Featured

ಮಂಗಳೂರು : ಖಾಸಗಿ ಬಸ್‌ ಪ್ರಯಾಣ ದರ ಏರಿಕೆ ತಡೆಹಿಡಿಯಲು ಮನವಿ -Vishwanews24

ಮಂಗಳೂರು : ಖಾಸಗಿ ಬಸ್‌ ಪ್ರಯಾಣ ದರ ಏರಿಕೆ ತಡೆಹಿಡಿಯಲು ಮನವಿ -Vishwanews24

ಮಂಗಳೂರು: ಖಾಸಗೀ ಬಸ್ ಪ್ರಯಾಣ ದರದ ವಿಪರೀತ ಏರಿಕೆಯನ್ನು ಖಂಡಿಸಿ, ದ.ಕ.ಜಿಲ್ಲಾಡಳಿತದ ಏಕಪಕ್ಷೀಯ ನಿರ್ಧಾರವನ್ನು ವಿರೋಧಿಸಿ, ದಕ.ಜಿಲ್ಲೆಯ ಜಾತ್ಯಾತೀತ ಪಕ್ಷಗಳ ಹಾಗೂ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟದ ನೇತ್ರತ್ವದಲ್ಲಿ ದ.ಕ.ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಮನವಿಯನ್ನು ನೀಡಲಾಯಿತು.

ಸಾರಿಗೆ ಪ್ರಾಧಿಕಾರದ ಸಭೆಯನ್ನು ಕರೆಯದೆ ಏಕಾಏಕಿಯಾಗಿ ಬಸ್ ಪ್ರಯಾಣ ದರವನ್ನು ಏರಿಸಿದ್ದು ಸರ್ವಥಾ ಸರಿಯಲ್ಲ. ಕೊರೋನಾ ಸಂಕಷ್ಟದ ಕಾಲಘಟ್ಟದಲ್ಲಿ ಜಿಲ್ಲೆಯ ಲಕ್ಷಾಂತರ ಜನತೆ ಉದ್ಯೋಗವಿಲ್ಲದೆ ಆರ್ಥಿಕ ಸಮಸ್ಯೆಯಿಂದ ತೀವ್ರವಾಗಿ ಕಂಗೆಟ್ಟಿರುವಾಗ ಜಿಲ್ಲಾಧಿಕಾರಿ ಗಳು ಕೇವಲ ನೂರಾರು ಸಂಖ್ಯೆಯಲ್ಲಿರುವ ಬಸ್ ಮಾಲಕರ ನೋವಿಗೆ ಸ್ಪಂದಿಸುವ ನೆಪದಲ್ಲಿ ಸಾರಿಗೆ ಪ್ರಾಧಿಕಾರದ ನಿಯಮಗಳನ್ನು ಉಲ್ಲಂಘಿಸಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿರುವ ಸರ್ವ ರಾಜಕೀಯ ಪಕ್ಷಗಳು,ಕೂಡಲೇ ಏರಿಸಿದ ದರವನ್ನು ತಡೆ ಹಿಡಿದು,ಸಾರಿಗೆ ಪ್ರಾಧಿಕಾರದ ಸಭೆಯನ್ನು ಕರೆದು ಸಾರ್ವಜನಿಕರ ಅಹವಾಲನ್ನು ಸ್ವೀಕರಿಸಿ ಸೂಕ್ತ ತೀರ್ಮಾನವನ್ನು ಕೈಗೊಳ್ಳಬೇಕೆಂದು ಒಕ್ಕೊರಲಿನಿಂದ ಒತ್ತಾಯಿಸಲಾಯಿತು .

ನಿಯೋಗದಲ್ಲಿ ಕಾಂಗ್ರೆಸ್ ಪಕ್ಷದ ನಾಯಕರಾದ ಸದಾಶಿವ ಉಳ್ಳಾಲ್,ಶಶಿಧರ್ ಹೆಗ್ಡೆ, ನೀರಜ್ ಪಾಲ್,CPIM ನಾಯಕರಾದ ವಸಂತ ಆಚಾರಿ, ಸುನಿಲ್ ಕುಮಾರ್ ಬಜಾಲ್, CPI ಮುಖಂಡರಾದ ಕರುಣಾಕರ್,ಜಗತ್ಪಾಲ್, ಜಾತ್ಯಾತೀತ ಜನತಾದಳದ ಮುಖಂಡರಾದ ಸುಮತಿ ಎಸ್ ಹೆಗ್ಡೆ,ಅಲ್ತಾಫ್ ತುಂಬೆ,DYFI ನಾಯಕರಾದ ಮುನೀರ್ ಕಾಟಿಪಳ್ಳ,ಸಂತೋಷ್ ಬಜಾಲ್,ದಲಿತ ಸಂಘಟನೆಗಳ ನಾಯಕರಾದ ಎಂ.ದೇವದಾಸ್, ರಘು ಎಕ್ಕಾರು,ತಿಮ್ಮಯ್ಯ ಕೊಂಚಾಡಿ ಉಪಸ್ಥಿತರಿದ್ದರು .

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago