ಮಂಗಳೂರು: ಜಿಲ್ಲೆಯಲ್ಲಿ ಗಲಭೆ ಮಾಡಲು ಪ್ರತಿಭಟನಾಕಾರರು ಮೊದಲೇ ಪ್ಲಾನ್ ಮಾಡಿದ್ದರು. ಗಲಭೆಗೂ ಮುನ್ನ ಗೂಡ್ಸ್ ಆಟೋದಲ್ಲಿ ಗೋಣಿಚೀಲಗಳಲ್ಲಿ ಕಲ್ಲುಗಳನ್ನು ತರೆಸಿಟ್ಟುಕೊಂಡಿದ್ದರು ಎನ್ನುವುದಕ್ಕೆ ಸಿಸಿಟಿವಿ ದೃಶ್ಯಾವಳಿವೊಂದು ಸಾಕ್ಷಿಯಾಗಿದೆ.
ಮಂಗಳೂರು ಗೊಲಿಬಾರ್ ನಲ್ಲಿ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಹಲವು ಪೊಲೀಸ್ ಸಿಬ್ಬಂದಿ ಹಾಗೂ ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ. ಆದರೆ ಈ ಗಲಭೆ ನಡೆಸಲು ಕೆಲ ಪ್ರತಿಭಟನಾಕಾರರ ಗುಂಪು ಮೊದಲೇ ಪ್ಲಾನ್ ಮಾಡಿಕೊಂಡಿತ್ತು. ಗಲಭೆಗೂ ಮುನ್ನ ಕೆಲ ಗುಂಪು ಗೂಡ್ಸ್ ಆಟೋದಲ್ಲಿ ಕಲ್ಲುಗಳನ್ನು ತರೆಸಿಕೊಂಡಿದ್ದರು. ಗೋಣಿಚೀಲಗಳಲ್ಲಿ ಈ ಕಲ್ಲುಗಳನ್ನು ತುಂಬಿಸಿಡಲಾಗಿತ್ತು. ಈ ದೃಶ್ಯಾವಳಿಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಕೆಲ ಪ್ರತಿಭಟನಾಕಾರರು ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಕಲ್ಲು ತೂರಾಟ ನಡೆಸಲಾರಂಭಿಸಿದ್ದರು. ಬಳಿಕ ಸಿಸಿ ಕ್ಯಾಮೆರಾಗಳನ್ನು ಒಡೆದು ಹಾಕಿದ್ದರು. ಹೀಗಾಗಿ ಕೆಲವರು ಮೊದಲೇ ಗಲಭೆಗೆ ತಯಾರಿ ನಡೆಸಿಕೊಂಡೇ ಬಂದಿದ್ದರು ಎಂದು ಸಿಸಿಟಿವಿ ದೃಶ್ಯಗಳು ಬಯಲು ಮಾಡಿದೆ.
ಯುವಕರಿದ್ದ ಒಂದು ಗುಂಪು ಪ್ರತಿಭಟನೆ ವೇಳೆ ಗಲಭೆ ನಡೆಸಲೆಂದೆ ಕಲ್ಲು ತಂದು ಹಾಕಿದರೆ, ಇನ್ನೊಂದು ಗುಂಪು ಸಿಸಿಟಿವಿಗಳನ್ನು ಒಡೆದು ಹಾಕಿ ಗಲಭೆ ಮಾಡಲು ಯತ್ನಿಸಿದ ದೃಶ್ಯಗಳು ಕೂಡ ಲಭ್ಯವಾಗಿದೆ. ಕಲ್ಲು ತೂರಾಟ ನಡೆಸುತ್ತಿದ್ದ ವೇಳೆ ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಪ್ರತಿಭಟನಾಕಾರರು ಒಡೆಯಲು ಯತ್ನಿಸಿರುವುದು, ಮನೆಗಳ ಮುಂದಿದ್ದ ಕ್ಯಾಮೆರಾಗಳನ್ನು ತಿರುಗಿಸಿ ಹೋಗಿರುವ ದೃಶ್ಯಗಳು ಸೆರೆಯಾಗಿವೆ. ಅಷ್ಟೇ ಅಲ್ಲದೆ ಪೊಲೀಸ್ ವ್ಯಾನ್ ಬರುವುದನ್ನು ಗಮನಿಸಿ ರಸ್ತೆಗೆ ಅಡ್ಡವಾಗಿ ಕಬ್ಬಿಣದ ಕಂಬಗಳನ್ನು ಹಾಕಿ ಓಡಿಹೋಗಿರುವ ದೃಶ್ಯಾವಳಿಗಳು ಕೂಡ ಲಭ್ಯವಾಗಿದೆ.
ಪೊಲೀಸರ ಮನವಿ
ಫೋಟೋ – ವಿಡಿಯೋಗಳನ್ನು ಬಿಡುಗಡೆ ಮಾಡಿರುವ ಪೊಲೀಸರು, ದಂಗೆಕೋರರ ಬಗ್ಗೆ ಮಾಹಿತಿ ತಿಳಿದವರು ತಿಳಿಸುವಂತೆ ಮನವಿ ಮಾಡಿದ್ದಾರೆ. ದಂಗೆಕೋರರ ಮಾಹಿತಿ ಮತ್ತು ಅವರು ಇರುವ ಸ್ಥಳದ ಬಗ್ಗೆ ಮಾಹಿತಿ ನೀಡಿದವರ ವಿವರಗಳನ್ನು ಗೌಪ್ಯವಾಗಿ ಇರಿಸುವುದಾಗಿ ಪ್ರಕಟಿಸಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…