Featured

ಮಂಗಳೂರು : ಖಾಸಗಿ ಬಸ್‌ನಲ್ಲಿ ತಿಗಣೆ ಕಡಿತ : ಮಹಿಳೆಗೆ 1.29 ಲಕ್ಷ ರೂ. ಪರಿಹಾರ ನೀಡಲು ಗ್ರಾಹಕರ ಆಯೋಗ ಆದೇಶ – vishwanews24

ಮಂಗಳೂರು : ಖಾಸಗಿ ಬಸ್‌ನಲ್ಲಿ ತಿಗಣೆ ಕಡಿತ : ಮಹಿಳೆಗೆ 1.29 ಲಕ್ಷ ರೂ. ಪರಿಹಾರ ನೀಡಲು ಗ್ರಾಹಕರ ಆಯೋಗ ಆದೇಶ

ಮಂಗಳೂರು : ಖಾಸಗಿ ಬಸ್ ನಲ್ಲಿ ಬೆಂಗಳೂರಿಗೆ ಪ್ರಯಾಣಿಸುತ್ತಿರು ವೇಳೆ ತಿಗಣೆ ಕಾಟದಿಂದಾಗಿ ಅನಾರೋಗ್ಯಕ್ಕೀಡಾಗಿದ್ದ ಕಿರುತೆರೆ ನಟ ಶೋಭರಾಜ್ ಅವರ ಪತ್ನಿ ದೀಪಿಕಾ ಸುವರ್ಣ ಅವರಿಗೆ ಒಂದು ಲಕ್ಷ ಪರಿಹಾಸ ನೀಡಲು ಖಾಸಗಿ ಬಸ್ ಕಂಪೆನಿಗೆ ದಕ್ಷಿಣ ಕನ್ನಡ ಜಿಲ್ಲಾ ಗ್ರಾಹಕರ ವ್ಯಾಜ್ಯ ಆಯೋಗ ಆದೇಶಿಸಿದೆ.

2022ರ ಆಗಸ್ಟ್ 16ರಂದು ಮಂಗಳೂರಿನಿಂದ ಬೆಂಗಳೂರಿಗೆ ಪ್ರಯಾಣಿಸಲು ದೀಪಿಕಾ ಸುವರ್ಣ ಸೀಬರ್ಡ್ ಕಂಪನಿಯ ಸ್ಲೀಪರ್ ಬಸ್ಸಿನಲ್ಲಿ ರೆಡ್ ಬಸ್ ಆ್ಯಪ್ ಮೂಲಕ ಟಿಕೆಟ್ ಬುಕ್ ಮಾಡಿದ್ದರು. ರಾತ್ರಿ ವೇಳೆ ಬಸ್ ಹತ್ತಿದ ಬಳಿಕ ಬಸ್ ನಲ್ಲಿ ತಿಗಣೆ ಕಾಟ ಶುರುವಾಗಿದೆ. ಈ ಕುರಿತಂತೆ ದೀಪಿಕಾ ಅವರು ಬಸ್ ಸಿಬಂದಿಗೂ ಮಾಹಿತಿ ನೀಡಿದ್ದರು. ಆದರೆ ಬಸ್ ಸಿಬಂದಿ ದೀಪಿಕಾ ಮಾತಿಗೆ ಕ್ಯಾರೆಂದಿರಲಿಲ್ಲ.

ಬೆಂಗಳೂರು ತಲುಪಿದಾಗ ದೀಪಿಕಾ ಅವರಿಗೆ ಅನಾರೋಗ್ಯವುಂಟಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಇದರಿಂದಾಗಿ ಅವರು ಪಾಲ್ಗೊಂಡಿದ್ದ ಶೋ ನಿಂದ ಹೊರಬರಬೇಕಾಗಿತ್ತು, ಇದರಿಂದ ದಂಪತಿಗೆ ಭಾರೀ ಆರ್ಥಿಕ ನಷ್ಟ ಉಂಟಾಗಿತ್ತು. ಈ ಹಿನ್ನಲೆ ಸೀಬರ್ಡ್ ಬಸ್ಸಿನ ಅವ್ಯವಸ್ಥೆಯಿಂದಾಗಿ ಬೇಸತ್ತ ದೀಪಿಕಾ ಸುವರ್ಣ ಮಂಗಳೂರಿನ ಗ್ರಾಹಕರ ನ್ಯಾಯಾಲಯದಲ್ಲಿ ಬಸ್ ಕಂಪನಿ ಮತ್ತು ಬಸ್ ಟಿಕೆಟ್ ಬುಕ್ ಮಾಡಿದ್ದ ರೆಡ್ ಬಸ್ ವಿರುದ್ಧ ದೂರು ದಾಖಲಿಸಿದ್ದರು. ತನಗಾದ ಆಸ್ಪತ್ರೆ ವೆಚ್ಚ 18,650 ರೂ.ವನ್ನು ವರ್ಷಕ್ಕೆ ಶೇ. 15ರ ಬಡ್ಡಿ ಸಹಿತ ನೀಡಬೇಕು. ಅಲ್ಲದೆ, ತನಗಾದ ಮಾನಸಿಕ ಕಿರುಕುಳಕ್ಕೆ ಪ್ರತಿಯಾಗಿ 25 ಲಕ್ಷ ರೂ. ಪರಿಹಾರ ನೀಡಬೇಕೆಂದು ಕೇಳಿಕೊಂಡಿದ್ದರು. ಅಲ್ಲದೆ, ವ್ಯಾಜ್ಯಕ್ಕಾದ ವೆಚ್ಚವನ್ನೂ ಭರಿಸಬೇಕೆಂದು ಕೋರಿದ್ದರು.

ವಿಚಾರಣೆ ನಡೆಸಿದ ಗ್ರಾಹಕರ ವ್ಯಾಜ್ಯಗಳ ಆಯೋಗದ ಅಧ್ಯಕ್ಷ ಸೋಮಶೇಖರಪ್ಪ ಹಂಡಿಗೋಳ್ ಮತ್ತು ಮಹಿಳಾ ಸದಸ್ಯೆ ಶಾರದಮ್ಮ ಎಚ್.ಜಿ. ಅವರು ಪ್ರಕರಣದಲ್ಲಿ ಅಂತಿಮ ಆದೇಶ ಮಾಡಿದ್ದು, ಆಸ್ಪತ್ರೆಗೆ ತಗಲಿದ ವೆಚ್ಚ 18,650 ರೂ.ವನ್ನು ಅರ್ಜಿ ದಾಖಲಿಸಿದ 6-4-2023ರಿಂದ ಅನ್ವಯವಾಗುವಂತೆ ವರ್ಷಕ್ಕೆ ಆರು ಶೇಕಡಾ ಬಡ್ಡಿ ಸಹಿತ ಪಾವತಿ ಮಾಡಬೇಕು. ಅಲ್ಲದೆ, ಬಸ್ ಟಿಕೆಟ್ ದುಡ್ಡು 840 ರೂಪಾಯಿಯನ್ನು ವಾರ್ಷಿಕ ಆರು ಶೇ. ಬಡ್ಡಿ ಸಹಿತ ಅರ್ಜಿದಾರರಿಗೆ ಪಾವತಿಸಬೇಕು. ಸೇವೆಯಲ್ಲಿ ವ್ಯತ್ಯಯಗೊಳಿಸಿದ್ದಲ್ಲದೆ, ಅರ್ಜಿದಾರ ಮಹಿಳೆಗಾದ ಮಾನಸಿಕ ಮತ್ತು ದೈಹಿಕ ಕಿರುಕುಳಕ್ಕೆ ಪ್ರತಿಯಾಗಿ ಒಂದು ಲಕ್ಷ ರೂ. ಪರಿಹಾರವನ್ನು ವಾರ್ಷಿಕ ಶೇ.6ರ ಬಡ್ಡಿಯೊಂದಿಗೆ ನೀಡಬೇಕು. ಅಲ್ಲದೆ, ಅರ್ಜಿದಾರರಿಗೆ ಆಗಿರುವ ವಕೀಲಿಕೆ ವೆಚ್ಚ ಹತ್ತು ಸಾವಿರವನ್ನೂ ಭರಿಸಬೇಕು ಎಂದು ತೀರ್ಪು ನೀಡಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago