ಮಂಗಳೂರು: ಗಣೇಶೋತ್ಸವ ಸಂಭ್ರಮ ಆರಂಭವಾಗಿದ್ದು, ಮಂಗಳೂರು ನಗರ ಪೊಲೀಸ್ ವ್ಯಾಪ್ತಿಯಲ್ಲಿ ಸಂಪೂರ್ಣ ಬಂದೋಬಸ್ತ್ ಮಾಡಲಾಗಿದೆ. ಸಾರ್ವಜನಿಕರು ಈಗಾಗಲೇ ಗಣೇಶೋತ್ಸವಕ್ಕೆ ಸಂಬಂಧಿಸಿ ಸರಕಾರ ನೀಡಿರುವ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ಗಣೇಶೋತ್ಸವ ಆಚರಿಸಬೇಕು ಎಂದು ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಸುದ್ದಿಗೋಷ್ಠಿಯಲ್ಲಿಂದು ಮನವಿ ಮಾಡಿದ್ದಾರೆ.
ಕೋವಿಡ್ನ ಈ ಸಂದರ್ಭದಲ್ಲಿ ಜನರು ಈ ರೋಗದ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕಾಗಿದೆ. ಇಲಾಖೆಯಿಂದ ಬಂದೋಬಸ್ತ್ ಹಿನ್ನೆಲೆಯಲ್ಲಿ ಕೆಎಸ್ಆರ್ಪಿ, ಸಿಎಆರ್, ಆರ್ಎಎಫ್ ತಂಡಗಳನ್ನು ನಿಯೋಜಿಸಲಾಗಿದೆ. ಡಿಸಿಪಿ ನೇತೃತ್ವದಲ್ಲಿ ಈಗಾಗಲೇ ರೂಟ್ ಮಾರ್ಚ್ಗಳನ್ನು ನಡೆಸಲಾಗುತ್ತಿದೆ. ಉಳ್ಳಾಲದಲ್ಲಿ ನಿನ್ನೆ ನಡೆದಿದ್ದು, ಸುರತ್ಕಲ್ನಲ್ಲಿಯೂ ನಡೆಸಲಾಗುವುದು. ಆಚರಣೆಯನ್ನು ಶಾಂತವಾಗಿ, ಸುರಕ್ಷಿತವಾಗಿ ಆಚರಿಸುವ ನಿಟ್ಟಿನಲ್ಲಿ ಈಗಾಗಲೇ ಗಣ್ಯ ವಕ್ತಿಗಳ ಶಾಂತಿ ಸಭೆಯನ್ನು ಮಾಡಲಾಗಿದೆ. ಬೀಟ್ ಮಟ್ಟದಿಂದ ಪೊಲೀಸ್ ಆಯುಕ್ತಾಲಯದವರೆಗಿನ ಸಂಪರ್ಕ ಸಂಖ್ಯೆಗಳಿಗೆ ಯಾವುದೇ ಸಮಸ್ಯೆ, ಅನುಮಾನಗಳಿಗೆ ಸಾರ್ವಜನಿಕರು ಕರೆ ಮಾಡಬಹುದಾಗಿದೆ. ಜಿಲ್ಲಾ ಪೊಲೀಸರ ಸಹಭಾಗಿತ್ವದೊಂದಿಗೆ ನಗರ ಪೊಲೀಸರು ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ತಿಳಿಸಿದರು.
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…
ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…
ಟೋಲ್ ಪ್ಲಾಜಾಗೆ ಎಲ್ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…
ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್ ದ್ರಾವಿಡ್ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್ ಆಟಗಾರ, ಟೀಂ…
ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…
ಬೆಂಗಳೂರು: ಡೇ ಕೇರ್ ಸೆಂಟರ್ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್ಫೀಲ್ಡ್ನಲ್ಲಿರುವ ಡೇಕೇರ್ ಸೆಂಟರ್…