ಮಂಗಳೂರು: ನಗರದ ಹ್ಯಾಮಿಲ್ಟನ್ ವೃತ್ತದ ಬಳಿಯ ಇಂದಿರಾ ಕ್ಯಾಂಟೀನ್ ಬಳಿ ನಡೆದ ಖಾಸಗಿ ಬಸ್ ನಿರ್ವಾಹಕ ರಾಜೇಶ್ ಕೊಲೆ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ.
ಮಂಗಳೂರು-ವಿಟ್ಲ ನಡುವೆ ಸಂಚರಿಸುವ ಖಾಸಗಿ ಬಸ್ನಲ್ಲಿ ನಿರ್ವಾಹಕರಾಗಿದ್ದ ರಾಜೇಶ್ ಅವರ ಮೃತದೇಹವು ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಘಟನೆ ಬೆಳಕಿಗೆ ಬರುತ್ತಿದ್ದಂತೆ ಮೃತದೇಹದ ಗುರುತು ಪತ್ತೆಯಾಗಿರಲಿಲ್ಲ. ಬಳಿಕ ಮೃತದೇಹವನ್ನು ಪೊಲೀಸರು ವೆನ್ಲಾಕ್ ಆಸ್ಪತ್ರೆಯ ಶವಾಗಾರದಲ್ಲಿರಿಸಿದ್ದರು.
ಬಳಿಕ ಮೃತ ರಾಜೇಶ್ ಅವರು ಬಜಪೆಯವರಾಗಿದ್ದು, ಅವರಿಗೆ ತಂದೆ, ತಾಯಿ ಇಲ್ಲ. ಸಹೋದರಿ ಮಾತ್ರ ಇದ್ದಾರೆ ಎಂಬ ವಿಷಯ ತಿಳಿದುಬಂದಿದೆ. ನಂತರ ರಾಜೇಶ್ ಅವರ ಕುಟುಂಬಸ್ಥರು ಬಂದು ಮೃತದೇಹ ಕೊಂಡೊಯ್ದು ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ.
ರಾಜೇಶ್ ಅವರು ಮಂಗಳೂರಿನಲ್ಲೇ ರೂಮ್ನಲ್ಲಿ ಉಳಿದುಕೊಂಡು ಬಸ್ ನಿರ್ವಾಹಕನಾಗಿ ಕೆಲಸ ನಿರ್ವಹಿಸುತ್ತಿದ್ದರು. ರಾಜೇಶ್ ಹಣದ ವ್ಯವಹಾರವನ್ನು ಮಾಡುತ್ತಿದ್ದು, ಇದೇ ಕಾರಣದಿಂದ ಕೊಲೆ ನಡೆದಿರಬಹುದೋ ಅಥವಾ ಬೇರೆ ಯಾವುದೋ ಕಾರಣಕ್ಕೆ ಕೊಲೆ ಮಾಡಲಾಗಿದೆಯೋ ಎಂಬುದು ತನಿಖೆಯ ಬಳಿಕ ಬೆಳಕಿಗೆ ಬರಲಿದೆ. ಇನ್ನು ಸ್ಟೇಟ್ಬ್ಯಾಂಕ್ ಪರಿಸರದ ಸಿಸಿ ಕೆಮರಾ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲನೆ ನಡೆಸಿದ್ದು, ಆರೋಪಿಗಳ ಕುರಿತು ಸುಳಿವು ಸಿಕ್ಕಿದೆ ಎಂದು ಹೇಳಲಾಗುತ್ತಿದೆ.
ಗುರುಪುರ : ಆ. 3ರಿಂದ ಸೆ. 6ರವರೆಗೆ ವಜ್ರದೇಹಿ ಮಠದಲ್ಲಿ ಶ್ರೀಪಾದರ 27ನೇ ಚಾತುರ್ಮಾಸ್ಯ ವ್ರತಾಚರಣೆ ಗುರುಪುರ : ಶ್ರೀ…
*ನಾಳೆ (ಅಗಸ್ಟ್ 01 ಶನಿವಾರ) ರಂದು ಉಡುಪಿ ಮಲಬಾರ್ ಗೋಲ್ಡ್ ನಲ್ಲಿ ರಕ್ತದಾನ ಶಿಬಿರ* ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್,…
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…