೂದಲನ್ನು ದಾನ ಮಾಡಲು ಒಂದು ಸುವರ್ಣಾವಕಾಶ ಎಂದು ತಿಳಿದು, ಸಂತೋಷದಿಂದ ಒಪ್ಪಿಕೊಂಡೆ.

ಕ್ಯಾನ್ಸರ್ ರೋಗಿಗಳಿಗೆ ನಾವು ಏನನ್ನಾದರೂ ನೀಡಿದಾಗ ಅವರು ಹೇಗೆ ಸಂತೋಷ ಪಡುತ್ತಾರೆ ಎಂಬ ವೀಡಿಯೊಗಳನ್ನು ನಾನು ನೋಡಿದ್ದೆ. ಆರ್ಥಿಕವಾಗಿ ಸಹಾಯ ಮಾಡುವುದು ಸಾಧ್ಯವಿರಲಿಲ್ಲವಾದ್ದರಿಂದ, ನನ್ನ ಕೂದಲನ್ನು ತ್ರಿಶೂರ್‌ನಲ್ಲಿರುವ ಹೇರ್ ಬ್ಯಾಂಕ್‌ಗೆ ದಾನ ಮಾಡಲು ನಿರ್ಧರಿಸಿದೆ. ಈ ನಿರ್ಧಾರದಲ್ಲಿ ನನ್ನ ಪತಿ ನನ್ನನ್ನು ಬೆಂಬಲಿಸಿದರು. ಕ್ಯಾನ್ಸರ್ ರೋಗಿಯ ಮುಖದಲ್ಲಿ ಮಂದಹಾಸವನ್ನು ತರುವುದಕ್ಕಾಗಿ ನನ್ನ ಕೂದಲನ್ನು ದಾನ ಮಾಡಿರುವುದರಿಂದ ನನಗೆ  ತುಂಬಾ ಸಂತೋಷ ತಂದಿದೆ ಎಂದು ರೇಷ್ಮಾ  ತಿಳಿಸಿದ್ದಾರೆ.

ರೇಷ್ಮಾ ತನ್ನ ಉದ್ದವಾದ ಕೇಶರಾಶಿಯ ಮುಕ್ಕಾಲು ಭಾಗವನ್ನು ಕತ್ತರಿಸಿ ನೀಡಿದ್ದಾರೆ. ಅವರ ಈ ಮಾನವೀಯ ಕಾರ್ಯ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಪ್ರಶಂಸೆಗೆ ಕಾರಣವಾಗುತ್ತಿದೆ. ರೇಷ್ಮಾ ಅವರು ಸುಳ್ಯದ ಕೇರ್ಪಳ ನಿವಾಸಿ ರಾಮ ಪಾಟಾಳಿಯವರ ಪುತ್ರಿ. ಪತಿ ರಾಮದಾಸ್ ಅವರೊಂದಿಗೆ ಮಂಗಳೂರಿನಲ್ಲಿ ನೆಲೆಸಿದ್ದಾರೆ.

 

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 day ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

1 day ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

1 day ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago