ಮಂಗಳೂರು:ವಿದ್ಯುತ್ ಆಘಾತಕ್ಕೆ ಒಳಗಾಗಿ ಯುವತಿಯೊಬ್ಬಳು ಮೃತಪಟ್ಟ ದಾರುಣ ಘಟನೆ ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಳೂರು ಗ್ರಾಮದ ಕಲ್ಲಕಲಂಬಿ ಎಂಬಲ್ಲಿ ಶುಕ್ರವಾರ ಬೆಳಗ್ಗೆ ನಡೆದಿರುವುದು ವರದಿಯಾಗಿದೆ.
ಕಲ್ಲಕಲಂಬಿ ನಿವಾಸಿ ಹರೀಶ್ ಶೆಟ್ಟಿ ಎಂಬವರ ಪುತ್ರಿ ಆಶ್ನಿ ಶೆಟ್ಟಿ (20) ಮೃತಪಟ್ಟವರು. ಇವರು ಸಿಎ ಅಭ್ಯಾಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಹರೀಶ್ ಸಣ್ಣ ಪ್ರಮಾಣದ ಹೈನುಗಾರಿಕೆ ನಡೆಸುತ್ತಿದ್ದು ಎಂದಿನಂತೆ ಶುಕ್ರವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ದನಗಳನ್ನು ಮೇಯಿಸಲು ಮನೆಯಿಂದ ಹೊರಟಿದ್ದರು. ಈ ವೇಳೆ ಅವರೊಂದಿಗೆ ಮನೆಯ ನಾಯಿಯೂ ತೆರಳಿತ್ತು.
ತಂದೆಯೊಂದಿಗೆ ಹೊರಟಿದ್ದ ನಾಯಿಯನ್ನು ಕರೆತರಳೆಂದು ಆಶ್ನಿ ತೆರಳಿದ್ದರು. ನಾಯಿ ನೀರು ತುಂಬಿದ್ದ ಗದ್ದೆಗೆ ಇಳಿದಾಗ ಆಶ್ನಿ ಕೂಡಾ ಗದ್ದೆಗೆ ಕಾಲಿಟ್ಟಿದ್ದಾಳೆ. ಈ ವೇಳೆ ವಿದ್ಯುತ್ ಆಘಾತ ಸಂಭವಿಸಿ ಆಶ್ನಿ ಸ್ಥಳದಲ್ಲೇ ಮೃತಪಟ್ಟರೆಂದು ತಿಳಿದುಬಂದಿದೆ.
ಗದ್ದೆಯಲ್ಲಿದ್ದ ವಿದ್ಯುತ್ ಕಂಬದಿಂದ ವಿದ್ಯುತ್ ಪ್ರವಹಿಸುತ್ತಿದ್ದ ತಂತಿಯೊಂದು ತುಂಡಾಗಿ ಗದ್ದೆಗೆ ಬಿದ್ದಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.
ಘಟನೆ ನಡೆದ ತಕ್ಷಣ ಸ್ಥಳೀಯರು ಮೆಸ್ಕಾಂಗೆ ಮಾಹಿತಿ ನೀಡಿದ್ದು, ವಿದ್ಯುತ್ ಕಡಿತಗೊಳಿಸಿದ ಬಳಿಕ ನಾಯಿ ಮತ್ತು ಆಶ್ನಿ ಮೃತದೇಹವನ್ನು ನೀರಿನಿಂದ ಹೊರತೆಗೆಯಲಾಯಿತು ಎಂದು ತಿಳಿದುಬಂದಿದೆ.
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…