ಮಂಗಳೂರು: ಗಣೇಶೋತ್ಸವ ಸಂಭ್ರಮ ಆರಂಭವಾಗಿದ್ದು, ಮಂಗಳೂರು ನಗರ ಪೊಲೀಸ್ ವ್ಯಾಪ್ತಿಯಲ್ಲಿ ಸಂಪೂರ್ಣ ಬಂದೋಬಸ್ತ್ ಮಾಡಲಾಗಿದೆ. ಸಾರ್ವಜನಿಕರು ಈಗಾಗಲೇ ಗಣೇಶೋತ್ಸವಕ್ಕೆ ಸಂಬಂಧಿಸಿ ಸರಕಾರ ನೀಡಿರುವ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ಗಣೇಶೋತ್ಸವ ಆಚರಿಸಬೇಕು ಎಂದು ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಸುದ್ದಿಗೋಷ್ಠಿಯಲ್ಲಿಂದು ಮನವಿ ಮಾಡಿದ್ದಾರೆ.
ಕೋವಿಡ್ನ ಈ ಸಂದರ್ಭದಲ್ಲಿ ಜನರು ಈ ರೋಗದ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕಾಗಿದೆ. ಇಲಾಖೆಯಿಂದ ಬಂದೋಬಸ್ತ್ ಹಿನ್ನೆಲೆಯಲ್ಲಿ ಕೆಎಸ್ಆರ್ಪಿ, ಸಿಎಆರ್, ಆರ್ಎಎಫ್ ತಂಡಗಳನ್ನು ನಿಯೋಜಿಸಲಾಗಿದೆ. ಡಿಸಿಪಿ ನೇತೃತ್ವದಲ್ಲಿ ಈಗಾಗಲೇ ರೂಟ್ ಮಾರ್ಚ್ಗಳನ್ನು ನಡೆಸಲಾಗುತ್ತಿದೆ. ಉಳ್ಳಾಲದಲ್ಲಿ ನಿನ್ನೆ ನಡೆದಿದ್ದು, ಸುರತ್ಕಲ್ನಲ್ಲಿಯೂ ನಡೆಸಲಾಗುವುದು. ಆಚರಣೆಯನ್ನು ಶಾಂತವಾಗಿ, ಸುರಕ್ಷಿತವಾಗಿ ಆಚರಿಸುವ ನಿಟ್ಟಿನಲ್ಲಿ ಈಗಾಗಲೇ ಗಣ್ಯ ವಕ್ತಿಗಳ ಶಾಂತಿ ಸಭೆಯನ್ನು ಮಾಡಲಾಗಿದೆ. ಬೀಟ್ ಮಟ್ಟದಿಂದ ಪೊಲೀಸ್ ಆಯುಕ್ತಾಲಯದವರೆಗಿನ ಸಂಪರ್ಕ ಸಂಖ್ಯೆಗಳಿಗೆ ಯಾವುದೇ ಸಮಸ್ಯೆ, ಅನುಮಾನಗಳಿಗೆ ಸಾರ್ವಜನಿಕರು ಕರೆ ಮಾಡಬಹುದಾಗಿದೆ. ಜಿಲ್ಲಾ ಪೊಲೀಸರ ಸಹಭಾಗಿತ್ವದೊಂದಿಗೆ ನಗರ ಪೊಲೀಸರು ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ತಿಳಿಸಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…