ಮಂಗಳೂರು: ಕ್ರಿಶ್ಚಿಯನ್ ಯುವತಿಯೊಬ್ಬಳಿಗೆ ಮಾದಕ ದೃವ್ಯ ನೀಡಿ ಆಕೆಯ ಮೇಲೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ವಿಶ್ವಹಿಂದೂಪರಿಷತ್ ಗೆ ದೂರು ನೀಡಿದ್ದು, ತನ್ನ ಮಗಳನ್ನು ರಕ್ಷಣೆ ಮಾಡಿ ಎಂದು ತಾಯಿ ಮನವಿ ಮಾಡಿದ್ದಾರೆ.
ಆರೋಪಿ ಕೃಷ್ಣಾಪುರದ ಮೊಹಮ್ಮದ್ ಷರೀಫ್ ಸಿದ್ದಿಕ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಯುವತಿ ಬಿಜೈ ನ ನಿವಾಸಿಯಾಗಿದ್ದು, ಕಾಲೇಜು ಓದುತ್ತಿರುವ ಸಂದರ್ಭ ಮಾದಕ ವಸ್ತುಗಳ ಚಟ ಅಂಟಿಸಿಕೊಂಡಿದ್ದಳು ಎಂದು ಹೇಳಲಾಗಿದ್ದು, ಕಳೆದ ಮೂರು ವರ್ಷಗಳಿಂದ ಆರೋಪಿ ಕೃಷ್ಣಾಪುರದ ಮೊಹಮ್ಮದ್ ಷರೀಫ್ ಸಿದ್ದಿಕ್ ಎಂಬಾತ ಯುವತಿಗೆ ಮಾದಕ ದ್ರವ್ಯ ನೀಡಿ ಪದೇ ಪದೇ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ ಎಂದು ಯುವತಿ ತಾಯಿ ಆರೋಪಿಸಿದ್ದಾರೆ. ಅಲ್ಲದೆ ಇದೀಗ ತನ್ನ ಮಗಳ ಆರೋಗ್ಯ ಸ್ಥಿತಿ ಹದಗೆಟ್ಟಿದೆ ಎಂದು ವಿಎಚ್ ಪಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
”ಸಿದ್ದಿಕ್ ನನ್ನ ಮಗಳನ್ನು ತನ್ನ ಮನೆಯಿಂದ ಕರೆದುಕೊಂಡು ಹೋಗುತ್ತಿದ್ದ. ತನ್ನ ಸ್ನೇಹಿತರೊಂದಿಗೆ ಸೇರಿ ದಿನಗಟ್ಟಲೆ ಆಕೆಯನ್ನು ತಮ್ಮ ಬಳಿಯೇ ಇಟ್ಟುಕೊಂಡಿದ್ದ. ನಾನು ಪೊಲೀಸರಿಗೆ ಹಾಗೂ ನಮ್ಮ ಧಾರ್ಮಿಕ ಮುಖಂಡರಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ.
“ನನ್ನ ಮಾಹಿತಿಯ ಪ್ರಕಾರ, ಸಿದ್ದಿಕ್ ಈಗಾಗಲೇ ಮೂರು ಮದುವೆಯಾಗಿದ್ದಾನೆ ಮತ್ತು ಅವನು ನನ್ನ ಮಗಳ ಜೀವನವನ್ನು ಹಾಳುಮಾಡಿದ್ದಾನೆ” ಎಂದು ತಾಯಿ ದೂರಿನಲ್ಲಿ ತಿಳಿಸಿದ್ದಾರೆ. ತನ್ನ ಮತ್ತು ಮಗಳನ್ನು ಸಿದ್ದಿಕ್ನಿಂದ ರಕ್ಷಿಸಲು ಮಹಿಳೆ ವಿಶ್ವ ಹಿಂದೂ ಪರಿಷತ್ನ ಸಹಾಯವನ್ನು ಕೋರಿದ್ದಾಳೆ.
ವಿಎಚ್ ಪಿಗೆ ಮನವಿ ಮಾಡಿದ ಹಿನ್ನಲೆ ವಿಎಚ್ ಪಿ ಮುಖಂಡರಾದ ಶರಣ್ ಪಂಪ್ ವೆಲ್ ಯುವತಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಿದ್ದಾರೆ. ಈ ಹಿನ್ನಲೆ ಪ್ರಕರಣದ ಅರಿವು ಪಡೆದ ಉರ್ವಾ ಪೊಲೀಸರು ಸಿದ್ದಿಕ್ ನನ್ನು ಬಂಧಿಸಿದ್ದಾರೆ.
ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ವಿದೇಶಿ ಕರೆನ್ಸಿ ಸಹಿತ 23.56 ಲಕ್ಷ ರೂ.ಮೌಲ್ಯದ ಸೊತ್ತು ವಶ ಉಡುಪಿ:…
ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಡಿ.ಕೆ.ಶಿವಕುಮಾರ್ ಅಭಯ ಹೊಸದಿಲ್ಲಿ: "ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ…
ಕರ್ನಾಟಕದಲ್ಲಿ ಹೆಚ್ಚುತ್ತಿರುವ H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ H1N1 ಹಾಗೂ ಇನ್ಫ್ಲುಯೆನ್ಸ…
ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ ಮೈಸೂರು: ಸಾತಗಳ್ಳಿ ಪ್ರದೇಶದಲ್ಲಿ…
ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…
ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…