Featured

ಮಂಗಳೂರು : ಕ್ಯಾನ್ಸರ್ ಪೀಡಿತೆಗೆ ತನ್ನ ಕೂದಲು ದಾನ ಮಾಡುವ ಮೂಲಕ ಮಾನವೀಯತೆ ಮೆರೆದು ಪ್ರಶಂಸೆಗೆ ಪಾತ್ರರಾದ ಮಂಗಳೂರಿನ ರೇಷ್ಮಾ ರಾಮದಾಸ್ -Vishwanews24

ಸುಳ್ಯ: ಕ್ಯಾನ್ಸರ್ ಪೀಡಿತೆಗೆ ತನ್ನ ಕೂದಲು ದಾನ ಮಾಡುವ ಮೂಲಕ ಸುಳ್ಯದ ಮಹಿಳೆಯೊಬ್ಬರು ಮಾನವೀಯತೆ ಮೆರೆದು ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಮೂಲತಃ ಸುಳ್ಯದವರಾಗಿರುವ, ಈಗ ಮಂಗಳೂರಿನ ಶಕ್ತಿನಗರ ನಿವಾಸಿಯಾಗಿರುವ ರೇಷ್ಮಾ ರಾಮದಾಸ್ ಅವರು ಕ್ಯಾನ್ಸರ್ ಪೀಡಿತ ಮಹಿಳೆಯ ಮುಖದಲ್ಲಿ ಮಂದಹಾಸ ಮೂಡಿಸಲು ತನ್ನ  ಕೂದಲನ್ನು ದಾನ ಮಾಡಿದ್ದಾರೆ.

ಎರಡು ವರ್ಷಗಳ ಹಿಂದೆ, ನನ್ನ ಸ್ನೇಹಿತೆ ತನ್ನ ಕೂದಲನ್ನು ದಾನ ಮಾಡಿದ್ದಳು, ಆಕೆಯನ್ನು ನೋಡಿ ಪ್ರೇರಣೆಗೊಂಡು ನಾನು ಕೂಡ ಕೂದಲು ದಾನ ಮಾಡಿದ್ದೇನೆ.

ಕೂದಲನ್ನು ಹೇಗೆ ದಾನ ಮಾಡಬಹುದು ಮತ್ತು ಯಾರನ್ನು ಸಂಪರ್ಕಿಸಬೇಕು ಎಂದು ನನಗೆ ತಿಳಿದಿರಲಿಲ್ಲ. ನನ್ನ ಪತಿ ರಾಮದಾಸ್ ಅವರು ಹೇರ್ ಬ್ಯಾಂಕ್ ಅನ್ನು ಶಿಫಾರಸು ಮಾಡಿದರು. ಹಾಗಾಗಿ ಇದು ನನ್ನ ಕೂದಲನ್ನು ದಾನ ಮಾಡಲು ಒಂದು ಸುವರ್ಣಾವಕಾಶ ಎಂದು ತಿಳಿದು, ಸಂತೋಷದಿಂದ ಒಪ್ಪಿಕೊಂಡೆ.

ಕ್ಯಾನ್ಸರ್ ರೋಗಿಗಳಿಗೆ ನಾವು ಏನನ್ನಾದರೂ ನೀಡಿದಾಗ ಅವರು ಹೇಗೆ ಸಂತೋಷ ಪಡುತ್ತಾರೆ ಎಂಬ ವೀಡಿಯೊಗಳನ್ನು ನಾನು ನೋಡಿದ್ದೆ. ಆರ್ಥಿಕವಾಗಿ ಸಹಾಯ ಮಾಡುವುದು ಸಾಧ್ಯವಿರಲಿಲ್ಲವಾದ್ದರಿಂದ, ನನ್ನ ಕೂದಲನ್ನು ತ್ರಿಶೂರ್‌ನಲ್ಲಿರುವ ಹೇರ್ ಬ್ಯಾಂಕ್‌ಗೆ ದಾನ ಮಾಡಲು ನಿರ್ಧರಿಸಿದೆ. ಈ ನಿರ್ಧಾರದಲ್ಲಿ ನನ್ನ ಪತಿ ನನ್ನನ್ನು ಬೆಂಬಲಿಸಿದರು. ಕ್ಯಾನ್ಸರ್ ರೋಗಿಯ ಮುಖದಲ್ಲಿ ಮಂದಹಾಸವನ್ನು ತರುವುದಕ್ಕಾಗಿ ನನ್ನ ಕೂದಲನ್ನು ದಾನ ಮಾಡಿರುವುದರಿಂದ ನನಗೆ  ತುಂಬಾ ಸಂತೋಷ ತಂದಿದೆ ಎಂದು ರೇಷ್ಮಾ  ತಿಳಿಸಿದ್ದಾರೆ.

ರೇಷ್ಮಾ ತನ್ನ ಉದ್ದವಾದ ಕೇಶರಾಶಿಯ ಮುಕ್ಕಾಲು ಭಾಗವನ್ನು ಕತ್ತರಿಸಿ ನೀಡಿದ್ದಾರೆ. ಅವರ ಈ ಮಾನವೀಯ ಕಾರ್ಯ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಪ್ರಶಂಸೆಗೆ ಕಾರಣವಾಗುತ್ತಿದೆ. ರೇಷ್ಮಾ ಅವರು ಸುಳ್ಯದ ಕೇರ್ಪಳ ನಿವಾಸಿ ರಾಮ ಪಾಟಾಳಿಯವರ ಪುತ್ರಿ. ಪತಿ ರಾಮದಾಸ್ ಅವರೊಂದಿಗೆ ಮಂಗಳೂರಿನಲ್ಲಿ ನೆಲೆಸಿದ್ದಾರೆ.

 

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago