ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ಜಗಳ ; ಚೂರಿಯಿಂದ ಇರಿದು ವ್ಯಕ್ತಿಯ ಭೀಕರ ಕೊಲೆ : ತಂದೆ ಮಗನ ಬಂಧನ – Vishwanews24

Featured, ರಾಜ್ಯ ನ್ಯೂಸ್

ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ಜಗಳ ; ಚೂರಿಯಿಂದ ಇರಿದು ವ್ಯಕ್ತಿಯ ಭೀಕರ ಕೊಲೆ : ತಂದೆ ಮಗನ ಬಂಧನ – Vishwanews24

ಮಂಗಳೂರು, : ಕ್ಷುಲ್ಲಕ ಕಾರಣಕ್ಕೆ ಜಗಳವಾಡಿ ತಂದೆ ಮಗ ನೆರೆಮನೆಯ ವ್ಯಕ್ತಿಯೋರ್ವರನ್ನು ಚೂರಿಯಿಂದ ಇರಿದು ಕೊಲೆಗೈದಿರುವ ಘಟನೆ ನ.03 ರ ತಡರಾತ್ರಿ ನಗರದ ಕಾರ್ ಸ್ಟ್ರೀಟ್ ನಲ್ಲಿ ನಡೆದಿದೆ.

ಕಾರ್ ಸ್ಟ್ರೀಟ್ ಮಹಾಮ್ಮಾಯಿ ರಸ್ತೆಯಲ್ಲಿರುವ ವೀರ ವೆಂಕಟೇಶ ಅಪಾರ್ಟ್ಮೆಂಟ್ ನಿವಾಸಿ ವಿನಾಯಕ ಕಾಮತ್(44) ಕೊಲೆಯಾದವರು. ಅದೇ ಅಪಾರ್ಟ್ಮೆಂಟ್ ನಿವಾಸಿಗಳಾದ ತಂದೆ ಕೃಷ್ಣಾನಂದ ಕಿಣಿ ಹಾಗೂ ಮಗ ಅವಿನಾಶ್ ಕಿಣಿ ಕೊಲೆ ಆರೋಪಿಗಳು.

4 – 5 ದಿನಗಳ ಹಿಂದೆ ಅಪಾರ್ಟ್ ಮೆಂಟ್ ನ ಮುಂಭಾಗ ಮಂಗಳೂರು ಮನಪಾ ಸಿಮೆಂಟ್ ಹಾಕಿ ಸರಿ ಮಾಡಿದ್ದು ಇದರ ಮೇಲೆ ಬೇರೆಯವರ ಕಾರು ಹೋಗುವ ವಿಚಾರದಲ್ಲಿ ನಮ್ಮ ಆರೋಪಿಗಳು ತನ್ನ ಗಂಡನೊಂದಿಗೆ ಜಗಳ ಮಾಡಿದ್ದರು. ನ ೩ ರ ರಾತ್ರಿ ಅಪಾರ್ಟ್ ಮೆಂಟ್ ನಲ್ಲಿ ಕೆಲವರು ದೀಪಾವಳಿ ಆಚರಿಸುತ್ತಿದ್ದ ಸಂದರ್ಭ ವಿನಾಯಕ್ ಅಪಾರ್ಟ್ಮೆಂಟ್ ಕೆಳಗೆ ಹೋಗಿದ್ದಾರೆ. ಈ ಸಂದರ್ಭ ಪಾರ್ಕಿಂಗ್ ಸ್ಥಳದಲ್ಲಿದ್ದ ಕೃಷ್ಣಾನಂದ ಕಿಣಿ ಹಾಗೂ ಅವಿನಾಶ್ ಕಿಣಿ ಅವರೊಂದಿಗೆ ಜಗಳವಾಡತೊಡಗಿದ್ದು, ಗಲಾಟೆ ಕೇಳಿ ನನ್ನ ಅತ್ತೆಯೂ ಕೆಳಕ್ಕೆ ಹೋದಾಗ ಅವರನ್ನು ತಳ್ಳಿ, ಕೃಷ್ಣಾನಂದ ಕಿಣಿ ತಮ್ಮ ಕೈಯಲ್ಲಿದ್ದ ಚೂರಿನಿಂದ ವಿನಾಯಕ ಕಾಮತ್ ಅವರ ಎದೆಗೆ ಚುಚ್ಚಿದ್ದಾರೆ , ಅವರ ಮಗ ಅವಿನಾಶ್ ಕಿಣಿ ಕೂಡ ದೂಷಿಸುತ್ತಾ ಕೊಲೆಗೆ ಸಹಕರಿಸಿದ್ದಾರೆ. ಹಲ್ಲೆಯಿಂದ ಗಂಭೀರ ಗಾಯಗೊಂಡ ಎಂದು ಮೃತರ ಪತ್ನಿ ಅಮಣಿ ಕಾಮತ್ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ವಿನಾಯಕ್ ಕಾಮತ್ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ನ.೦೪ ರ 1.45 ರ ಬೆಳಿಗ್ಗೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ದೌಡಾಯಿಸಿದ ಬಂದರು ಠಾಣಾ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದು ತನಿಖೆ ಮುಂದುವರಿದಿದೆ.

ಇಂದಿನ ದಿನ ಭವಿಷ್ಯ : 04-11-2021 -Vishwanews24