ಮಂಗಳೂರು: ಗಣೇಶ ಚತುರ್ಥಿ ಆಚರಣೆಗೆ ಸೆ.19ಕ್ಕೆ ರಜೆ ನೀಡಲು ಸಚಿವರ ಸೂಚನೆ – Vishwanews24
ಮಂಗಳೂರು: ಗಣೇಶ ಚತುರ್ಥಿ ಆಚರಣೆಗೆ ಸೆ.19ಕ್ಕೆ ರಜೆ ನೀಡಲು ಸಚಿವರ ಸೂಚನೆ
ಮಂಗಳೂರು: ಗಣೇಶ ಚತುರ್ಥಿ ಆಚರಣೆಗೆ ಅನುಕೂಲವಾಗುವಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸರಕಾರಿ ರಜೆಯನ್ನು ಸೆ. 18ರ ಬದಲು 19ರಂದು ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಸರಕಾರದ ಮುಖ್ಯ ಕಾರ್ಯದರ್ಶಿ ಹಾಗೂ ದ.ಕ.
ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ.
ಉಡುಪಿ ಜಿಲ್ಲೆಯ ಕಾರ್ಕಳ ಸೇರಿದಂತೆ ಕರ್ನಾಟಕದ 161 ತಾಲೂಕು ಬರಪೀಡಿತ ಎಂದು ಘೋಷಣೆ – Vishwanews24
ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಮನವಿ ಮೇರೆಗೆ ಸಚಿವರು ಈ ಸೂಚನೆ ನೀಡಿದ್ದಾರೆ. ಉಡುಪಿ ಜಿಲ್ಲೆಯ ರಜೆ ಬದಲಾವಣೆ ಕುರಿತಂತೆ ನಿರ್ಧಾರ ಇನ್ನೂ ಆಗಿಲ್ಲ.
ಯು.ಟಿ. ಖಾದರ್ ಮನವಿ
ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಗಣೇಶೋತ್ಸವವನ್ನು ಸೆ. 19ರಂದು ಆಚರಿಸಲಾಗುವ ಹಿನ್ನೆಲೆಯಲ್ಲಿ ಸಾರ್ವತ್ರಿಕ ರಜೆಯನ್ನು ಸೆ. 19ರಂದೇ ನೀಡುವಂತೆ ಸ್ಪೀಕರ್ ಖಾದರ್ ಅವರಲ್ಲಿ ಕೋರಿದ್ದ ಹಿನ್ನೆಲೆಯಲ್ಲಿ ತತ್ಕ್ಷಣವೇ ಸ್ಪಂದಿಸಿದ ಅವರು ಸಿಎಂ ಸಿದ್ದರಾಮಯ್ಯ ಅವರಲ್ಲಿ ಮಾತುಕತೆ ನಡೆಸಿ ಸೆ. 19ರಂದೇ ರಜೆ ನೀಡುವ ಆಶಾಭಾವ ವ್ಯಕ್ತಪಡಿಸಿದ್ದಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ತಿಳಿಸಿದ್ದಾರೆ.
ಸ್ವಾಮೀಜಿ ಸಿಕ್ಕಿ ಹಾಕಿಕೊಳ್ಳಲಿ, ಇನ್ನೂ ದೊಡ್ಡ ದೊಡ್ಡ ಹೆಸರು ಹೊರಗೆ ಬರುತ್ತದೆ : ಚೈತ್ರಾ ಕುಂದಾಪುರ – Vishwanews24
