ಮಂಗಳೂರು: ಗಣೇಶೋತ್ಸವ ಆಚರಣೆಗೆ ವಿಚಿತ್ರ ನೀತಿ ನಿಯಮದ ಮೂಲಕ ಗೊಂದಲ ಸೃಷ್ಟಿ : ಸರ್ಕಾರದ ವಿರುದ್ಧ ವೇದವ್ಯಾಸ ಕಾಮತ್ ಕಿಡಿ – vishwanews24
ಮಂಗಳೂರು: ಗಣೇಶೋತ್ಸವ ಆಚರಣೆಗೆ ವಿಚಿತ್ರ ನೀತಿ ನಿಯಮದ ಮೂಲಕ ಗೊಂದಲ ಸೃಷ್ಟಿ : ಸರ್ಕಾರದ ವಿರುದ್ಧ ವೇದವ್ಯಾಸ ಕಾಮತ್ ಕಿಡಿ
ಮಂಗಳೂರು: ಯಾವುದೇ ಭೇದವಿಲ್ಲದೆ ಸಾಮರಸ್ಯದಿಂದ ಆಚರಿಸುವ ಗಣೇಶ ಚತುರ್ಥಿ ಹಬ್ಬಕ್ಕೆ ಎಲ್ಲೆಡೆ ಸಂಭ್ರಮ ಮನೆ ಮಾಡಿದೆ. ಆದರೆ ಕಡಲನಗರಿ ಮಂಗಳೂರಿನಲ್ಲಿ ವಿಘ್ನ ವಿನಾಯಕನ ಹಬ್ಬ ಆಚರಣೆಗೆ ಈಗ ವಿಘ್ನವೊಂದು ಎದುರಾಗಿದೆ. ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಚಿತ್ರ ವಿಚಿತ್ರ ನೀತಿ ನಿಯಮ ಹೇರುವ ಮೂಲಕ ಗೊಂದಲ ಸೃಷ್ಟಿಸಿದ್ದಾರೆ ಎಂದು ಆರೋಪಿಸಿ ರಾಜ್ಯ ಸರ್ಕಾರದ ವಿರುದ್ಧ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಕಿಡಿಕಾರಿದ್ದಾರೆ.
ರಾಜ್ಯ ಸರಕಾರ ವಿಘ್ನ ವಿನಾಯಕನಿಗೆ ಈಗ ವಿಘ್ನ ತಂದಿರಿಸಿದೆ. ಗಣೇಶ ವಿಗ್ರಹ ಪ್ರತಿಷ್ಠಾಪನೆಗೆ ಅನುಮತಿ ಕೋರಿದರೆ ಚಿತ್ರವಿಚಿತ್ರ ನಿಯಮ ಹೇರಲಾಗುತ್ತಿದೆ. ಆಯೋಜಕರಿಗೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಗಣ್ಯರ, ಅತಿಥಿಗಳ ಹೆಸರು, ಮೊಬೈಲ್ ಸಂಖ್ಯೆ ನೀಡಲು ಹೇಳಲಾಗುತ್ತಿದೆ. ಅವರ ವಿಳಾಸ ನೀಡಬೇಕು, ಭಾಗವಹಿಸುವ ಟ್ಯಾಬ್ಲೊಗಳ ತಂಡ ಯಾವುದು? ಸೂಚಿಸಬೇಕು. ಯಾವ ವಾಹನದಲ್ಲಿ ಬರುತ್ತಾರೆ? ಅದರ ದಾಖಲೆ ನೀಡಬೇಕು, ಲೈಸೆನ್ಸ್ ನೀಡಬೇಕು ಎಂದು ಅರ್ಥ ವಿಲ್ಲದ ಸೂಚನೆಗಳನ್ನು ಸರ್ಕಾರ ನೀಡುತ್ತಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಆಕ್ರೋಶ ಹೊರ ಹಾಕಿದ್ದಾರೆ.
ತೆಲುಗು ಬಿಗ್ ಬಾಸ್ 8ಗೆ ಎಂಟ್ರಿ ಕೊಟ್ಟ ಮಂಗಳೂರಿನ ಯುವಕ ಪೃಥ್ವಿ ಶೆಟ್ಟಿ – vishwanews24
ಇನ್ನು ಕಾಂಗ್ರೆಸ್ಸಿಗರಿಗೆ ಗಣೇಶನ ಮೇಲೆ, ಹಿಂದೂ ಹಬ್ಬಗಳ ಮೇಲೆ ಯಾಕಿಷ್ಟು ಕೋಪ? ಕೂಡಲೇ ಇದನ್ನೆಲ್ಲ ಬಿಟ್ಟು ಹಿಂದೂ ಧಾರ್ಮಿಕ ಭಾವನೆಗಳಿಗೆ ಬೆಲೆ ನೀಡಬೇಕು ಎಂದು ಮಂಗಳೂರಿನಲ್ಲಿ ವೇದವ್ಯಾಸ್ ಕಾಮತ್ ಒತ್ತಾಯಿಸಿದ್ದಾರೆ.
