ಮಂಗಳೂರು: ಯಾವುದೇ ಭೇದವಿಲ್ಲದೆ ಸಾಮರಸ್ಯದಿಂದ ಆಚರಿಸುವ ಗಣೇಶ ಚತುರ್ಥಿ ಹಬ್ಬಕ್ಕೆ ಎಲ್ಲೆಡೆ ಸಂಭ್ರಮ ಮನೆ ಮಾಡಿದೆ. ಆದರೆ ಕಡಲನಗರಿ ಮಂಗಳೂರಿನಲ್ಲಿ ವಿಘ್ನ ವಿನಾಯಕನ ಹಬ್ಬ ಆಚರಣೆಗೆ ಈಗ ವಿಘ್ನವೊಂದು ಎದುರಾಗಿದೆ. ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಚಿತ್ರ ವಿಚಿತ್ರ ನೀತಿ ನಿಯಮ ಹೇರುವ ಮೂಲಕ ಗೊಂದಲ ಸೃಷ್ಟಿಸಿದ್ದಾರೆ ಎಂದು ಆರೋಪಿಸಿ ರಾಜ್ಯ ಸರ್ಕಾರದ ವಿರುದ್ಧ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಕಿಡಿಕಾರಿದ್ದಾರೆ.
ರಾಜ್ಯ ಸರಕಾರ ವಿಘ್ನ ವಿನಾಯಕನಿಗೆ ಈಗ ವಿಘ್ನ ತಂದಿರಿಸಿದೆ. ಗಣೇಶ ವಿಗ್ರಹ ಪ್ರತಿಷ್ಠಾಪನೆಗೆ ಅನುಮತಿ ಕೋರಿದರೆ ಚಿತ್ರವಿಚಿತ್ರ ನಿಯಮ ಹೇರಲಾಗುತ್ತಿದೆ. ಆಯೋಜಕರಿಗೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಗಣ್ಯರ, ಅತಿಥಿಗಳ ಹೆಸರು, ಮೊಬೈಲ್ ಸಂಖ್ಯೆ ನೀಡಲು ಹೇಳಲಾಗುತ್ತಿದೆ. ಅವರ ವಿಳಾಸ ನೀಡಬೇಕು, ಭಾಗವಹಿಸುವ ಟ್ಯಾಬ್ಲೊಗಳ ತಂಡ ಯಾವುದು? ಸೂಚಿಸಬೇಕು. ಯಾವ ವಾಹನದಲ್ಲಿ ಬರುತ್ತಾರೆ? ಅದರ ದಾಖಲೆ ನೀಡಬೇಕು, ಲೈಸೆನ್ಸ್ ನೀಡಬೇಕು ಎಂದು ಅರ್ಥ ವಿಲ್ಲದ ಸೂಚನೆಗಳನ್ನು ಸರ್ಕಾರ ನೀಡುತ್ತಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಆಕ್ರೋಶ ಹೊರ ಹಾಕಿದ್ದಾರೆ.
ಇನ್ನು ಕಾಂಗ್ರೆಸ್ಸಿಗರಿಗೆ ಗಣೇಶನ ಮೇಲೆ, ಹಿಂದೂ ಹಬ್ಬಗಳ ಮೇಲೆ ಯಾಕಿಷ್ಟು ಕೋಪ? ಕೂಡಲೇ ಇದನ್ನೆಲ್ಲ ಬಿಟ್ಟು ಹಿಂದೂ ಧಾರ್ಮಿಕ ಭಾವನೆಗಳಿಗೆ ಬೆಲೆ ನೀಡಬೇಕು ಎಂದು ಮಂಗಳೂರಿನಲ್ಲಿ ವೇದವ್ಯಾಸ್ ಕಾಮತ್ ಒತ್ತಾಯಿಸಿದ್ದಾರೆ.
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…