ಮಂಗಳೂರು: ನಗರದ ಹ್ಯಾಮಿಲ್ಟನ್ ವೃತ್ತದ ಬಳಿಯ ಇಂದಿರಾ ಕ್ಯಾಂಟೀನ್ ಬಳಿ ನಡೆದ ಖಾಸಗಿ ಬಸ್ ನಿರ್ವಾಹಕ ರಾಜೇಶ್ ಕೊಲೆ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ.
ಮಂಗಳೂರು-ವಿಟ್ಲ ನಡುವೆ ಸಂಚರಿಸುವ ಖಾಸಗಿ ಬಸ್ನಲ್ಲಿ ನಿರ್ವಾಹಕರಾಗಿದ್ದ ರಾಜೇಶ್ ಅವರ ಮೃತದೇಹವು ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಘಟನೆ ಬೆಳಕಿಗೆ ಬರುತ್ತಿದ್ದಂತೆ ಮೃತದೇಹದ ಗುರುತು ಪತ್ತೆಯಾಗಿರಲಿಲ್ಲ. ಬಳಿಕ ಮೃತದೇಹವನ್ನು ಪೊಲೀಸರು ವೆನ್ಲಾಕ್ ಆಸ್ಪತ್ರೆಯ ಶವಾಗಾರದಲ್ಲಿರಿಸಿದ್ದರು.
ಬಳಿಕ ಮೃತ ರಾಜೇಶ್ ಅವರು ಬಜಪೆಯವರಾಗಿದ್ದು, ಅವರಿಗೆ ತಂದೆ, ತಾಯಿ ಇಲ್ಲ. ಸಹೋದರಿ ಮಾತ್ರ ಇದ್ದಾರೆ ಎಂಬ ವಿಷಯ ತಿಳಿದುಬಂದಿದೆ. ನಂತರ ರಾಜೇಶ್ ಅವರ ಕುಟುಂಬಸ್ಥರು ಬಂದು ಮೃತದೇಹ ಕೊಂಡೊಯ್ದು ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ.
ರಾಜೇಶ್ ಅವರು ಮಂಗಳೂರಿನಲ್ಲೇ ರೂಮ್ನಲ್ಲಿ ಉಳಿದುಕೊಂಡು ಬಸ್ ನಿರ್ವಾಹಕನಾಗಿ ಕೆಲಸ ನಿರ್ವಹಿಸುತ್ತಿದ್ದರು. ರಾಜೇಶ್ ಹಣದ ವ್ಯವಹಾರವನ್ನು ಮಾಡುತ್ತಿದ್ದು, ಇದೇ ಕಾರಣದಿಂದ ಕೊಲೆ ನಡೆದಿರಬಹುದೋ ಅಥವಾ ಬೇರೆ ಯಾವುದೋ ಕಾರಣಕ್ಕೆ ಕೊಲೆ ಮಾಡಲಾಗಿದೆಯೋ ಎಂಬುದು ತನಿಖೆಯ ಬಳಿಕ ಬೆಳಕಿಗೆ ಬರಲಿದೆ. ಇನ್ನು ಸ್ಟೇಟ್ಬ್ಯಾಂಕ್ ಪರಿಸರದ ಸಿಸಿ ಕೆಮರಾ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲನೆ ನಡೆಸಿದ್ದು, ಆರೋಪಿಗಳ ಕುರಿತು ಸುಳಿವು ಸಿಕ್ಕಿದೆ ಎಂದು ಹೇಳಲಾಗುತ್ತಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…