ಮಂಗಳೂರು: ನಗರದ ಜೆಪ್ಪು ಮಹಾಕಾಳಿಪಡ್ಪು ಬಳಿ ಗೆಳೆಯರೊಂದಿಗೆ ಕ್ರಿಕೆಟ್ ಆಟವಾಡುತ್ತಿದ್ದ ಬಾಲಕ ವಿದ್ಯುತ್ ತಂತಿ ತಗುಲಿದ ಪರಿಣಾಮ ಮೃತಪಟ್ಟ ಘಟನೆ ಶನಿವಾರ ನಡೆದಿದೆ.
ಮೂಲತಃ ಹಾವೇರಿಯ ಜಿಲ್ಲೆಯ ಬ್ಯಾಡಗಿ ತಾಲೂಕಿನ ಬನ್ನಿಹಟ್ಟಿ ಗ್ರಾಮದ ಪ್ರಸಕ್ತ ಜೆಪ್ಪು ಮಹಾಕಾಳಿಪಡ್ಪುನಿರ್ಮಲ ನಗರದಲ್ಲಿ ವಾಸವಾಗಿದ್ದ ಕಣ್ಣನ ಗೌಡ ಎಂಬವರ ಪುತ್ರ ವರುಣ್ (15) ಮೃತಪಟ್ಟ ಬಾಲಕ.
ಎ.11ರಂದು ಮಹಾಕಾಳಿಪಡ್ಪಿಅಂಡರ್ಪಾಸ್ ಬಳಿಯ ಭಜನಾಮಂದಿರದ ಸಮೀಪ ಕ್ರಿಕೆಟ್ ಆಟವಾಡುತ್ತಿದ್ದ ವೇಳೆ ಮಂದಿರದ ಛಾವಣಿ ಬಿದ್ದ ಬಾಲ್ ಹೆಕ್ಕಲು ಹೋದಾಗ ವಿದ್ಯುತ್ ತಂತಿ ತಗುಲಿದ್ದು ಸ್ಥಳದಲ್ಲೇ ಮೃತಪಟ್ಟಿದ್ದ.
ವಾರದ ಹಿಂದೆಷ್ಟೇ ಎಸೆಸೆಲ್ಸಿ ಪರೀಕ್ಷೆ ಬರೆದಿದ್ದ ವರುಣ್ ಫಲಿತಾಂಶದ ನಿರೀಕ್ಷೆಯಲ್ಲಿದ್ದ. ತಂದೆ ಕಣ್ಣನ ಗೌಡ ಮಹಾಕಾಳಿಪಡ್ಪುವಿನಲ್ಲಿ ಸಣ್ಣ ಕ್ಯಾಂಟೀನ್ ನಡೆಸುತ್ತಿದ್ದಾರೆ. ತಂದೆ-ತಾಯಿ, ಅಣ್ಣ ಮತ್ತು ಮೂರುವರೆ ವರ್ಷದ ತಂಗಿಯನ್ನು ವರುಣ್ ಅಗಲಿದ್ದಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…