Featured

ಮಂಗಳೂರು: ಖಾಸಗಿ ಬಸ್ ನಿರ್ವಾಹಕನ ಕೊಲೆ ಪ್ರಕರಣ; ತನಿಖೆ ಚುರುಕುಗೊಳಿಸಿದ ಪೊಲೀಸರು – vishwanews24

ಮಂಗಳೂರು: ಖಾಸಗಿ ಬಸ್ ನಿರ್ವಾಹಕನ ಕೊಲೆ ಪ್ರಕರಣ; ತನಿಖೆ ಚುರುಕುಗೊಳಿಸಿದ ಪೊಲೀಸರು

ಮಂಗಳೂರು: ನಗರದ ಹ್ಯಾಮಿಲ್ಟನ್ ವೃತ್ತದ ಬಳಿಯ ಇಂದಿರಾ ಕ್ಯಾಂಟೀನ್ ಬಳಿ ನಡೆದ ಖಾಸಗಿ ಬಸ್ ನಿರ್ವಾಹಕ ರಾಜೇಶ್ ಕೊಲೆ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ.

ಮಂಗಳೂರು-ವಿಟ್ಲ ನಡುವೆ ಸಂಚರಿಸುವ ಖಾಸಗಿ ಬಸ್‌ನಲ್ಲಿ ನಿರ್ವಾಹಕರಾಗಿದ್ದ ರಾಜೇಶ್ ಅವರ ಮೃತದೇಹವು ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಘಟನೆ ಬೆಳಕಿಗೆ ಬರುತ್ತಿದ್ದಂತೆ ಮೃತದೇಹದ ಗುರುತು ಪತ್ತೆಯಾಗಿರಲಿಲ್ಲ. ಬಳಿಕ ಮೃತದೇಹವನ್ನು ಪೊಲೀಸರು ವೆನ್ಲಾಕ್ ಆಸ್ಪತ್ರೆಯ ಶವಾಗಾರದಲ್ಲಿರಿಸಿದ್ದರು.

ಬಳಿಕ ಮೃತ ರಾಜೇಶ್ ಅವರು ಬಜಪೆಯವರಾಗಿದ್ದು, ಅವರಿಗೆ ತಂದೆ, ತಾಯಿ ಇಲ್ಲ. ಸಹೋದರಿ ಮಾತ್ರ ಇದ್ದಾರೆ ಎಂಬ ವಿಷಯ ತಿಳಿದುಬಂದಿದೆ. ನಂತರ ರಾಜೇಶ್ ಅವರ ಕುಟುಂಬಸ್ಥರು ಬಂದು ಮೃತದೇಹ ಕೊಂಡೊಯ್ದು ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ.

ರಾಜೇಶ್ ಅವರು ಮಂಗಳೂರಿನಲ್ಲೇ ರೂಮ್‌ನಲ್ಲಿ ಉಳಿದುಕೊಂಡು ಬಸ್ ನಿರ್ವಾಹಕನಾಗಿ ಕೆಲಸ ನಿರ್ವಹಿಸುತ್ತಿದ್ದರು. ರಾಜೇಶ್ ಹಣದ ವ್ಯವಹಾರವನ್ನು ಮಾಡುತ್ತಿದ್ದು, ಇದೇ ಕಾರಣದಿಂದ ಕೊಲೆ ನಡೆದಿರಬಹುದೋ ಅಥವಾ ಬೇರೆ ಯಾವುದೋ ಕಾರಣಕ್ಕೆ ಕೊಲೆ ಮಾಡಲಾಗಿದೆಯೋ ಎಂಬುದು ತನಿಖೆಯ ಬಳಿಕ ಬೆಳಕಿಗೆ ಬರಲಿದೆ. ಇನ್ನು ಸ್ಟೇಟ್‌ಬ್ಯಾಂಕ್ ಪರಿಸರದ ಸಿಸಿ ಕೆಮರಾ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲನೆ ನಡೆಸಿದ್ದು, ಆರೋಪಿಗಳ ಕುರಿತು ಸುಳಿವು ಸಿಕ್ಕಿದೆ ಎಂದು ಹೇಳಲಾಗುತ್ತಿದೆ.

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

5 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

5 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

5 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

6 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

10 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

10 hours ago