ಮಂಗಳೂರು: ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪದ್ಮಶ್ರೀ ಪುರಸ್ಕೃತ ಅಮೈ ಮಹಾಲಿಂಗ ನಾಯ್ಕರಿಗೆ ಸನ್ಮಾನ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪದ್ಮಶ್ರೀ ಪುರಸ್ಕೃತ ಅಮೈ ಮಹಾಲಿಂಗ ನಾಯ್ಕರಿಗೆ ಸನ್ಮಾನ – Vishwanews24

ಮಂಗಳೂರು: ಇಲ್ಲಿನ ನೆಹರೂ ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ 2022ನೇ ಸಾಲಿನ ಪದ್ಮಶ್ರೀ ಪುರಸ್ಕೃತರಲ್ಲಿ ಒಬ್ಬರಾದ, ಜಿಲ್ಲೆಯ ಕೃಷಿಕ ಅಮೈ ಮಹಾಲಿಂಗ ನಾಯ್ಕ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್‌ ಕುಮಾರ್‌ ಅವರು ಸನ್ಮಾನಿಸಿದರು.

ಸಚಿವ ಸುನಿಲ್‌ ಕುಮಾರ್‌ ಅವರು ರಾಷ್ಟ್ರ ಧ್ವಜಾರೋಹಣ ನಡೆಸಿದರು. ಧ್ವಜವಂದನೆ ಸ್ವೀಕರಿಸಿದ ಬಳಿಕ ಅವರು ಗಣರಾಜ್ಯೋತ್ಸವದ ಸಂದೇಶ ನೀಡಿದರು.

ಶಾಸಕ ವೇದವ್ಯಾಸ ಕಾಮತ್, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು, ಜಿಲ್ಲಾಧಿಕಾರಿ ಡಾ. ರಾಜೇಂದ್ರಕೆ.ವಿ., ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಭಗವಾನ್ ಸೊನಾವಣೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಜನಪ್ರತಿನಿಧಿಗಳು, ಅಧಿಕಾರಿಗಳು ಇದ್ದರು.

 

ಮಂಗಳೂರು ವಿಮಾನ ನಿಲ್ದಾಣ :  ಅಕ್ರಮವಾಗಿ ಸಾಗಿಸುತ್ತಿದ್ದ 29,14,160 ಮೌಲ್ಯದ ಚಿನ್ನ ವಶ – Vishwanews24

Leave a Reply